ಉರಿಯೋ ಬೆಂಕಿಗೆ ತುಪ್ಪ ಸುರಿದರಾ ಸಂಜಯ್ ರಾವತ್?
ಮುಂಬೈ, ನವೆಂಬರ್.26: ಉರಿಯೋ ಬೆಂಕಿಗೆ ತುಪ್ಪ ಸುರಿಯೋದು ಅಂದರೆ ಇದೆ ಅಂತಾ ಕಾಣುತ್ತದೆ. ಮಹಾರಾಷ್ಟ್ರದಲ್ಲಿ ರಚಿಸಿದ್ದ ಸರ್ಕಾರ ಪತನಗೊಂಡಿದ್ದು, ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಈ ಗಾಯದ ಮೇಲೆ ಶಿವಸೇನೆ ಶಿವಸೇನೆ ಮುಖಂಡರ ಹೇಳಿಕೆ ಬರೆ ಎಳೆದಂತಿದೆ.
ಮೂರು ದಿನಗಳ ಹಿಂದೆ ರಚಿಸಿದ್ದ ಬಿಜೆಪಿ ಸರ್ಕಾರ ಪಲ್ಟಿ ಹೊಡೆದಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್ ಎನ್ ಸಿಪಿ ಮಿತ್ರಪಕ್ಷಗಳು ಒಗ್ಗೂಡಿಕೊಂಡು ಸರ್ಕಾರ ರಚಿಸುವುದು ಪಕ್ಕಾ ಆಗಿದೆ. ಮಿತ್ರಪಕ್ಷಗಳ ನಾಯಕರಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆಯ್ಕೆ ಆಗಿದ್ದಾರೆ. ಡಿಸೆಂಬರ್.01ನೇ ತಾರೀಖಿನಂದು ನೂತನ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಮುಹೂರ್ತವೂ ಫಿಕ್ಸ್ ಆಗಿದೆ.
ಈ ಹಿನ್ನೆಲೆ ಶಿವಸೇನೆ ಮುಖಂಡ ಸಂಜಯ್ ರಾವತ್ ಶಾಕಿಂಗ್ ಸ್ಟೇಟ್ ಮೆಂಟ್ ಕೊಟ್ಟಿದ್ದಾರೆ. ಮುಂದಿನ ವಾರ ನಡೆಯಲಿರುವ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿಯಷ್ಟೇ ಅಲ್ಲ ಅಮಿತ್ ಷಾ ಅವರಿಗೂ ಆಹ್ವಾನ!
ಬಿಜೆಪಿ ಸಖ್ಯವನ್ನೇ ತೊರೆದು ಸರ್ಕಾರ ರಚಿಸಿರುವ ಶಿವಸೇನೆ ಬಿಜೆಪಿಗರಿಗೆ ಈ ಮೂಲಕ ಮಾತಿನೇಟು ಕೊಟ್ಟಿದೆ. ಮುಂದಿನ ಡಿಸೆಂಬರ್.01ರ ಬಾನುವಾರ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಅದ್ಧೂರಿ ಕಾರ್ಯಕ್ರಮಕ್ಕೆ ದೇಶದ ಗಣ್ಯರನ್ನೆಲ್ಲ ಆಹ್ವಾನಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅಷ್ಟೇ ಅಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications