ಟೂಲ್ಕಿಟ್ ಪ್ರಕರಣ: ನಿಕಿತಾ ಜೇಕಬ್ಗೆ ಮೂರು ವಾರಗಳ ನಿರೀಕ್ಷಣಾ ಜಾಮೀನು
ಮುಂಬೈ, ಫೆಬ್ರವರಿ 17: ರೈತರ ಪ್ರತಿಭಟನೆಯ ಟೂಲ್ ಕಿಟ್ ಪ್ರಕರಣದಲ್ಲಿ ದೆಹಲಿಯ ತಿಸ್ ಹಜಾರಿ ನ್ಯಾಯಾಲಯದಿಂದ ಜಾಮೀನುರಹಿತ ವಾರೆಂಟ್ ಎದುರಿಸುತ್ತಿರುವ ಮುಂಬೈ ಮೂಲದ ವಕೀಲೆ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಪ್ರಯಾಣ ಕಾಲದ ಉದ್ದೇಶಿತ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿಕಿತಾ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ. ನಾಯಕ್ ಅವರ ಏಕ ಸದಸ್ಯ ನ್ಯಾಯಪೀಠ ಮೂರು ವಾರಗಳ ನಿರೀಕ್ಷಣಾ ಜಾಮೀನು ನೀಡಿದರು. ಪೊಲೀಸ್ ಅಧಿಕಾರಿಗಳು ಆಕೆಯ ಮನೆಯಲ್ಲಿ ಪರಿಶೀಲನೆ ನಡೆಸಿ, ಆಕೆಯ ಲ್ಯಾಪ್ಟಾಪ್ ಮತ್ತು ಫೋನ್ ವಶಪಡಿಸಿಕೊಂಡಿದ್ದು, ಆಕೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದರ ಅರ್ಥ ನಿಕಿತಾ ಅವರು ತನಿಖೆಗೆ ಲಭ್ಯವಿದ್ದಾರೆ ಎಂದು ಆಕೆ ತಿಳಿಸಿದಂತಾಗಿದೆ ಎಂಬುದಾಗಿ ನ್ಯಾಯಪೀಠ ಹೇಳಿತು.
ಆದರೆ ಜಾಮೀನಿಗಾಗಿ ಇನ್ನು ಮೂರು ವಾರಗಳ ಬಳಿಕ ನಿಕಿತಾ ಅವರು ದೆಹಲಿಯ ನ್ಯಾಯಾಲಯಕ್ಕೆ ಮನವಿ ಸಲ್ಲಿಸಬೇಕಿದೆ. ಈ ಪ್ರಕರಣದ ವ್ಯಾಪ್ತಿಯ ಕುರಿತು ಯಾವುದೇ ಹೇಳಿಕೆ ನೀಡುತ್ತಿಲ್ಲ ಎಂದು ನ್ಯಾಯಪೀಠ ತಿಳಿಸಿತು.

ದೆಹಲಿ ಪೊಲೀಸರ ಆರೋಪದ ಪ್ರಕಾರ, ಪರಿಸರ ಹೋರಾಟಗಾರ್ತಿ ದಿಶಾ ರವಿ, ನಿಕಿತಾ ಜೇಕಬ್ ಮತ್ತು ಬೀಡ್ನ ಎಂಜಿನಿಯರ್ ಶಂತನು ಮುಲುಕ್ ಸೇರಿ ರೈತರ ಪ್ರತಿಭಟನೆಯ ಕುರಿತು ವಿದೇಶಿ ಸೆಲೆಬ್ರಿಟಿಗಳಿಂದ ಟ್ವೀಟ್ ಮಾಡಿಸಲು ಟೂಲ್ಕಿಟ್ ತಯಾರಿಸಿದ್ದರು. ಅದನ್ನು ಗ್ರೆಟಾ ಥನ್ಬರ್ಗ್ ಆಕಸ್ಮಿಕವಾಗಿ ಟ್ವೀಟ್ ಮಾಡಿದ್ದರು.
ಇದೇ ಪ್ರಕರಣದಲ್ಲಿ ದೆಹಲಿ ಕೋರ್ಟ್ನಿಂದ ಜಾಮೀನುರಹಿತ ವಾರಂಟ್ ಎದುರಿಸುತ್ತಿರುವ ಶಂತನು ಅವರಿಗೆ ಔರಂಗಾಬಾದ್ ಪೀಠವು ಮಂಗಳವಾರ 10 ದಿನಗಳ ಪ್ರಯಾಣ ಕಾಲದ ಉದ್ದೇಶಿತ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications