ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರೇಕಿಂಗ್ : ಗೂಡ್ಸ್ ರೈಲು ಡಿಕ್ಕಿ; 14 ವಲಸೆ ಕಾರ್ಮಿಕರು ಸಾವು

|
Google Oneindia Kannada News

ಮುಂಬೈ, ಮೇ 08 : ಗೂಡ್ಸ್ ರೈಲು ಡಿಕ್ಕಿ ಹೊಡೆದು 14 ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಪಘಾತದಲ್ಲಿ 5 ಜನರಿಗೆ ಗಾಯವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

ಶುಕ್ರವಾರ ಮುಂಜಾನೆ 5.15ರ ಸುಮಾರಿಗೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 14 ವಲಸೆ ಕಾರ್ಮಿಕರು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರನ್ನು ಔರಂಗಾಬಾದ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

6 ದಿನದ ವಲಸೆ ಕಾರ್ಮಿಕರ ಕಾರ್ಯಾಚರಣೆ ಅಂತ್ಯಗೊಳಿಸಿದ ಕೆಎಸ್ಆರ್‌ಟಿಸಿ6 ದಿನದ ವಲಸೆ ಕಾರ್ಮಿಕರ ಕಾರ್ಯಾಚರಣೆ ಅಂತ್ಯಗೊಳಿಸಿದ ಕೆಎಸ್ಆರ್‌ಟಿಸಿ

Migrant Workers Killed In Goods Train Accident

ಹಿರಿಯ ಪೊಲೀಸ್ ಅಧಿಕಾರಿಗಳು, ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿದೆ. ಘಟನೆಗೆ ನಿಖರವಾದ ಕಾರಣ ಏನು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮೃತಪಟ್ಟ ಕಾರ್ಮಿಕರು ಮಧ್ಯಪ್ರದೇಶ ರಾಜ್ಯದವರು ಎಂಬ ಮಾಹಿತಿ ಸಿಕ್ಕಿದೆ.

ಶ್ರಮಿಕ್ ವಿಶೇಷ ರೈಲಿನ ದರ; ರೈಲ್ವೆ ಇಲಾಖೆಯ ಸ್ಪಷ್ಟನೆ ಶ್ರಮಿಕ್ ವಿಶೇಷ ರೈಲಿನ ದರ; ರೈಲ್ವೆ ಇಲಾಖೆಯ ಸ್ಪಷ್ಟನೆ

ರೈಲ್ವೆ ಹಳಿಯ ಮೇಲೆ ನಡೆದು ಹೋಗುತ್ತಿದ್ದ ಕಾರ್ಮಿಕರಿಗೆ ಖಾಲಿಯಾಗಿ ಹೋಗುತ್ತಿದ್ದ ಗೂಡ್ಸ್ ರೈಲು ಡಿಕ್ಕಿಯಾಗಿದೆ. ಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

'ಶ್ರಮಿಕ್ ವಿಶೇಷ ರೈಲು' ವಿವಾದ ಎಬ್ಬಿಸಿದ್ದು ಏಕೆ? 'ಶ್ರಮಿಕ್ ವಿಶೇಷ ರೈಲು' ವಿವಾದ ಎಬ್ಬಿಸಿದ್ದು ಏಕೆ?

"ಮಧ್ಯಪ್ರದೇಶಕ್ಕೆ ಹೊರಟಿದ್ದ ವಲಸೆ ಕಾರ್ಮಿಕರು ರೈಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಶುಕ್ರವಾರ ಮುಂಜಾನೆ 5.15ರ ಸುಮಾರಿಗೆ ಈ ಘಟನೆ ನಡೆದಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

English summary
More than 10 migrant workers crushed by a speeding goods train in Aurangabad, Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X