ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!
Recommended Video

ಮುಂಬೈ, ಜನವರಿ 03: ದಲಿತ ಮತ್ತು ಮರಾಠರ ನಡುವಿನ ಕದನಕ್ಕೆ ಮಹಾರಾಷ್ಟ್ರ ನಲುಗಿದೆ. ಪ್ರತಿಭಟನೆ ಹಿಂಸಾಚಾರವಾಗಿ ತಿರುಗಿ, ಇಂದು(ಜ.03) ಮಹಾರಾಷ್ಟ್ರ ರಾಜ್ಯಾದ್ಯಂತ ಬಂದ್ ಆಚರಿಸಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಬಂದ್ ಗೆ ಕರೆ ನೀಡಿದ್ದರು.
ಭೀಮ ಕೊರೆಗಾಂವ್ ಎಂಬಲ್ಲಿ ಜನವರಿ 1, 1818 ರಂದು ನಡೆದ ಕದನದಲ್ಲಿ ಪೇಶ್ವೆಗಳ ವಿರುದ್ಧ ಹೋರಾಡುವುದಕ್ಕೆ ಬ್ರಿಟೀಶ್ ಈಸ್ಟ್ ಇಂಡಿಯಾ ಕಂಪೆನಿಯೊಂದಿಗೆ ಕೈಜೋಡಿಸಿದ್ದ ಮೆಹರ್ ಸಮುದಾಯ ಈ ಹೋರಾಟದಲ್ಲಿ ಗೆಲುವು ಸಾಧಿಸಿತ್ತು. ಪೇಶ್ವೆಗಳ ವಿರುದ್ಧ, ದಲಿತ ಸಮುದಾಯ ಜಯಗಳಿಸಿದ ಈ ದಿನವನ್ನು ಭೀಮ ಕೊರೆಗಾಂವ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ.
ಈ ದಿನದ 200 ನೇ ವರ್ಷಾಚರಣೆ ಜನವರಿ 1, 2018 ರಂದು ಪುಣೆಯಲ್ಲಿ ನಡೆಯುತ್ತಿತ್ತು. ಈಸ್ಟ್ ಇಂಡಿಯಾ ಕಂಪೆನಿಯ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ ಎಂದು ಆರೋಪಿಸಿ, ದಲಿತ ಸಮುದಾಯದ ವಿರುದ್ಧ ಕೆಲ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯೇ ಹಿಂಸಾಚಾರವಾಗಿ ಬದಲಾದ ಪರಿಣಾಮ ಮಹಾರಾಷ್ಟ್ರದಲ್ಲಿ ಉದ್ವಿಗ್ನ ವಾತಾವರಣ ತಲೆದೋರಿತ್ತು.
ಈ ಹಿಂಸಾಚಾರದ ಕೆಲವು ವಿಡಿಯೋಗಳು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ.
|
ರೈಲ್ ರುಖೋ
ಪ್ರತಿಭಟನಾಕಾರರು ರೈಲ್ ರುಖೋ ಚಳವಳಿ ನಡೆಸಿ, ಥಾಣೆ ರೈಲು ನಿಲ್ದಾಣದ ರೈಲುಗಳನ್ನು ತಡೆದಿದ್ದರು. ಸ್ಥಳೀಯ ರೈಲು ಸಂಚಾರ ಸದ್ಯಕ್ಕೆ ಪುನರಾರಂಭವಾಗಿದೆ ಎಂದು ರಶ್ಮಿ ರಜಪೂತ್ ಎಂಬುವವರು ವಿಡಿಯೋ ಸಮೇತ ಟ್ವೀಟ್ ಮಾಡಿದ್ದಾರೆ.
|
ಪೊಲೀಸ್ ಬಿಗಿಬಂದೋಬಸ್ತ್
ಜ.2 ರಂದು ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಮುಂಬೈ, ಅದರಲ್ಲೂ ಮಧ್ಯ ಮುಂಬೈ ಭಾಗದಲ್ಲಿ ಎಲ್ಲೆಲ್ಲೂ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಬಿಗಿ ಬಂದೋಬಸ್ತ್ ನ ಮುಂಬೈ ವಿಡಿಯೋವೂ ಟ್ವಿಟ್ಟರ್ ನಲ್ಲಿದೆ.
|
ರೈಲಿನ ಮುಂಬದಿಗೆ ಜೋತುಬಿದ್ದ ಪ್ರತಿಭಟನಕಾರರು
ಗೊರೆಗಾಂವ್ ಬಳಿ ತೆರಳುತ್ತಿದ್ದ ರೈಲನ್ನು ತಡೆದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ರೈಲಿನ ಎದುರಲ್ಲಿ ಜೋತುಬಿದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸಂಚಾರಕ್ಕಾಗಿ ರೈಲಿನ ಮೇಲೆ ಅವಲಂಬಿತವಾಗಿದ್ದವರು ಪರಿತಪಿಸುವಂತಾಯಿತು.
|
ಶಾಂತ ರೀತಿಯಲ್ಲಿ ಯಾತ್ರೆ
ಚೆಂಬೂರಿನಲ್ಲಿ ಯಾತ್ರೆ ಶಾಂತ ರೀತಿಯಲ್ಲಿ ಸಾಗುತ್ತಿದ್ದು, ಯಾತ್ರೆ ಪೊಲೀಸರ ಕಣ್ಗಾವಲಿನಲ್ಲಿ ನಡೆಯುತ್ತಿರುವ ವಿಡಿಯೋವನ್ನು ಜಿತೇಂದ್ರ ಜೈನ್ ಎಂಬುವವರು ಹಂಚಿದ್ದಾರೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications