ಟಿವಿ9 ಸುದ್ದಿವಾಹಿನಿ ಸಿಬ್ಬಂದಿ ಸಾವು, ಕೊವಿಡ್ 19 ಶಂಕೆ
ಮುಂಬೈ, ಮೇ 22: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕು ಎಗ್ಗಿಲ್ಲದಂತೆ ಹರಡುತ್ತಿದ್ದು, ಮಾಧ್ಯಮ ಲೋಕಕ್ಕೂ ಇದರ ಬಿಸಿ ತಟ್ಟಿದೆ. ಟಿವಿ9 ಮರಾಠಿ ಸುದ್ದಿ ವಾಹಿನಿಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಕೊವಿಡ್ 19 ಇರುವ ಶಂಕೆ ವ್ಯಕ್ತವಾಗಿದೆ. ಆದರೆ, ಮೃತ ಸಿಬ್ಬಂದಿಗೆ ಸೋಂಕು ತಗುಲಿರಲಿಲ್ಲ ಎಂದು ಸಂಸ್ಥೆ ಹೇಳಿದೆ.
Recommended Video
ನೋಯ್ಡಾ ಝೀ ಸುದ್ದಿ ವಾಹಿನಿಯ 29 ಮಂದಿ ಸಿಬ್ಬಂದಿಗೆ ಕೊವಿಡ್ 19 ಪಾಸಿಟಿವ್ ಇರುವ ಸುದ್ದಿ ಬಂದಿರುವ ಬೆನ್ನಲ್ಲೇ ಮುಂಬೈನಿಂದ ಈ ಸಾವಿನ ಸುದ್ದಿ ಬಂದಿದೆ. ಪ್ರಾದೇಶಿಕ ಸುದ್ದಿ ವಾಹಿನಿ ಟಿವಿ9ಯ ಐಟಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 44 ವರ್ಷ ವಯಸ್ಸಿನ ರೋಷನ್ ಡಯಾಸ್ ಎಂಬುವರು ಬುಧವಾರದಂದು ಮೃತರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಟಿವಿ9 ಕಚೇರಿಯ 11 ಮಂದಿ ಸಿಬ್ಬಂದಿಗೆ ಮೇ 2 ಹಾಗೂ 4 ರ ನಡುವೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಮೊದಲಿಗೆ ಇಬ್ಬರು ಸಿಬ್ಬಂದಿಗೆ ಕಾಯಿಲೆಯ ಲಕ್ಷಣಗಳು ಕಾಣಿಸಿದ್ದರಿಂದ ಮಿಕ್ಕ 20ಕ್ಕೂ ಅಧಿಕ ಸಿಬ್ಬಂದಿಯನ್ನು ಲೋವರ್ ಪಾರೆಲ್ ನಲ್ಲಿರುವ ಕಚೇರಿಗೆ ಶಿಫ್ಟ್ ಮಾಡಲಾಯಿತು.

ಆದರೆ, ಡೆಸ್ಕ್ ವರ್ಕ್ ನಲ್ಲಿದ್ದ ರೋಷನ್ ಸೇರಿದಂತೆ ಹಲವಾರು ಮಂದಿ ಕಚೇರಿಯಲ್ಲೇ ಅನಿವಾರ್ಯವಾಗಿ ಉಳಿದುಕೊಂಡು ಕ್ವಾರಂಟೈನ್ ನಲ್ಲಿದ್ದರು. ರೋಗ ಲಕ್ಷಣ ಕಾಣಿಸಿಕೊಂಡ ಇಬ್ಬರು ಸೇರಿದಂತೆ ಒಟ್ಟು 11 ಸಿಬ್ಬಂದಿಗೆ ಕೊವಿಡ್ 19 ಪಾಸಿಟಿವ್ ಎಂದು ದೃಢಪಟ್ಟಿತ್ತು.
ಮೇ 7ರಂದು ಬೃಹನ್ ಮುಂಬೈ ಮುನ್ಸಿಪಾಲ್ ಪಾಲಿಕೆ ವತಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕೊವಿಡ್ 19 ಪರೀಕ್ಷೆ ನಡೆಸಲಾಯಿತು. ಆದರೆ, ಟಿವಿ9 ಮರಾಠಿಯ 9 asymptomatic ರೋಗ ಲಕ್ಷಣವಿಲ್ಲದ ಸಿಬ್ಬಂದಿಗಳಿಗೆ ಪರೀಕ್ಷೆಯಲ್ಲಿ ನೆಗಟಿವ್ ಬಂದಿತ್ತು. ರೋಷನ್ ಡಯಸ್ ಗೆ ಕೂಡಾ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ.
ಈ ಬಗ್ಗೆ ಪ್ರತಿಕ್ರಿಯಿಸಿದ ಟಿವಿ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಿನೋದ್ ಜಗದಾಳೆ, ಟಿವಿ9 ಸಿಬ್ಬಂದಿ ಮೃತಪಟ್ಟಿರುವ ಸುದ್ದಿ ದುರಾದೃಷ್ಟಕರ, ಏಪ್ರಿಲ್ 3ನೇ ವಾರದಲ್ಲಿ ಮುಂಬೈನ 53 ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾದ ಬಳಿಕ ಎಲ್ಲರೊಂದಿಗೆ ಮಾತನಾಡಿದ್ದೆ. ನಂತರ ಎಲ್ಲಾ ಮಾಧ್ಯಮಗಳಲ್ಲೂ ಕಠಿಣ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿತ್ತು.
ಆದರೆ, ರೋಷನ್ ವಿಷಯದಲ್ಲಿ ಯಾವ ರೀತಿ ಲೋಪ ಉಂಟಾಗಿದೆಯೋ ಸ್ಪಷ್ಟವಾಗಿಲ್ಲ. ಟಿವಿ9ನ ಸಿಬ್ಬಂದಿಗೆ ಸೋಂಕು ತಗುಲಿದ್ದರೂ ರೋಷನ್ ಗೆ ಸೋಂಕು ತಗುಲಿರಲಿಲ್ಲ ಎಂಬ ಮಾಹಿತಿಯಿದೆ. ಮಂಗಳವಾರದಂದು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ರೋಷನ್ ಅಸ್ಪತ್ರೆ ಸೇರಿದ ಮರುದಿನವೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಎಂದಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications