Breaking: ಮಹಾ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಗೆ ಠಾಕ್ರೆ ಟೀಮ್
ಮುಂಬೈ, ಜುಲೈ 08: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನ್ನು ಆಹ್ವಾನಿಸಿದ ರಾಜ್ಯಪಾಲ ಭಗತ್ ಸಿಂಗ್ ನಿರ್ಧಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ.
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ವಿಶ್ವಾಸಮತಯಾಚನೆಗಾಗಿ ಸೋಮವಾರದ ನಡೆಸಿದ ವಿಧಾನಸಭೆ ಕಲಾಪಗಳನ್ನೂ ಪ್ರಶ್ನಿಸಲಾಗಿದೆ. ಅನರ್ಹತೆ ಪ್ರಕ್ರಿಯೆ ಬಾಕಿಯಿರುವ 16 ಬಂಡಾಯ ಶಾಸಕರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಠಾಕ್ರೆ ತಂಡವು ವಾದಿಸಿದೆ.

ಕಳೆದ ಜೂನ್ 28 ರಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವಂತೆ ಒತ್ತಾಯಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯಪಾಲರು ಆದೇಶ ಹೊರಡಿಸಿದರು. ಇದರಿಂದ ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ಅಲ್ಪಮತಕ್ಕೆ ಕುಸಿಯುವಂತೆ ಆಯಿತು ಎಂದು ಹೇಳಿಕೊಂಡಿದ್ದಾರೆ.
Recommended Video
ರಾಜ್ಯಪಾಲರ ನಡೆ ಬಗ್ಗೆ ಸಂಜಯ್ ರಾವತ್ ಟೀಕೆ:
ಬಿಜೆಪಿ ನಾಯಕರು ಭೇಟಿಯಾದ ನಂತರಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ "ರಫೇಲ್ಗಿಂತ ವೇಗವಾಗಿ ಜೆಟ್ ವೇಗದಲ್ಲಿ ಕಾರ್ಯನಿರ್ವಹಿಸಿದರು", ಎಂದು ಸಂಜಯ್ ರಾವತ್ ಟೀಕಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಸರ್ಕಾರಕ್ಕೆ ವಿಶ್ವಾಸ:
ಮಹಾರಾಷ್ಟ್ರದಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಬಾವುಟ ಹಾರಿಸಿದ್ದ ಸಿಎಂ ಏಕನಾಥ್ ಶಿಂಧೆ ತಮ್ಮ ಗುರಿ ತಲುಪುವಲ್ಲಿ ಯಶಸ್ವಿ ಆಗಿದ್ದಾರೆ.
ಕಳೆದ ಜೂನ್ 4ರ ಸೋಮವಾರ ವಿಶ್ವಾಸಮತಯಾಚನೆ ಪ್ರಕ್ರಿಯೆ ನಡೆಸಲಾಯಿತು. ರಾಜ್ಯದಲ್ಲಿ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕರು ಮೃತಪಟ್ಟ ಹಿನ್ನೆಲೆ ಸದಸ್ಯರ ಬಲವನ್ನು 287ಕ್ಕೆ ಇಳಿಸಲಾಗಿತ್ತು. ಈ ಪೈಕಿ ಬಹುಮತಕ್ಕೆ 144 ಮತಗಳ ಅಗತ್ಯವಿದ್ದು, 164 ಶಾಸಕರು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಮಂಡಿಸಿದ ವಿಶ್ವಾಸಮತ ಯಾಚನೆಗೆ ಪರವಾಗಿ ಮತ ಚಲಾಯಿಸಿದರು. 99 ಶಾಸಕರು ವಿಶ್ವಾಸಮತಯಾಚನೆಗೆ ವಿರುದ್ಧವಾಗಿ ಮತ ಚಲಾಯಿಸಿದ್ದು, ಆ ಮೂಲಕ ಒಟ್ಟು 263 ಶಾಸಕರು ಮತ ಚಲಾಯಿಸಿದರು. ಮೂವರು ಶಾಸಕರು ಗೈರಾಗಿದ್ದು, ಬಹುತೇಕ ಕಾಂಗ್ರೆಸ್ ಮತ್ತು ಎನ್ಸಿಪಿಯ 20 ಶಾಸಕರು ಮತದಾನದ ವೇಳೆ ಗೈರು ಹಾಜರಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications