ಟಿಸಿಎಸ್ ಟೆಕ್ಕಿ ಮೇಲೆ ಅತ್ಯಾಚಾರ, ಹತ್ಯೆ: ಶಂಕೆ

TCS ಸಾಫ್ಟ್ ವೇರ್ ಇಂಜಿನಿಯರ್ ಏಸ್ತರ್ ಅನೂಹ್ಯ (23) ಅವರ ಅರೆ ಬೆಂದ ದೇಹವು ಈಸ್ಟರ್ನ್ ಎಕ್ಸ್ ಪ್ರೆಸ್ ಹೈವೆ ಬಳಿ ಕಂಜೂರಮಾರ್ಗ್ ನಲ್ಲಿ ನಿರ್ಜನ ಪ್ರದೇಶದಲ್ಲಿ ಗುರುವಾರ ದೊರೆತಿದೆ. ಇದು ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದು, ಸಾಕ್ಷ್ಯವನ್ನು ನಾಶಪಡಿಸಲು ಶವವನ್ನು ಸುಡುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮೃತ, ಏಸ್ತರ್ ಅನೂಹ್ಯ ಗೊರೆಗಾಂವ್ ನಲ್ಲಿರುವ TCS ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿದ್ದರು. ಜನವರಿ 5ರಂದು ಮುಂಬೈಗೆ ಬಂದಿದ್ದ ಏಸ್ತರ್ ಅನೂಹ್ಯ ಆನಂತರ ಕಾಣೆಯಾಗಿದ್ದರು. ಏಸ್ತರ್ ಅನೂಹ್ಯ ಮೂಲತಃ ಆಂಧ್ರದ ಮಚಲೀಪಟ್ಟಣಂನವರು.
ಜನವರಿ 5ರಂದು ಏಸ್ತರ್ ಅನೂಹ್ಯ ಮೊಬೈಲ್ ಫೋನಿನ ಕಾಲ್ ಸಿಗ್ನಲ್ ಕಂಜೂರಮಾರ್ಗ್ ಬಳಿ ಸುಳಿವು ಸಿಕ್ಕಿತ್ತು. ಹಾಗಾಗಿ ಆಕೆಯ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆ ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸಿದಾಗ ಅರೆಬೆಂದ ಶವ ಪತ್ತೆಯಾಗಿದೆ. ಆದರೆ ದೂರು ನೀಡಿದ ಬಳಿಕವೂ ಏಸ್ತರ್ ಅನೂಹ್ಯ ಪತ್ತೆಗೆ ಪೊಲೀಸರು ಯತ್ನಿಸಿರಲಿಲ್ಲ. ಕುಟುಂಬಸ್ಥರೇ ಶವ ರೂಪದಲ್ಲಿ ಮಗಳ ಪತ್ತೆ ಮಾಡುವಂತಾಗಿದೆ ಎಂದು ಆಕೆಯ ತಂದೆ ಅಲವತ್ತುಕೊಂಡಿದ್ದಾರೆ.
ಶವ ಪತ್ತೆಯಾದ ಕಂಜೂರಮಾರ್ಗ್, ಕುರ್ಲಾ ಪ್ರದೇಶದಲ್ಲಿದ್ದು ಅಪರಾಧಿಗಳ ಸ್ವರ್ಗವಾಗಿದೆ. ವಿಜಯವಾಡಾದಿಂದ ಹೊರಟಿದ್ದ ಏಸ್ತರ್ ಅನೂಹ್ಯ, ಕುರ್ಲಾ ರೈಲ್ವೆ ಸ್ಟೇಷನನ್ನಿನಲ್ಲಿ ಇಳಿದಿದ್ದಳು. ಆ ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿ, ಶವವನ್ನು ಸುಟ್ಟುಹಾಕುವ ಯತ್ನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಏಸ್ತರ್ ಅನೂಹ್ಯ ಧರಿಸಿದ್ದ ಉಂಗುರವನ್ನು ಪತ್ತೆ ಹಚ್ಚುವ ಮೂಲಕ ತಂದೆ ಜೊನಾಥನ್ ಅವರು ತಮ್ಮ ಮಗಳನ್ನು ಗುರುತು ಹಿಡಿದಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications