Breaking: ಮಹಾರಾಷ್ಟ್ರ; ತೆರಿಗೆ ಇಲಾಖೆಯಿಂದ 390 ಕೋಟಿ ಆಸ್ತಿ ಜಪ್ತಿ
ಮುಂಬೈ, ಆಗಸ್ಟ್ 11: ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜಲ್ನಾದ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ದಾಳಿಯಲ್ಲಿ ಇಲಾಖೆಯು ಸುಮಾರು 390 ಕೋಟಿ ರೂಪಾಯಿ ಬೇನಾಮಿ ಆಸ್ತಿ ಅಥವಾ ಲೆಕ್ಕ ರಹಿತ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳಲ್ಲಿ 56 ಕೋಟಿ ರೂಪಾಯಿ ನಗದು ಮತ್ತು 14 ಕೋಟಿ ರೂಪಾಯಿ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ.
ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಸ್ಥಳಗಳಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ತೆರಿಗೆ ಇಲಾಖೆ ದಾಳಿಗಳನ್ನು ನಡೆಸಿತ್ತು.
ಈ ವ್ಯಾಪಾರ ಗುಂಪುಗಳ ಮೇಲೆ ನಡೆದ ದಾಳಿ ವೇಳೆ ವಶಪಡಿಸಿಕೊಂಡ ಹಣವನ್ನು ನಿಖರವಾಗಿ ಲೆಕ್ಕ ಹಾಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸುಮಾರು 13 ಗಂಟೆ ಬೇಕಾಯಿತು ಎಂದು ಹೇಳಿದ್ದಾರೆ.
ಈ ವ್ಯಾಪಾರ ಗುಂಪುಗಳಿಂದ ಆಪಾದಿತ ತೆರಿಗೆ ವಂಚನೆಯ ಬಗ್ಗೆ ನಿಖರ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು.

ಈ ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Recommended Video
ಇನ್ನೊಂದು ಪ್ರಕರಣದಲ್ಲಿ ಅಬಕಾರಿ ತಂಡವು ಆಗಸ್ಟ್ 9 ರ ರಾತ್ರಿ ಗಾಂಜಾ ಕಳ್ಳಸಾಗಣಿಕೆ ಪರಿಶೀಲನೆ ವೇಳೆ ಗಂಜಾಂ ಜಿಲ್ಲೆಯ ಲಾಂಜಿಪಲ್ಲಿಯಲ್ಲಿ ಮಹಾರಾಷ್ಟ್ರ ಮೂಲದ ಉದ್ಯಮಿಯಿಂದ 1.22 ಕೋಟಿ ರೂಪಾಯಿ ನಗದು ಮತ್ತು ಸುಮಾರು 20 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications