ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾ ಮೇಲ್ಮನೆಗೆ ಅವಿರೋಧವಾಗಿ ಪ್ರವೇಶಿಸಲಿರುವ ಉದ್ಧವ್ ಠಾಕ್ರೆ

|
Google Oneindia Kannada News

ಮುಂಬೈ, ಮೇ 11: ಪಕ್ಷದ ಒಬ್ಬ ಅಭ್ಯರ್ಥಿಯ ನಾಮಪತ್ರವನ್ನು ಹಿಂತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಹೇಳಿರುವುದರಿಂದ , ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅವಿರೋಧವಾಗಿ ಮಹಾರಾಷ್ಟ್ರ ವಿಧಾನಪರಿಷತ್‌ಗೆ ಆಯ್ಕೆಯಾಗುವುದು ಖಚಿತವಾಗಿದೆ.

ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್‌ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

ಈಗ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆದಿಯಾಗಿ ಮೇಲ್ಮನೆ ಚುನಾವಣೆಗೆ 9 ಅಭ್ಯರ್ಥಿಗಳು ಕಣದಲ್ಲಿದ್ದು, ಉದ್ಧವ್ ಠಾಕ್ರೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

Uddhav
ಮೇಲ್ಮನೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಮೇ.09 ರಂದು ಏಕಾಏಕಿಯಾಗಿ 2 ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಎರಡನೇ ಅಭ್ಯರ್ಥಿಯನ್ನು ಹಿಂಪಡೆದಿದೆ.

ನನ್ನ ಸಿಎಂ ಹುದ್ದೆ ಉಳಿಸಲು ನಿಮ್ಮಿಂದ ಮಾತ್ರ ಸಾಧ್ಯ: ಮೋದಿಗೆ ಮಹಾ ಸಿಎಂ ಉದ್ಧವ್ ಠಾಕ್ರೆ ಮನವಿನನ್ನ ಸಿಎಂ ಹುದ್ದೆ ಉಳಿಸಲು ನಿಮ್ಮಿಂದ ಮಾತ್ರ ಸಾಧ್ಯ: ಮೋದಿಗೆ ಮಹಾ ಸಿಎಂ ಉದ್ಧವ್ ಠಾಕ್ರೆ ಮನವಿ

ಸ್ಪರ್ಧೆಯೇ ಇಲ್ಲದೇ ಮಹಾರಾಷ್ಟ್ರ ವಿಕಾಸ್ ಅಘಾಡಿಯ ಭಾಗವಾಗಿರುವ ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷ 5 ಸ್ಥಾನಗಳನ್ನು ಗಳಿಸಲಿದೆ. ಬಿಜೆಪಿ 4 ಸ್ಥಾನಗಳನ್ನು ಗಳಿಸಲಿದೆ.

ಮುಂಬೈ, ಪುಣೆಗೆ ಆಘಾತಕಾರಿ ಸುದ್ದಿ ನೀಡಿದ ಮಹಾ ಸಿಎಂಮುಂಬೈ, ಪುಣೆಗೆ ಆಘಾತಕಾರಿ ಸುದ್ದಿ ನೀಡಿದ ಮಹಾ ಸಿಎಂ

ಪಕ್ಷದ ಅಭ್ಯರ್ಥಿಯಾಗಿ ರಾಜೇಶ್ ರಾಥೋಡ್ ಅವರು ಕಣಕ್ಕೆ ಇಳಿಯುವರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಉಸ್ತುವಾರಿ ಮುಕುಲ್ ವಾಸ್ನಿಕ್ ಮೊದಲೇ ಹೇಳಿದ್ದರು. ಆದರೆ ಪಕ್ಷದ ಮುಖಂಡ ರಾಜಕಿಶೋರ್ ಅವರೂ ನಾಮಪತ್ರ ಸಲ್ಲಿಸಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು.

English summary
Maharashtra Chief Minister Uddhav Thackeray is set to enter the Legislative Council unopposed after the Congress on Sunday said it will withdraw one of its two candidates for elections to nine seats on May 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X