ಮಹಾಕಾಳಿ ಸೀರಿಯಲ್ ನಟರ ದುರ್ಮರಣಕ್ಕೆ ಕಂಬನಿ
ಮುಂಬೈ, ಆಗಸ್ಟ್ 20: ಕಲರ್ಸ್ ವಾಹಿನಿಯ ಪೌರಾಣಿಕ ಧಾರಾವಾಹಿ 'ಮಹಾಕಾಳಿ -ಅಂತ್ ಹೈ ಆರಂಭ್ ಹೈ' ಯಲ್ಲಿ ನಟಿಸುತ್ತಿದ್ದ ಗಗನ್ ಕಾಂಗ್ ಮತ್ತು ಅರ್ಜಿತ್ ಲವಾನಿಯಾ ಹಾಗೂ ಸ್ಪಾಟ್ ಬಾಯ್ ಯೊಬ್ಬ ದುರಂತ ಸಾವನ್ನಪ್ಪಿರುವುದಕ್ಕೆ ಟ್ವಿಟ್ಟರಲ್ಲಿ ಸಂತಾಪ ಸಂದೇಶಗಳು ಹರಿದು ಬಂದಿವೆ.
ಉಂಬರ್ ಗಾಂವ್ ಸ್ಟುಡಿಯೋದಲ್ಲಿ ಚಿತ್ರೀಕರಣ ಮುಗಿಸಿಕೊಂಡು, ಮುಂಬೈ - ಅಹಮದಾಬಾದ್ ಹೈವೇಯಲ್ಲಿ ಗೋರೆಗಾಂವ್ ನಲ್ಲಿರುವ ಮನೆಗೆ ತೆರಳುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರ್, ನಿಂತಿದ್ದ ಸ್ಟೇಷನರಿ ಟ್ರೈಲರ್ ಗೆ ಡಿಕ್ಕಿ ಹೊಡೆದಿತ್ತು. ಕಾರು ಅಪಘಾತದಲ್ಲಿ ಈ ಮೂವರು ಶನಿವಾರದಂದು ಸಾವನ್ನಪ್ಪಿದ್ದರು.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಗಗನ್ ಕಾಂಗ್, ಅರ್ಜಿತ್ ಲವಾನಿಯಾ ಹಾಗೂ ಸ್ಪಾಟ್ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆಯಿತು.
Maharashtra: 3 people dead after a container hit a car on Mumbai- Ahmedabad highway near Palghar's Manor town. pic.twitter.com/JkXuNMzQCw
— ANI (@ANI) August 19, 2017
'ಮಹಾಕಾಳಿ' ಧಾರಾವಾಹಿಯಲ್ಲಿ ಗಗನ್ ಇಂದ್ರನ ಪಾತ್ರದಲ್ಲಿ, ಅರ್ಜಿತ್ ನಂದಿ ಪಾತ್ರದಲ್ಲಿ ನಟಿಸುತ್ತಿದ್ದರು.
Our friends and MahaKaali actors Gagan Kang and Arijit Lavania (Indra and Nandi) met with a horrible car accident. They're no more...
— Utkarsh Naithani (@utkarshnaithani) August 19, 2017
ಗಗನ್ ಕಾಂಗ್ ಅವರು ಕಾರು ಚಾಲನೆ ಮಾಡುತ್ತಿದ್ದರು, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ, ಕಾರಿನಲ್ಲಿ ಮದ್ಯದ ಬಾಟಲಿಗಳು ಕಂಡು ಬಂದಿದ್ದು, ಮದ್ಯದ ನಶೆಯಲ್ಲಿ ವಾಹನ ಚಲಾಯಿಸಿರುವ ಶಂಕೆಯೂ ವ್ಯಕ್ತವಾಗಿದೆ.
#Shocking: Actors #GaganKang and #ArjitLavania (#DevrajIndra and #Nandi in #MahaKaali) die in car accident. #ColorsTV
— salil sand (@isalilsand) August 19, 2017
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications