ಥಾಣೆ ಪಾಲಿಕೆ: ಠಾಕ್ರೆ ಬಣಕ್ಕುಳಿದದ್ದು ಒಬ್ಬನೇ ಸದಸ್ಯ; ಎಲ್ಲಾ ಶಿಂಧೆಮಯ
ಮುಂಬೈ, ಜುಲೈ 7: ಶಿವಸೇನಾ ಪಕ್ಷದೊಳಗೆ ಕೇವಲ ಶಾಸಕರು ಮತ್ತು ಸಂದರ ಬಂಡಾಯ ಮಾತ್ರವಲ್ಲ, ಇನ್ನೂ ಕೆಳಗಿನ ಹಂತದ ಜನಪ್ರತಿನಿಧಿಗಳವರೆಗೂ ವಿಸ್ತರಣೆಯಾಗಿದೆ. ಥಾಣೆ ಮಹಾ ನಗರಪಾಲಿಕೆಯಲ್ಲಿ ಇರುವ 67 ಶಿವಸೇನಾ ಸದಸ್ಯರ ಪೈಕಿ ಬರೋಬ್ಬರಿ 66 ಮಂದಿ ಸದಸ್ಯರು ಏಕನಾಥ್ ಶಿಂಧೆ ಬಣ ಸೇರಿಕೊಂಡಿದ್ದಾರೆ. ಒಬ್ಬ ಸದಸ್ಯ ಮಾತ್ರ ಠಾಕ್ರೆ ಬಣದಲ್ಲಿ ಉಳಿದುಕೊಂಡಿದ್ದಾರೆ.
ಥಾಣೆ ನಗರಪಾಲಿಕೆಯಲ್ಲಿ ಆದ ಈ ಬೆಳವಣಿಗೆ ಅನಿರೀಕ್ಷಿತವೇನಲ್ಲ. ಥಾಣೆ ಜಿಲ್ಲೆ ಏಕನಾಥ್ ಶಿಂಧೆಯ ವೈಯಕ್ತಿಕ ವರ್ಚಸ್ಸು ಇರುವ ಪ್ರದೇಶ. ಆದರೆ ಮುಂಬೈ ಬಳಿಕ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಪಾಲಿಕೆ ಥಾಣೆಯದ್ದು. ಹೀಗಾಗಿ, ಉದ್ಧವ್ ಠಾಕ್ರೆಗೆ ತಮ್ಮ ಪ್ರಭಾವ ಬೆಳೆಸಿಕೊಳ್ಳಲು ಥಾಣೆ ಬಹಳ ಮುಖ್ಯ.
ಥಾಣೆ ಮಹಾನಗರಪಾಲಿಕೆಯನ್ನು ಇತ್ತೀಚೆಗೆ ವಿಸರ್ಜಿಸಲಾಗಿತ್ತು. ಬೇರೆ ಬೇರೆ ಕಾರಣಕ್ಕೆ ಚುನಾವಣೆಯನ್ನು ಮುಂದೂಡುತ್ತಾ ಬರಲಾಗಿದೆ. ಇದೇ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಥಾಣೆ ಪಾಲಿಕೆಯ ಶಿವಸೇನಾ ಸದಸ್ಯರು ಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಭೇಟಿಯಾಗಿ ಅವರಿಗೆ ಬೆಂಬಲ ನೀಡಿರುವುದು ತಿಳಿದುಬಂದಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ನಡೆದ ಬಹುಮತ ಪರೀಕ್ಷೆಯಲ್ಲಿ ಶಿವಸೇನಾ ಪಕ್ಷದ 55 ಶಾಸಕರ ಪೈಕಿ 40 ಮಂದಿ ಸಿಎಂ ಏಕನಾಥ್ ಶಿಂಧೆಗೆ ಬೆಂಬಲ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳು ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಪಕ್ಷದ ಮೇಲೆ ಹೊಂದಿರುವ ಹಿಡಿತ ದುರ್ಬಲವಾಗಿರುವುದನ್ನು ಸೂಚಿಸುತ್ತಿವೆ.
ಬಾಳಾ ಠಾಕ್ರೆ ಹೆಸರು
ಶಿವಸೇನಾ ಪಕ್ಷವನ್ನು ಹುಟ್ಟುಹಾಕಿದ್ದ ಬಾಳಾ ಸಾಹೇಬ್ ಠಾಕ್ರೆ ಅವರ ಹೆಸರನ್ನು ಏಕನಾಥ್ ಶಿಂಧೆ ಕೂಡ ಬಳಸಿಕೊಳ್ಳುತ್ತಿದ್ದಾರೆ. ಶಿವಸೇನಾ ಪಕ್ಷ ಅಧಿಕೃತವಾಗಿ ತಮ್ಮದೇ ಎಂದು ಶಿಂಧೆ ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಶಿವಸೇನಾ ಪಕ್ಷ ವಿಭಜನೆ ಆಗುವುದಾದರೆ ಆ ಪಕ್ಷದ ಅಧಿಕೃತ ಚಿಹ್ನೆ ಯಾವ ಬಣಕ್ಕೆ ಹೋಗಬೇಕೆಂಬುದನ್ನು ಚುನಾವಣಾ ಆಯೋಗ ಮಾತ್ರ ನಿರ್ಧರಿಸಬಲ್ಲುದು.
ಶಿವಸೇನಾ ಶಾಸಕರು ಬಿಟ್ಟುಹೋಗಿರಬಹುದು. ಆದರೆ, ಕಾರ್ಯಕರ್ತರು ತಮ್ಮ ಜೊತೆ ಇದ್ದಾರೆ. ಮತ್ತೊಮ್ಮೆ ಪಕ್ಷ ಕಟ್ಟುತ್ತೇನೆ ಎಂದು ಉದ್ಧವ್ ಠಾಕ್ರೆ ಹೇಳಿಕೊಂಡಿದ್ದರು. ಆದರೆ, ಈಗ ಥಾಣೆ ಮಹಾನಗರಪಾಲಿಕೆಯ ಸದಸ್ಯರು ಏಕನಾಥ್ ಶಿಂಧೆಗೆ ಬೆಂಬಲ ನೀಡಿರುವ ಬೆಳವಣಿಗೆ ಈ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಥಾಣೆ ಏಕನಾಥ್ ಶಿಂಧೆಯ ಪ್ರಾಬಲ್ಯ ಇರುವ ಪ್ರದೇಶವಾದ್ದರಿಂದ ಇಷ್ಟು ದೊಡ್ಡ ಬೆಂಬಲ ಸಹಜ. ಪುಣೆ ಇತ್ಯಾದಿ ಬೇರೆ ಕಡೆಯ ಸ್ಥಳೀಯ ಸಂಸ್ಥೆಗಳಲ್ಲಿ ಶಿವಸೇನಾ ಸದಸ್ಯರು ಯಾವ ಬಣಕ್ಕೆ ಬೆಂಬಲ ನೀಡುತ್ತಾರೆ ಎಂಬುದು ಕುತೂಹಲ.

ಶಿವಸೇನಾ ಮತ್ತು ಹಿಂದುತ್ವ
ಶಿವಸೇನಾ ಪಕ್ಷದ್ದು ಸಾಂಪ್ರದಾಯಿಕವಾಗಿ ಹಿಂದುತ್ವ ವಿಚಾರ ಮತ್ತು ಮರಾಠಿ ಅಸ್ಮಿತೆ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಾ ಬಂದಿದೆ. ಬಿಜೆಪಿಗಿಂತಲೂ ಹೆಚ್ಚು ಉಗ್ರ ಹಿಂದುತ್ವವಾದಿ ಪಕ್ಷವಾಗಿದ್ದುದು ಹೌದು. ರಾಮಜನ್ಮಭೂಮಿ ಮೊದಲಾದ ಆಂದೋಲನಗಳಲ್ಲಿ ಬಹಳ ಸಕ್ರಿಯವಾಗಿ ತೊಡಗಿಸಿಕೊಂಡ ಪಕ್ಷ ಅದು. ಆದರೆ, ಉದ್ಧವ್ ಠಾಕ್ರೆ ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆ ಕೈ ಜೋಡಿಸಿದ್ದು ಪಕ್ಷದೊಳಗೆ ಅನೇಕರಿಗೆ ಮುಜುಗರ ಮಾಡಿದ್ದು ನಿಜ.
ಏಕನಾಥ್ ಶಿಂಧೆಗೆ ಇದೇ ಪ್ಲಸ್ ಪಾಯಿಂಟ್ ಆಗಿದೆ. ಹಿಂದುತ್ವವನ್ನು ಕೈಬಿಟ್ಟಿದ್ದರಿಂದ ತಾವು ಬಂಡಾಯ ಏಳಬೇಕಾಯಿತು ಎಂದು ಅವರು ವಾದಿಸಿದ್ದಾರೆ. ಇದು ಶಿವಸೇನಾ ಪಕ್ಷದ ಕಟ್ಟರ್ ಬೆಂಬಲಗರನ್ನು ಸಮಾಧಾನಗೊಳಿಸುತ್ತದಾ ಎಂಬುದು ಪ್ರಶ್ನೆ.
ಉದ್ಧವ್ ಠಾಕ್ರೆ ತಮ್ಮ ಅಧಿಕಾರದ ಕೊನೆಯ ಘಳಿಗೆಯಲ್ಲಿ ಕೆಲ ನಗರಗಳ ಹೆಸರನ್ನು ಬದಲಾಯಿಸುವ ಮೂಲಕ ತಾನು ಹಿಂದುತ್ವವನ್ನು ಮರೆತಿಲ್ಲ ಎಂಬ ಸಂದೇಶ ನೀಡಲು ಪ್ರಯತ್ನಿಸಿದ್ದರು. ಈಗ ಅಧಿಕಾರ ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಮುಂದೆ ತಮ್ಮ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳಲು ಯಾವ ಕಾರ್ಯತಂತ್ರ ರೂಪಿಸುತ್ತಾರೆ ಎಂಬ ಕುತೂಹಲ ಇದೆ.
(ಒನ್ಇಂಡಿಯಾ ಸುದ್ದಿ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications