ರಾಖಿ ಸಾವಂತ್ ವಿರುದ್ಧ 10 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದ ತನುಶ್ರೀ ದತ್ತಾ
ಮುಂಬೈ, ಅಕ್ಟೋಬರ್ 22: 2008ರಲ್ಲಿ ಹಾರ್ನ್ ಓಕೆ ಪ್ಲೀಸ್ ಸಿನಿಮಾ ಸೆಟ್ ಗೆ ಮಾದಕ ದ್ರವ್ಯ ಸೇವಿಸಿ, ನಟಿ ತನುಶ್ರೀ ದತ್ತಾ ಬಂದಿದ್ದರು ಎಂದು ಆರೋಪಿಸಿದ್ದ ರಾಖಿ ಸಾವಂತ್ ವಿರುದ್ಧ 10 ಕೋಟಿ ರುಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತನುಶ್ರೀ ದತ್ತಾ ಅವರ ವಕೀಲರು ಈ ವಿಚಾರವನ್ನು ಮಾಧ್ಯಮಕ್ಕೆ ಖಚಿತಪಡಿಸಿದ್ದಾರೆ.
"ತನುಶ್ರೀ ದತ್ತಾ ಪರವಾಗಿ ನಾವು ಹತ್ತು ಕೋಟಿ ರುಪಾಯಿಯ ಸಿವಿಲ್ ಹಾಗೂ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರಾಖಿ ಸಾವಂತ್ ವಿರುದ್ಧ ಹೂಡಿದ್ದೇವೆ. ನನ್ನ ಕಕ್ಷೀದಾರರ ಚಾರಿತ್ರ್ಯ ಹಾಗೂ ವರ್ಚಸ್ಸಿಗೆ ಧಕ್ಕೆ ತರುವಂಥ ಹೇಳಿಕೆ ನೀಡಿದ ರಾಖಿ ಸಾವಂತ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವುದು ಹೌದು" ಎಂದು ವಕೀಲರಾದ ನಿತೀನ್ ಸತ್ಪುತೆ ಮಾಹಿತಿ ನೀಡಿದ್ದಾರೆ.
ತನುಶ್ರೀ ದತ್ತಾ ವಿವಾದದ ಬಗ್ಗೆ ಕಾಮೆಂಟ್ ಮಾಡಿದ ಬಾಯಿಬಡುಕಿ ರಾಖಿ ಸಾವಂತ್.!
ಹಾರ್ನ್ ಓಕೆ ಪ್ಲೀಸ್ ಸಿನಿಮಾ ಚಿತ್ರೀಕರಣದ ವೇಳೆ ನಟ ನಾನಾ ಪಾಟೇಕರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ತನುಶ್ರೀ ದತ್ತಾ ಆರೋಪಿಸಿದ್ದರು. ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ ಹಾಗೂ ಸಿನಿಮಾ ನಿರ್ಮಾಪಕರ ವಿರುದ್ಧ ಕೂಡ ಆರೋಪ ಮಾಡಿದ್ದರು.

ಯಾವಾಗ ನಾನಾ ಪಾಟೇಕರ್ ನಡವಳಿಕೆ ವಿರುದ್ಧ ಧ್ವನಿ ಎತ್ತಿದೆನೋ ಆಗ ರೌಡಿಗಳನ್ನು ಕರೆಸಿ, ತನ್ನ ಕಾರಿನ ಮೇಲೆ ದಾಳಿ ಮಾಡಿಸಿದ್ದರು ಎಂದು ಕೂಡ ಆರೋಪಿಸಿದ್ದರು. ಆ ತಕ್ಷಣವೇ ತನುಶ್ರೀ ದತ್ತಾ ಅವರ ಬದಲಿಗೆ ರಾಖಿ ಸಾವಂತ್ ರನ್ನು ಆ ಹಾಡಿಗಾಗಿ ಆಯ್ಕೆ ಮಾಡಿಕೊಳ್ಳಲಾಯಿತು.
2008ರಲ್ಲಿ ನಡೆದ ಆ ಘಟನೆ ಬಗ್ಗೆ ರಾಖಿ ಸಾವಂತ್ ಈಚೆಗೆ ಮಾತನಾಡುತ್ತಾ, ತನುಶ್ರೀ ದತ್ತಾ ಮಾದಕ ದ್ರವ್ಯ ಸೇವಿಸಿದ್ದರು. ಸೆಟ್ ನಲ್ಲೇ ನಾಲ್ಕು ಗಂಟೆಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು ಎಂದಿದ್ದರು. ಲೈಂಗಿಕ ದೌರ್ಜನ್ಯದ ಆರೋಪವನ್ನು ನಾನಾ ಪಾಟೇಕರ್ ನಿರಾಕರಿಸಿದ್ದಾರೆ. ಆದರೆ ತನುಶ್ರೀ ದತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪಾಟೇಕರ್ ಗೆ ಮಂಪರು ಪರೀಕ್ಷೆ ಹಾಗೂ ಸುಳ್ಳು ಪತ್ತೆ ಯಂತ್ರದ ಮೂಲಕ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications