ತೀಸ್ತಾ ಸೆಟಲ್ವಾಡ್ ಅವರ ಎನ್ ಜಿಒ ಲೈಸನ್ಸ್ ರದ್ದು
ಮುಂಬೈ, ಜೂನ್ 16: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ಲೈಸನ್ಸ್ ರದ್ದುಗೊಳಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಸಂಗ್ರಹಿಸಿದ ಆರೋಪವನ್ನು ತೀಸ್ತಾ ಅವರು ಎದುರಿಸುತ್ತಿದ್ದಾರೆ.
ಅಕ್ರಮವಾಗಿ ದೇಣಿಗೆ ಸಂಗ್ರಹಿಸಿದ ಆರೋಪದ ಮೇಲೆ ಈ ಹಿಂದೆ ತೀಸ್ತಾ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ತಂಡ ದಾಳಿ ನಡೆಸಿ ಹಲವಾರು ಕಡತಗಳನ್ನು ವಶಪಡಿಸಿಕೊಂಡಿತ್ತು. ವಿದೇಶಿ ಮೂಲಗಳ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ ಸಿಆರ್ಎ) ಉಲ್ಲಂಘನೆ ಮಾಡಿರುವ ತೀಸ್ತಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಿಬಿಐ ತನಿಖೆ ನಡೆಸುತ್ತಿದೆ.[ತೀಸ್ತಾ ಸೆಟಲ್ವಾಡ್ ಎನ್ ಜಿಒ ವಿರುದ್ಧ ಚಾರ್ಜ್ ಶೀಟ್]
ಎಫ್ ಸಿಆರ್ ಎ ಸೆಕ್ಷನ್ 8(1) ಕಾಯ್ಡೆ ಉಲ್ಲಂಘನೆ ಹೊತ್ತಿರುವ ಸಭ್ರಂಗ್ ಟ್ರಸ್ಟ್ ಗೆ ಬಂದಿರುವ ವಿದೇಶಿ ದೇಣಿಗೆಯನ್ನು ದುರ್ಬಳಕೆ ಮಾಡಿದ ಆರೋಪ ಹೊತ್ತಿದ್ದಾರೆ. ನಿಯಮದ ಪ್ರಕಾರ ದೇಣಿಗೆ ಮೊತ್ತದ ಶೇ 50ರಷ್ಟು ಮಾತ್ರ ಆಡಳಿತಾತ್ಮಕ ನಿರ್ವಹಣಾ ವೆಚ್ಚವಾಗಿ ಖರ್ಚು ಮಾಡಬಹುದಾಗಿದೆ.

ತೀಸ್ತಾ ವಿರುದ್ಧ ಪ್ರಕರಣಗಳು: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಹಾಗೂ ಆಕೆ ಪತಿ ಜಾವೇದ್ ಆನಂದ್ ವಿರುದ್ಧ ಎಫ್ ಸಿಆರ್ ಎ ಉಲ್ಲಂಘನೆ ಆರೋಪಿಸಿ ಪ್ರಕರಣ ದಾಖಲಾಗಿದೆ. ಉದ್ಯಮಿ ಗುಲಾಂ ಮೊಹಮ್ಮದ್ ಹಾಗೂ ಎನ್ ಜಿಎಒ ಸಭ್ರಂಗ್ ಕಮ್ಯೂನಿಕೇಷನ್ ವಿರುದ್ಧ ಕೂಡಾ ಪ್ರಕರಣ ಬುಕ್ ಆಗಿದೆ.
ಸಭ್ರಂಗ್ ಟ್ರಸ್ಟಿಗೆ ವಿದೇಶದಿಂದ ಸುಮಾರು 1 ಕೋಟಿ ರು ಗೂ ಅಧಿಕ ದೇಣಿಗೆ ಬಂದಿದ್ದು ಇದನ್ನು ಎನ್ ಜಿಒನ ಇತರೆ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಈ ಬಗ್ಗೆ ಗುಜರಾತ್ ಸರ್ಕಾರ ಈ ಹಿಂದೆ ಆರೋಪ ಹೊರೆಸಿತ್ತು.ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ಗೃಹ ಸಚಿವಾಲಯ ವಹಿಸಿತ್ತು. (ಒನ್ ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications