ಕೇಂದ್ರ ಸರ್ಕಾರದ ಜತೆಗೆ ದಾವೂದ್ ಸಂಧಾನ ಮಾತುಕತೆ: ಠಾಕ್ರೆ
ಮುಂಬೈ, ಸೆಪ್ಟೆಂಬರ್ 21: ಭೂಗತ ಪಾತಕಿಯಾದ ದಾವೂದ್ ಇಬ್ರಾಹೀಂ, ತಾನು ಭಾರತಕ್ಕೆ ಮರಳಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಆತ ಭಾರತ ಸರ್ಕಾರದೊಂದಿಗೆ ಸಂಧಾನ ಮಾತುಕತೆ ನಡೆಸುತ್ತಿದ್ದಾನೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ನಾಯಕ ರಾಜ್ ಠಾಕ್ರೆ ಹೊಸ ಬಾಂಬ್ ಸಿಡಿಸಿದ್ದಾರೆ. ತನ್ನ ಕೊನೆಯ ದಿನಗಳನ್ನು ಭಾರತದಲ್ಲೇ ಕಳೆಯುವ ಅಭೀಪ್ಸೆಯಿಂದಾಗಿ ಆತ ಈ ಪ್ರಯತ್ನ ನಡೆಸುತ್ತಿದ್ದಾನೆಂದು ಠಾಕ್ರೆ ತಿಳಿಸಿದ್ದಾರೆ.
ಫೇಸ್ ಬುಕ್ ನಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ಅವರು ಇಂಥದ್ದೊಂದು ವಿಚಾರ ತಿಳಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಅಷ್ಟೇ ಅಲ್ಲ, ದಾವೂದ್ ನನ್ನು ತನ್ನ ಆಡಳಿತ ಕಾಲದಲ್ಲೇ ಭಾರತಕ್ಕೆ ಬರುವಂತೆ ಮಾಡಿದರೆ, ಅದು ಮುಂದಿನ ಚುನಾವಣೆಗಳಲ್ಲಿ ತನಗೆ ಉತ್ತಮ ಮೈಲೇಜ್ ಸಿಗುವುದೆಂಬ ಆಶಯದಲ್ಲಿ ಬಿಜೆಪಿಯೂ ಆ ಬಗ್ಗೆ ಆಸಕ್ತಿ ವಹಿಸಿದೆ ಎಂದು ಅವರು ಹೇಳಿದ್ದಾರೆ.
''ದಾವೂದ್ ಈಗ ಪಾಕಿಸ್ತಾನದಲ್ಲೇ ಇದ್ದಾನೆ. ಆದರೆ, ಮುಪ್ಪು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಆತ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದ್ದಾನೆ. ಹಾಗಾಗಿ, ಭಾರತದಲ್ಲಿ ತನ್ನ ಕೊನೆಯ ದಿನಗಳನ್ನು ಕಳೆಯಲು ಆತ ಉದ್ದೇಶಿಸಿರುವುದರಿಂದ ಆತನು ಕೇಂದ್ರ ಸರ್ಕಾರದೊಂದಿಗೆ ಸಂಧಾನ ಮಾತುಕತೆಗೆ ಪ್ರಯತ್ನಿಸುತ್ತಿದ್ದಾನೆ. ಮಾತುಕತೆಯೂ ಸಾಗುತ್ತಿದೆ. ಎಲ್ಲಾ ದಾವೂದ್ ಅಂದುಕೊಂಡಂತೆ ನಡೆದರೆ, ಆತ ಶೀಘ್ರದಲ್ಲೇ ಭಾರತಕ್ಕೆ ಬರಬಹುದು'' ಎಂದು ಠಾಕ್ರೆ ಹೇಳಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications