ವಿನೋದ್ ಖನ್ನಾ ಸಾವಿಗೆ ಟ್ವಿಟ್ಟರ್ ನಲ್ಲಿ ಗಣ್ಯರ ಸಂತಾಪ
ಇಂದು ಮುಂಬೈಯಲ್ಲಿ ಇಹಲೋಕ ತ್ಯಜಿಸಿದ ಬಾಲಿವುಡ್ ನಟ ಮತ್ತು ವಿನೋದ್ ಖನ್ನಾ(70) ಅವರ ನಿಧನಕ್ಕೆ ಅನೇಕ ಗಣ್ಯರು ಟ್ವಿಟ್ಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಂಬೈ, ಏಪ್ರಿಲ್ 27: ಇಂದು ಮುಂಬೈಯಲ್ಲಿ ಇಹಲೋಕ ತ್ಯಜಿಸಿದ ಬಾಲಿವುಡ್ ನಟ ಮತ್ತು ವಿನೋದ್ ಖನ್ನಾ(70) ಅವರ ನಿಧನಕ್ಕೆ ಅನೇಕ ಗಣ್ಯರು ಟ್ವಿಟ್ಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟರೂ, ಬಿಜೆಪಿಯ ಸಕ್ರಿಯ ರಾಜಕಾರಣಿಯೂ ಆಗಿದ್ದ ವಿನೋದ್ ಖನ್ನಾ ಅವರು ಬ್ಲಾಡರ್ ಕ್ಲಾಸಿನೋಮಾ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು.
ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಮುಂಬೈನಲ್ಲಿರುವ ಸರ್. ಎಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಗೆ ದಾಖಲಾಗಿದ್ದ ವಿನೋದ್ ಖನ್ನಾ ಇಂದು (ಏಪ್ರಿಲ್ 27) ಬೆಳಿಗ್ಗೆ 11:20ರ ವೇಳೆಗೆ ಕೊನೆಯುಸಿರೆಲೆದರು. ಅಮರ್, ಅಕ್ಬರ್, ಆಂಟನಿ ಚಿತ್ರದ 'ಅಮರ್' ಪಾತ್ರದಿಂದಾಗಿ ಸಿನಿಪ್ರಿಯರ ಮನಸ್ಸಿನಲ್ಲಿ ಅಚ್ಚೊತ್ತಿದ್ದ ವಿನೋದ್ ಖನ್ನಾ ಇದೀಗ ಅಮರರಾಗಿದ್ದಾರೆ ಎಂದು ಕೆಲವರು ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.[UPDATED: ಬಾಲಿವುಡ್ ಹಿರಿಯ ನಟ ವಿನೋದ್ ಖನ್ನಾ ಇನ್ನಿಲ್ಲ]
ಮೇರೆ ಅಪ್ನೆ, ಮೇರಾ ಗಾಂವ್ ಮೇರಾ ದೇಶ್, ಗದ್ದರ್, ಜೈಲ್ ಯಾತ್ರಾ, ಇಮ್ತಿಹಾನ್, ಅಮರ್ ಅಕ್ಬರ್ ಆಂಟನಿ, ಖುರ್ಬಾನಿ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದ ವಿನೋದ್ ಖನ್ನಾ ಬಾಲಿವುಡ್ ಅಂಗಳದಲ್ಲಿ ಅಮರರಾಗಿದ್ದಾರೆ. ಅವರಿಗೆ ಟ್ವಿಟ್ಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿದ ಗಣ್ಯರ ನುಡಿ ಇಲ್ಲಿದೆ...
|
ನರೇಂದ್ರ ಮೋದಿ
ಒಬ್ಬ ನಟರಾಗಿದ್ದ, ಉತ್ತಮ ನಾಯಕರಾಗಿದ್ದ, ಎಲ್ಲಕ್ಕಿಂತ ಹೆಚ್ಚಾಗಿ ಒಬ್ಬ ಅತ್ಯುತ್ತಮ ಮನುಷ್ಯರಾಗಿದ್ದ ವಿನೋದ್ ಖನ್ನಾ ಅವರನ್ನು ನಾನೆಂದಿಗೂ ನೆನಪಿಸಿಕೊಳ್ಳುತ್ತೇನೆ. ಅವರ ಸಾವಿನಿಂದ ಅತೀವ ದುಃಖವಾಗಿದೆ, ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
|
ಅರುಣ್ ಜೇಟ್ಲಿ
ಅತ್ಯುತ್ತಮ ನಟ ಮತ್ತು ಬಿಜೆಪಿ ಸಂಸದರಾಗಿದ್ದ ವಿನೋದ್ ಖನ್ನಾ ಅವರ ನಿಧನಕ್ಕೆ ತೀವ್ರ ನೋವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ದಯಪಾಲಿಸಲಿ, ಅವರ ಕುಟುಂಬಕ್ಕೂ ಈ ನೋವನ್ನು ಶಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ.
|
ಕರಣ್ ಜೋಹರ್
ವಿನೋದ್ ಖನ್ನಾ ಅವರ ಅಭಿನಯಕ್ಕೆ ಸಮನಾಗಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ. ಅವರು ತೋರಿಸಿಕೊಟ್ಟ ಹಾದಿಯಲ್ಲೇ ನಾವಿಂದು ನಡೆಯುತ್ತಿದ್ದೇವೆ. ಅವರಿಗಾಗಿ ನಮ್ಮ ಪ್ರಾರ್ಥನೆ ಮತ್ತು ಸಂತಾಪ ಎಂದು ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ಟ್ವೀಟ್ ಮಾಡಿದ್ದಾರೆ.
|
ಅನುಪಮ್ ಖೇರ್
ವಿನೋದ್ ಖನ್ನಾ ಅವರ ವ್ಯಕ್ತಿತ್ವವೆಂದರೆ ಅದಕ್ಕೆ ಆಯಸ್ಕಾಂತದ ಸೆಳೆತವಿತ್ತು. ತೆರೆಯ ಮೇಲೆ ಮತ್ತು ತೆರೆಯ ಹಿಂದೆ ಅವರಿಗಿದ್ದಿದ್ದು ಒಂದು ಚಾರ್ಮಿಂಗ್ ವ್ಯಕ್ತಿತ್ವ. ಅವರು ನಿಜಕ್ಕೂ ದಯಾಮಯಿ, ಎಲ್ಲರನ್ನೂ ಪ್ರೀತಿಸುತ್ತಿದ್ದವರು. ಅವರನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ ಎಂದು ನಟ ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ.

ವೆಂಕಯ್ಯ ನಾಯ್ಡು
ಎನ್ ಡಿ ಎ- 1 ಸರ್ಕಾರದಲ್ಲಿ ನನ್ನ ಶೋದ್ಯೋಗಿಯಾಗಿದ್ದ ವಿನೋದ್ ಖನ್ನಾ ಅವರ ನಿಧನ ಅತೀವ ನೋವು ತಂದಿದೆ. ಅವರು ನಿಜಕ್ಕೂ ಒಬ್ಬ ದಂತಕತೆಯಾಗಿದ್ದವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೇಂದ್ರ ನಗರಾಬಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications