ಅಂಬಾನಿ ಯೋಜನೆಗೆ ನೆರವಾಗಲು 'ಅವನಿ' ಹತ್ಯೆ : ಠಾಕ್ರೆ
ಮುಂಬೈ, ನವೆಂಬರ್ 08: ಉದ್ಯಮಿ ಅನಿಲ್ ಅಂಬಾನಿ ಅವರ ಉದ್ದೇಶಿತ ಯಾವತ್ಮಲ್ ಯೋಜನೆ ಅನುಷ್ಠಾನಕ್ಕಾಗಿ ಅವನಿ ಎಂಬ ಹೆಣ್ಣುಹುಲಿಯನ್ನು ಬಲಿಪಡೆಯಲಾಗಿದೆ.
ಕೇಂದ್ರ ಸರ್ಕಾರದ ಅಣತಿಯಂತೆ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರ ಈ ಹತ್ಯೆಯ ನೇರ ಹೊಣೆ ಹೊರಬೇಕಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
ಅನಿಲ್ ಅಂಬಾನಿ ಯೋಜನೆಯನ್ನು ಉಳಿಸುವ ಸಲುವಾಗಿ ಅವನಿಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸರ್ಕಾರ ತನ್ನ ಆತ್ಮಸಾಕ್ಷಿಯನ್ನು ಅಂಬಾನಿಗೆ ಮಾರಿಕೊಂಡಿದೆ" ಎಂದು ಠಾಕ್ರೆ ಟೀಕಿಸಿದರು

ಅವನಿಯಿಂದ ಮೃತಪಟ್ಟವರ ಬಗ್ಗೆ ನನಗೆ ಅನುಕಂಪವಿದೆ. ಆದರೆ ಇದು ವಿಶ್ವಾದ್ಯಂತ ನಡೆಯುತ್ತಿದೆ. ಜನ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಾಗ, ಆಸುಪಾಸಿನಲ್ಲಿ ಸಹಜವಾಗಿಯೇ ಅವು ಮನುಷ್ಯರ ಮೇಲೆ ದಾಳಿ ಮಾಡುತ್ತವೆ" ಎಂದು ಹೇಳಿದ್ದಾರೆ. ಆದರೆ ಅದಕ್ಕಾಗಿ ಅವನಿಯನ್ನು ಹತ್ಯೆ ಮಾಡುವ ಅಗತ್ಯವಿರಲಿಲ್ಲ ಎಂದಿದ್ದಾರೆ.
ರಾಜ್ ಠಾಕ್ರೆ ಆರೋಪಕ್ಕೆ ತಕ್ಷಣವೇ ಪ್ರತಿಕ್ರಿಯಿಸಿರುವ ಅನಿಲ್ ಅಂಬಾನಿ ನೇತೃತ್ವದ ಉದ್ಯಮ ಸಮೂಹದ ವಕ್ತಾರರು, "ನಮ್ಮ ಉದ್ಯಮ ಸಮೂಹ ಯಾವತ್ಮಲ್ ಜಿಲ್ಲೆಯಲ್ಲಿ ಯಾವುದೇ ಯೋಜನೆ ಹೊಂದಿಲ್ಲ" ಎಂದಿದ್ದಾರೆ.
ಆದರೆ, ಅಲ್ಲಿನ ಜಿಲ್ಲಾಡಳಿತ ನೀಡಿರುವ ಹೇಳಿಕೆ ಪ್ರಕಾರ, ಉದ್ದೇಶಿತ ಯೋಜನೆಯ ಜಾಗ, ಹುಲಿ ಹತ್ಯೆಯಾದ ಸ್ಥಳ ರಾಲೇಗಾಂವ್ ಮಾರ್ಗ ಸಮೀಪದಲ್ಲೇ ಇದೆ. ಆದರೆ, 13 ಮಂದಿಯನ್ನು ಕೊಂದ ನರಭಕ್ಷಕ ಹುಲಿ ಹತ್ಯೆ ಮತ್ತು ಯೋಜನೆಗೆ ಸಂಬಂಧ ಇಲ್ಲ ಎಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications