ಅಕ್ರಮ ಆರೋಪ: ತನ್ನ ಬಂಗಲೆಯನ್ನು ತಾನೇ ಕೆಡವಿಸಿದ ಉದ್ದವ್ ಆಪ್ತ ಸಹಾಯಕ
ಮುಂಬೈ, ಆಗಸ್ಟ್ 23: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮಿಲಿಂದ್ ನಾರ್ವೆಕರ್ ಸಮುದ್ರದ ಬದಿಯಲ್ಲಿ ಸಮುದ್ರದ ಕಡೆಗೆ ಮುಖ ಮಾಡಿದ್ದ ತಮ್ಮ ಬಂಗಲೆಯನ್ನು ತಾವೇ ಕೆಡವಿಸಿದ್ದಾರೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುರೂಡು ಪ್ರದೇಶದಲ್ಲಿರುವ ಬಂಗಲೆಯನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂಬ ಆರೋಪಗಳ ಹಿನ್ನೆಲೆ ಉದ್ಧವ್ ಠಾಕ್ರೆ ಆಪ್ತ ಸಹಾಯಕ ಮಿಲಿಂದ್ ನಾರ್ವೆಕರ್ ಈ ಕ್ರಮ ಕೈಗೊಂಡಿದ್ದಾರೆ.
ಮುರೂಡು ಪ್ರದೇಶದಲ್ಲಿ ಕಡಲ ತೀರದಲ್ಲಿ ಸಮುದ್ರದತ್ತ ಮುಖ ಮಾಡಿದ್ದ ಮಿಲಿಂದ್ ನಾರ್ವೆಕರ್ ಬಂಗಲೆಯು ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ನಿಯಮವನ್ನು ಉಲ್ಲಂಘನೆ ಮಾಡುತ್ತದೆ. ಈ ಬಂಗಲೆಯನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂಬ ಆರೋಪವನ್ನು ಬಿಜೆಪಿಯು ಮಾಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಶಿವಸೇನೆಯ ಮೂಲಗಳಿಂದ ಮಾಹಿತಿ ದೊರೆತಿದೆ. ಮಿಲಿಂದ್ ನಾರ್ವೆಕರ್ ಅವರು ತಮ್ಮ ಮನೆಯನ್ನು ತಾವೇ ಕೆಡವಿಸಿದ್ದಾರೆ ಎಂದು ಹೇಳಿದೆ. ಆರೋಪಗಳ ಹಿನ್ನೆಲೆ ಕಟ್ಟಡಗಳು ಅಧಿಕಾರಿಗಳ ವಶಕ್ಕೆ ಹೋಗಲಿದೆ ಎಂಬ ಸುದ್ದಿಗಳ ನಡುವೆ ಮಿಲಿಂದ್ ನಾರ್ವೆಕರ್ ತಮ್ಮ ಬಂಗಲೆಯನ್ನು ಕೆಳಗುರುಳಿಸಿದ್ದಾರೆ.

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುರೂಡು ಪ್ರದೇಶದ ದಾಪೋಲಿ ಎಂಬಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮಿಲಿಂದ್ ನಾರ್ವೆಕರ್ ಸಮುದ್ರ ತೀರದಲ್ಲಿ ಸಮುದ್ರದತ್ತ ಮುಖ ಮಾಡಿರುವ ಸುಮಾರು ಎರಡು ಸಾವಿರ ಸ್ವೇರ್ ಫೀಟ್ನ ಬಂಗಲೆಯನ್ನು ನಿರ್ಮಿಸಿದ್ದಾರೆ ಎಂದು ಹೇಳಲಾಗಿದೆ.
DEMOLITION Started CM Uddhav Thackeray's Secratary MILIND NARVEKAR's illegal Bungalow at Seashore of Dapoli being Demolished
— Kirit Somaiya (@KiritSomaiya) August 22, 2021
We have DONE it
Tomorrow 23 August will personally Visit this site of Dapoli to see the Demolition
Next Demolition will be of Minister Anil Parab RESORT pic.twitter.com/OCAFwIhufP
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಕೃತಿಕ್ ಸೋಮಯ್ಯ, "ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮಿಲಿಂದ್ ನಾರ್ವೆಕರ್ನ ದಾಪೋಪಿಯಲ್ಲಿ ಸಮುದ್ರ ತೀರದಲ್ಲಿನ ಅಕ್ರಮ ಕಟ್ಟಡವನ್ನು ಕೆಡವಲಾಗಿದೆ. ನಾವು ಕೊನೆಗೂ ಮಾಡಿ ತೋರಿಸಿದ್ದೇವೆ. ನಾಳೆ ಆಗಸ್ಟ್ 23 ರಂದು ಬಂಗಲೆಯನ್ನು ಕೆಡವಿದನ್ನು ನಾನು ಸ್ವತಃ ಭೇಟಿ ನೀಡಿ ಪರಿಶೀಲಿಸಲಿದ್ದೇನೆ. ಇನ್ನು ಸಚಿವ ಅನಿಲ್ ಪರಾಬ್ರ ರೆಸಾರ್ಟ್ ಕೆಡವುದು ಬಾಕಿಯಿದೆ," ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಸಹಾಯಕ ಮಿಲಿಂದ್ ನಾರ್ವೆಕರ್ ಆರೋಪದ ಬೆನ್ನಲ್ಲೇ ತಮ್ಮ ಕಟ್ಟಡವನ್ನು ಕೆಡವಿಸಿರುವುದು ಸಾರ್ವಜನಿಕವಾಗಿ ಮುಜುಗರುಕ್ಕೆ ಒಳಗಾಗುವುದನ್ನು ತಪ್ಪಿಸುವ ಕಾರ್ಯವಾಗಿದೆ ಎನ್ನಲಾಗಿದೆ. ಜೂನ್ನಲ್ಲಿ ಬಿಜೆಪಿ ನಾಯಕ ಕೃತಿಕ್ ಸೋಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಆಪ್ತ ಸಹಾಯಕ ಮಿಲಿಂದ್ ನಾರ್ವೆಕರ್, ಮಹಾರಾಷ್ಟ್ರದ ಶಿವಸೇನೆ ಪಕ್ಷದ ಸಚಿವ ಅನಿಲ್ ಪರಾಬ್ ಹಾಗೂ ಇನ್ನುಇತರೆ ಹಲವರು ಅಕ್ರಮವಾಗಿ ಕಟ್ಟಡ ಕಟ್ಟಿದ್ದಾರೆ ಎಂದು ಆರೋಪ ಮಾಡಿ ಕೇಂದ್ರ ಹಾಗೂ ರಾಜ್ಯ ಸಂಬಂಧಪಟ್ಟ ಇಲಾಖೆಗಳಲ್ಲಿ ದೂರು ದಾಖಲು ಮಾಡಿದ್ದರು. ಈ ಬಳಿಕ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳನ್ನು ಒಳಗೊಂಡ ತಂಡವು ಸ್ಥಳಕ್ಕೆ ಭೇಟಿ ನೀಡಿತ್ತು.
ಇನ್ನು ಈ ನಡುವೆ ನಾಗಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ 2002 ರಲ್ಲಿ ನಡೆದ 150 ಕೋಟಿ ಅವ್ಯವಹಾರ ಪ್ರಕರಣದ ಆರೋಪಿಯಾಗಿರುವ ಮಹಾರಾಷ್ಟ್ರದ ಸಚಿವ ಸುನಿಲ್ ಕೇದಾರ್ರನ್ನು ಸಂಪುಟದಿಂದ ವಜಾ ಮಾಡಲು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕ ಆಶಿಶ್ ದೇಶಮುಖ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರೇ ಆದ ಸುನಿಲ್ ಕೇದಾರ್ರನ್ನು ವಜಾ ಮಾಡುವಂತೆ ಕಾಂಗ್ರೆಸ್ ನಾಯಕ ಆಶಿಶ್ ದೇಶಮುಖ್ ಮನವಿ ಮಾಡಿದ್ದಾರೆ. "ಕೇದಾರ್ ಸುಮಾರು 19 ವರ್ಷದಿಂದ ಪ್ರಕರಣವನ್ನು ಬೇರೆ ಬೇರೆ ಕಾರಣ ನೀಡಿ ಮುಂದಕ್ಕೆ ಹೋಗುವಂತೆ ಮಾಡುತ್ತಿದ್ದಾರೆ. ಈಗ ಪ್ರಕರಣ ಕೊನೆಯ ಹಂತದಲ್ಲಿದೆ. ಪ್ರಕರಣ ಖುಲಾಸೆಯಾಗುವಂತೆ ಮಾಡಲು ಸರ್ಕಾರದ ವಕೀಲರನ್ನು ನೇಮಿಸಿಕೊಂಡಿದ್ದಾರೆ. ಈ ನೇಮಕಾತಿಯನ್ನು ರದ್ದು ಮಾಡಿ ಸುನಿಲ್ ಕೇದಾರ್ರನ್ನು ಸಂಪುಟದಿಂದ ಕೈಬಿಡಬೇಕು," ಎಂದು ಕಾಂಗ್ರೆಸ್ ನಾಯಕ ಆಶಿಶ್ ದೇಶಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್ಸಿಪಿ, ಶಿವಸೇನೆ ಹಾಗೂ ಕಾಂಗ್ರೆಸ್ ಒಕ್ಕೂಟದ ಸರ್ಕಾರವಿದೆ.
(ಒನ್ ಇಂಡಿಯಾ ಸುದ್ದಿ)
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications