ಲೋಕಸಭೆ ಚುನಾವಣೆಗೆ ಉದ್ಧವ್ ಠಾಕ್ರೆ ನೇತೃತ್ವವಿಲ್ಲ: ಶಿವಸೇನೆ ಬಂಡಾಯ ಶಾಸಕ
ಮುಂಬೈ, ಜುಲೈ 21: 2024ರ ಲೋಕಸಭೆ ಚುನಾವಣೆಗೆ ಉದ್ಧವ್ ಠಾಕ್ರೆ ಗೆಲ್ಲುವ ಮುಖವಲ್ಲ ಮತ್ತು ಅವರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂದು ಶಿವಸೇನೆ ಬಂಡಾಯ ನಾಯಕ ರಾಹುಲ್ ಶೆವಾಲೆ ಗುರುವಾರ ಹೇಳಿದ್ದಾರೆ.
'ಮುಂದಿನ ಲೋಕಸಭೆ ಚುನಾವಣೆಗೆ ನಾಯಕತ್ವದ ವಿಷಯವಾಗಿ ಶಿವಸೇನೆಯಲ್ಲಿ ಉದ್ಧವ್ ಠಾಕ್ರೆ ಅವರೊಂದಿಗೆ ಹಲವಾರು ಸಭೆಗಳನ್ನು ನಡೆಸಲಾಗಿದೆ. ನಾನು ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ನಾಯಕತ್ವದ ವಿಷಯವನ್ನು ಪ್ರಸ್ತಾಪಿಸಿದೆ. ಉಪಸ್ಥಿತರಿದ್ದ ಸಂಜಯ್ ರಾವತ್ ಅವರು ಚುನಾವಣೆಯ ನೇತೃತ್ವವನ್ನು ಠಾಕ್ರೆ ತೆಗೆದುಕೊಳ್ಳಲಿದ್ದಾರೆ ಎಂದು ಸನ್ನೆ ಮಾಡಿದರು. ನಾವು ಠಾಕ್ರೆ ಅವರನ್ನು ಗೌರವಿಸುತ್ತೇವೆ ಆದರೆ ನಾವು ವಾಸ್ತವಿಕವಾಗಿರಬೇಕು ಎಂದು ನಾನು ಹೇಳಿದೆ. ಅವರು ಲೋಕಸಭೆ ಚುನಾವಣೆ ನೇತೃತ್ವ ವಹಿಸಲು ಸಾಧ್ಯವಿಲ್ಲ' ಎಂದು ಬಂಡಾಯ ನಾಯಕ ರಾಹುಲ್ ಶೆವಾಲೆ ಹೇಳಿದ್ದಾರೆ.
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಮೈತ್ರಿಯಲ್ಲಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮತ್ತು ಕಾಂಗ್ರೆಸ್ ಹಲವಾರು ಕ್ಷೇತ್ರಗಳಲ್ಲಿ ಪ್ರತಿಸ್ಪರ್ಧಿಗಳಾಗಿರುವುದರಿಂದ ವಿಷಯಗಳನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಇದಲ್ಲದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಯುಪಿಎ ಚುನಾವಣೆಗಳನ್ನು ಎದುರಿಸಲಿದೆ, ಇದು ನಮ್ಮ ಕಾರ್ಯಕರ್ತರಿಗೆ ಸ್ವೀಕಾರಾರ್ಹವಲ್ಲ" ಎಂದು ತಿಳಿಸಿದ್ದಾರೆ.

ಶಿವಸೇನೆಯಲ್ಲಿ ದೊಡ್ಡ ಪ್ರಮಾಣದ ಬಂಡಾಯದ ಕಾರಣದಿಂದ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ, ಜೂನ್ 30 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನೇಮಕಗೊಂಡ ಶಿವಸೇನಾ ಬಂಡಾಯಗಾರ ಏಕನಾಥ್ ಶಿಂಧೆ ಅವರಿಗೆ ಶೆವಾಲೆ ಮತ್ತು ಇತರ 11 ಲೋಕಸಭಾ ಸದಸ್ಯರು ಬೆಂಬಲ ಸೂಚಿಸಿದ್ದಾರೆ.
ಹೆಚ್ಚಿನ ಸಂಖ್ಯೆಯ ಶಿವಸೇನಾ ನಾಯಕರು ಬಿಜೆಪಿಯೊಂದಿಗೆ ಮೈತ್ರಿಗೆ ಒಲವು ತೋರಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎಂದು ರಾಹುಲ್ ಶೆವಾಲೆ ತಿಳಿಸಿದ್ದಾರೆ.
ಕಳೆದ ಬಾರಿಯ ಸಾರ್ವತ್ರಿಕ ಚುನಾವಣೆಯ ಚರ್ಚೆಯ ಸಮಯದಲ್ಲಿ ಪಕ್ಷದ ನಾಯಕತ್ವವು ಎನ್ಸಿಪಿಗೆ ಪ್ರಮುಖ ಲೋಕಸಭಾ ಕ್ಷೇತ್ರಗಳನ್ನು ನೀಡಿದಾಗ ಶಿವಸೇನೆ ನಾಯಕರು ಪಕ್ಷದೊಳಗೆ ಅಸುರಕ್ಷಿತ ಭಾವನೆಯನ್ನು ಅನುಭವಿಸಲು ಪ್ರಾರಂಭಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications