ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ರಚನೆ ವಿಷಯದಲ್ಲಿ ಉದ್ಧವ್ ಠಾಕ್ರೆ ಮಾತೇ ಅಂತಿಮ: ಆದಿತ್ಯ ಠಾಕ್ರೆ

|
Google Oneindia Kannada News

ಮುಂಬೈ, ನವೆಂಬರ್ 1: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

"ರಾಜ್ಯದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಆದರೆ ಸರ್ಕಾರ ರಚನೆಯ ಕುರಿತಂತೆ ನಾನು ಮಾತನಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಉದ್ಧವ್ ಜೀ ಅವರ ಮಾತೇ ಅಂತಿಮ" ಎಂದು ವರ್ಲಿ ಶಾಸಕ ಆದಿತ್ಯ ಠಾಕ್ರೆ ಪತ್ರಕರ್ತರಿಗೆ ಹೇಳಿದ್ದಾರೆ.

ಮಹಾರಾಷ್ಟ್ರಕ್ಕೆ ಫಡ್ನವಿಸ್ ಸಿಎಂ, ಮತ್ತಿಬ್ಬರು ಡಿಸಿಎಂ: ಮೂಲಗಳಿಂದ ಮಾಹಿತಿಮಹಾರಾಷ್ಟ್ರಕ್ಕೆ ಫಡ್ನವಿಸ್ ಸಿಎಂ, ಮತ್ತಿಬ್ಬರು ಡಿಸಿಎಂ: ಮೂಲಗಳಿಂದ ಮಾಹಿತಿ

ಶಿವಸೇನೆ ಇಟ್ಟಿರುವ 50:50 ಒಪ್ಪಂದಕ್ಕೆ ಬರಲು ಬಿಜೆಪಿ ಸಿದ್ಧವಿಲ್ಲ. ಎರಡೂವರೆ ವರ್ಷ ಶಿವಸೇನೆ ಮತ್ತು ಮತ್ತೆರಡೂವರೆ ವರ್ಷ ಬಿಜೆಪಿ ಮುಖ್ಯಮಂತ್ರಿ ಹುದ್ದೆ ಪಡೆಯಬೇಕು ಎಂಬ ಶಿವಸೇನೆಯ ಬೇಡಿಕೆಗೆ ಬಿಜೆಪಿ ಸೊಪ್ಪುಹಾಕುತ್ತಿಲ್ಲ.

Uddhav Thacherays Words Are Final: Aaditya Tackeray

ಶಿವಸೇನೆ ಜತೆ ಬಿಜೆಪಿ ಸೇರಿಯೇ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ: ಫಡ್ನವೀಸ್ಶಿವಸೇನೆ ಜತೆ ಬಿಜೆಪಿ ಸೇರಿಯೇ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ: ಫಡ್ನವೀಸ್

ಈ ನಡುವೆ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ತಾನೇ ಇಟ್ಟುಕೊಂಡು ಶಿವಸೇನೆಗೆ ಉಪಮುಖ್ಯಮಂತ್ರಿ ಹುದ್ದೆ ಮತ್ತು ಸಚಿವ ಸಂಪುಟದ ಆಯಕಟ್ಟಿನ ಹುದ್ದೆ ನೀಡಲು ಒಪ್ಪಿಕೊಂಡಿದೆ. ಶಿವಸೇನೆಯಿಂದ ಒಬ್ಬರು, ಬಿಜೆಪಿಯಿಂದ ಒಬ್ಬರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲು ಅದು ನಿರ್ಧರಿಸಿದೆ. ಆದರೆ ಇದಕ್ಕೆ ಶಿವಸೇನೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ.

ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲ ಬಿಜೆಪಿಗೆ ಅನಿವಾರ್ಯವಾಗಿದೆ.

English summary
Aaditya Thackeray Said, Shiv Sena Chief Will Take Final Call On Maharashtra Government Formation
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X