ಸುನಾಮಿ ಬರಲಿದೆ: ಜನರಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ
ಮುಂಬೈ, ನವೆಂಬರ್ 23: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೀದಿಬೀದಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಗುಂಪುಗೂಡಿದ ಜನರು ಕೊರೊನಾ ವೈರಸ್ ಅನ್ನೇ ಕೊಂದು ಹಾಕಬಹುದು ಎಂದು ಭಾವಿಸಿರಬೇಕು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಲೇವಡಿ ಮಾಡಿದ್ದಾರೆ. ಹಬ್ಬದ ಅವಧಿಗಳಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಮರೆತು ಮನೆಯಿಂದ ಹೊರಬಂದು ಗುಂಪುಗೂಡಿರುವ ಜನರ ವಿರುದ್ಧ ಹರಿಹಾಯ್ದಿರುವ ಅಜಿತ್ ಪವಾರ್, ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಲು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
Recommended Video
ಮುಂದಿನ 8-10 ದಿನಗಳವರೆಗೆ ಸರ್ಕಾರವು ಪರಿಸ್ಥಿತಿಯನ್ನು ಪರಾಮರ್ಶಿಸಲಿದ್ದು, ಲಾಕ್ಡೌನ್ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮಗಳಿಲ್ಲದೆ ದೀಪಾವಳಿಯಂದು ಗುಂಪುಗೂಡಿದ್ದ ಜನರ ವಿರುದ್ಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈರಸ್ ಸೋಂಕಿನ ಹರಡುವಿಕೆಯ ಎರಡನೆಯ ಅವಧಿ ಸುನಾಮಿಯಂತೆಯೇ ಇರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

'ಲಸಿಕೆ ಬಂದ ಕೂಡಲೇ ನಮಗೆ 25 ಕೋಟಿ ಡೋಸ್ಗಳಷ್ಟು ಲಸಿಕೆ ಬೇಕಾಗಲಿದೆ' ಎಂದು ಅವರು ಹೇಳಿದ್ದಾರೆ. ಲಸಿಕೆ ಬರುವವರೆಗೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಕೈಗಳನ್ನು ಸ್ವಚ್ಛವಾಗಿ ಇರಿಸುವುದೇ ನಮಗೆ ಇರುವ ಕೇವಲ ಮೂರು ಪರಿಹಾರಗಳಾಗಿವೆ ಎಂದು ತಿಳಿಸಿದ್ದಾರೆ.
'ದೀಪಾವಳಿ ಸಂದರ್ಭದಲ್ಲಿ ಭಾರಿ ದೊಡ್ಡ ಗುಂಪುಗಳು ಕಾಣಿಸಿದ್ದವು. ಬೀದಿಗಳಲ್ಲಿನ ಜನರು ವೈರಸ್ ಸಾಯಿಸಬಹುದು ಎನಿಸುವಂತಿತ್ತು. ಗಣೇಶ ಚತುರ್ಥಿ ಸಂದರ್ಭದಲ್ಲಿಯೂ ಇದೇ ರೀತಿ ಪರಿಸ್ಥಿತಿ ಇತ್ತು. ರಾಜ್ಯದಲ್ಲಿ ಎರಡನೆಯ ಅಲೆ ಅಪ್ಪಳಿಸಬಹುದು ಎಂಬ ಮುನ್ಸೂಚನೆ ನೀಡಲಾಗುತ್ತಿದೆ. ನಾವು ಸಂಬಂಧಿತ ಇಲಾಖೆಗಳ ಜತೆ ಮಾತನಾಡುತ್ತಿದ್ದೇವೆ. ಮುಂದಿನ 8-10 ದಿನಗಳವರೆಗೆ ಸನ್ನಿವೇಶವನ್ನು ಅವಲೋಕಿಸುತ್ತೇವೆ. ಲಾಕ್ಡೌನ್ ಕುರಿತು ಮುಂದಿನ ನಿರ್ಧಾರಗಳನ್ನು ಬಳಿಕ ತೆಗೆದುಕೊಳ್ಳುತ್ತೇವೆ' ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಜನರನ್ನು ನಿಯಂತ್ರಿಸಲು ಕಾನೂನುಗಳನ್ನು ಜಾರಿಗೆ ತರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸದ ಉದ್ಧವ್ ಠಾಕ್ರೆ, ಜನರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದಿದ್ದಾರೆ. 'ರಾತ್ರಿ ನಿಷೇಧಾಜ್ಞೆ ಜಾರಿಗೆ ತರಲು ನನಗೆ ಸಲಹೆ ನೀಡಲಾಗುತ್ತಿದೆ. ಆದರೆ ಕಾನೂನುಗಳನ್ನು ತರುವ ಬಗ್ಗೆ ನನಗೆ ನಂಬಿಕೆ ಇಲ್ಲ. ಜನರೇ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು' ಎಂದು ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications