ಕೇಂದ್ರ ಸರ್ಕಾರದ ಜತೆಗೆ ದಾವೂದ್ ಸಂಧಾನ ಮಾತುಕತೆ: ಠಾಕ್ರೆ
ಮುಂಬೈ, ಸೆಪ್ಟೆಂಬರ್ 21: ಭೂಗತ ಪಾತಕಿಯಾದ ದಾವೂದ್ ಇಬ್ರಾಹೀಂ, ತಾನು ಭಾರತಕ್ಕೆ ಮರಳಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಆತ ಭಾರತ ಸರ್ಕಾರದೊಂದಿಗೆ ಸಂಧಾನ ಮಾತುಕತೆ ನಡೆಸುತ್ತಿದ್ದಾನೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ನಾಯಕ ರಾಜ್ ಠಾಕ್ರೆ ಹೊಸ ಬಾಂಬ್ ಸಿಡಿಸಿದ್ದಾರೆ. ತನ್ನ ಕೊನೆಯ ದಿನಗಳನ್ನು ಭಾರತದಲ್ಲೇ ಕಳೆಯುವ ಅಭೀಪ್ಸೆಯಿಂದಾಗಿ ಆತ ಈ ಪ್ರಯತ್ನ ನಡೆಸುತ್ತಿದ್ದಾನೆಂದು ಠಾಕ್ರೆ ತಿಳಿಸಿದ್ದಾರೆ.
ಫೇಸ್ ಬುಕ್ ನಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ಅವರು ಇಂಥದ್ದೊಂದು ವಿಚಾರ ತಿಳಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಅಷ್ಟೇ ಅಲ್ಲ, ದಾವೂದ್ ನನ್ನು ತನ್ನ ಆಡಳಿತ ಕಾಲದಲ್ಲೇ ಭಾರತಕ್ಕೆ ಬರುವಂತೆ ಮಾಡಿದರೆ, ಅದು ಮುಂದಿನ ಚುನಾವಣೆಗಳಲ್ಲಿ ತನಗೆ ಉತ್ತಮ ಮೈಲೇಜ್ ಸಿಗುವುದೆಂಬ ಆಶಯದಲ್ಲಿ ಬಿಜೆಪಿಯೂ ಆ ಬಗ್ಗೆ ಆಸಕ್ತಿ ವಹಿಸಿದೆ ಎಂದು ಅವರು ಹೇಳಿದ್ದಾರೆ.
''ದಾವೂದ್ ಈಗ ಪಾಕಿಸ್ತಾನದಲ್ಲೇ ಇದ್ದಾನೆ. ಆದರೆ, ಮುಪ್ಪು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಆತ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದ್ದಾನೆ. ಹಾಗಾಗಿ, ಭಾರತದಲ್ಲಿ ತನ್ನ ಕೊನೆಯ ದಿನಗಳನ್ನು ಕಳೆಯಲು ಆತ ಉದ್ದೇಶಿಸಿರುವುದರಿಂದ ಆತನು ಕೇಂದ್ರ ಸರ್ಕಾರದೊಂದಿಗೆ ಸಂಧಾನ ಮಾತುಕತೆಗೆ ಪ್ರಯತ್ನಿಸುತ್ತಿದ್ದಾನೆ. ಮಾತುಕತೆಯೂ ಸಾಗುತ್ತಿದೆ. ಎಲ್ಲಾ ದಾವೂದ್ ಅಂದುಕೊಂಡಂತೆ ನಡೆದರೆ, ಆತ ಶೀಘ್ರದಲ್ಲೇ ಭಾರತಕ್ಕೆ ಬರಬಹುದು'' ಎಂದು ಠಾಕ್ರೆ ಹೇಳಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications