ನಮ್ಮ ಸರ್ಕಾರ ಇಡಿ, ಸಿಬಿಐ ತನಿಖೆಗೆಲ್ಲಾ ಹೆದರುವುದಿಲ್ಲ: ಉದ್ಧವ್ ಠಾಕ್ರೆ
ಮುಂಬೈ, ನವೆಂಬರ್ 27:ನಮ್ಮ ಸರ್ಕಾರವು ಇಡಿ, ಸಿಬಿಐ ತನಿಖೆಗೆಲ್ಲಾ ಹೆದರುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಂದರ್ಶನ ನೀಡಿ ಮಾತನಾಡಿದ ಅವರು, ಸರ್ಕಾರಕ್ಕೆ ಜನರ ಆಶೀರ್ವಾದವಿದೆ. ಸರ್ಕಾರವನ್ನು ಇಡಿ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು, ಕುಗ್ಗಿಸುವಂತಹ ಕೀಳು ರಾಜಕೀಯವನ್ನು ತೋರಿಸುವ ಅಗತ್ಯವಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ಹಗೆತನದ ರಾಜಕೀಯದಲ್ಲಿ ತೊಡಗಿದ್ದು, ಮಹಾ ವಿಕಾಸ ಅಘಡಿ(ಎಂವಿಎ) ಸರ್ಕಾರವನ್ನು ಜಾರಿ ನಿರ್ದೇಶನಾಲಯ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ ಎಂದರು.

ಮಹಾರಾಷ್ಟ್ರ ಸರ್ಕಾರ ಒಂದು ವರ್ಷದ ಆಡಳಿತ ಪೂರೈಸಿದ್ದು ಈ ಸಂದರ್ಭದಲ್ಲಿ ಶಿವಸೇನೆ ಮುಖವಾಣಿ ಸಾಮ್ನಾಗೆ ನೀಡಿರುವ ಸಂದರ್ಶನದಲ್ಲಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.
ಇತ್ತೀಚೆಗೆ ಶಿವಸೇನೆ ಸಂಸದ ಪ್ರತಾಪ್ ಸರ್ನೈಕ್ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ನಡೆದ ದಾಳಿಯಿದು.
ಇದೇ ಸಂದರ್ಭದಲ್ಲಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ತಮ್ಮ ಸರ್ಕಾರ ಪೂರ್ಣ ಆಡಳಿತಾವಧಿಯನ್ನು ಪೂರ್ಣಗೊಳಿಸಲಿದೆ ಎಂಬ ವಿಶ್ವಾಸವನ್ನು ಕೂಡ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ತಮಗೆ ಯಾವ ಸರ್ಕಾರ ಬೇಕು ಎಂದು ಜನತೆ ತೀರ್ಮಾನ ಮಾಡುತ್ತಾರೆ ಎಂದರು.
ಕೆಲವರು ಮೂರು ಪಕ್ಷಗಳು ಒಂದಾಗಲಿಕ್ಕಿಲ್ಲ, ಒಂದಾದರೂ ಹೆಚ್ಚು ಸಮಯ ಉಳಿಯಲಿಕ್ಕಿಲ್ಲ ಎಂದು ಭಾವಿಸಿದರು. ಆದರೆ ನಾವು ಮುಂದುವರೆಯುತ್ತಿದ್ದೇವೆ, ಇನ್ನೂ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸಲಿದೆ ಎಂದರು.
ಹಗೆ, ದ್ವೇಷದ ದಾರಿ ಹಿಡಿಯುವುದು ನನಗೆ ಇಷ್ಟವಿಲ್ಲ. ಈ ಕೊಳಕು ರಾಜಕೀಯವನ್ನು ನಿಲ್ಲಿಸಿ ಎಂದು ವಿರೋಧ ಪಕ್ಷದ ನಾಯಕರನ್ನು ಉದ್ದೇಶಿಸಿ ಠಾಕ್ರೆ ಮಾತನಾಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications