ಬಾಲಿವುಡ್ಅನ್ನು ಮುಗಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ: ಉದ್ಧವ್ ಠಾಕ್ರೆ
ಮುಂಬೈ, ಅಕ್ಟೋಬರ್ 15: ಬಾಲಿವುಡ್ಗೆ ಕೆಟ್ಟ ಹೆಸರು ತರುವ, ಅದನ್ನು ಮುಗಿಸಿಬಿಡುವ ಅಥವಾ ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಹಾಗೂ ಬಾಲಿವುಡ್ಅನ್ನು ಉದ್ದೇಶಪೂರ್ವಕವಾಗಿ ಗುರಿಯನ್ನಾಗಿರಿಸಿದಂತೆ ಕಾಣುವ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.
'ಹಿಂದಿ ಚಿತ್ರರಂಗವನ್ನು ಮುಗಿಸಿಬಿಡುವ ಅಥವಾ ಅದನ್ನು ಬೇರೆಲ್ಲಿಗೋ ವರ್ಗಾಯಿಸುವ ನಡೆಗಳನ್ನು ಎಂದಿಗೂ ಸಹಿಸುವುದಿಲ್ಲ. ಮುಂಬೈ ದೇಶದ ಹಣಕಾಸು ರಾಜಧಾನಿ ಮಾತ್ರವಲ್ಲ, ಅದು ಮನರಂಜನೆಯ ರಾಜಧಾನಿಯೂ ಹೌದು' ಎಂದು ಅವರು ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರ ಮಾಲೀಕರ ಜತೆ ಸಭೆ ನಡೆಸಿದ ಬಳಿಕ ಹೇಳಿದ್ದಾರೆ.

'ಜಗತ್ತಿನಾದ್ಯಂತ ಬಾಲಿವುಡ್ಗೆ ಅನುಯಾಯಿಗಳಿದ್ದಾರೆ. ಚಿತ್ರೋದ್ಯಮದ ಭಾರಿ ಪ್ರಮಾಣದ ಉದ್ಯೋಗ ಸೃಷ್ಟಿಸುತ್ತದೆ. ಕಳೆದ ಕೆಲವು ದಿನಗಳಿಂದ ಕೆಲವು ವಿಭಾಗಗಳಿಂದ ಚಿತ್ರರಂಗಕ್ಕೆ ಕಪ್ಪು ಮಸಿ ಬಳಿಯುವ ಪ್ರಯತ್ನಗಳು ನಡೆಯುತ್ತಿರುವುದು ನೋವುಂಟು ಮಾಡುತ್ತಿದೆ' ಎಂದಿದ್ದಾರೆ.
ನಿರ್ದಿಷ್ಟ ಕಾರ್ಯಾಚರಣೆ ಪ್ರಕ್ರಿಯೆಗಳ ನಿಯಮಗಳನ್ನು ಅಂತಿಮಗೊಳಿಸುವ ಕೆಲಸವನ್ನು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ಅದು ಪೂರ್ಣಗೊಂಡ ಬಳಿಕ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳನ್ನು ತೆರೆಯುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications