ಸಚಿವ ಮುಂಡೆ ವಿಧಿವಶ: ಬುಧವಾರ ಅಂತಿಮ ಸಂಸ್ಕಾರ
ನವದೆಹಲಿ, ಜೂನ್ 3: ಇಂದು ಬೆಳಗ್ಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಸಾವನ್ನಪ್ಪಿದ ಕೇಂದ್ರ ಸಚಿವ ಗೋಪಿನಾಥ್ ಮುಂಡೆ (64) ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿಡಲಾಗುವುದು ಎಂದು ಕೇಂದ್ರ ಸಚಿವರಾದ ಡಾ. ಹರ್ಷವರ್ಧನ್ ಮತ್ತು ನಿತಿನ್ ಗಡ್ಕರಿ ಅವರುಗಳು ತಿಳಿಸಿದ್ದಾರೆ.
ಗೋಪಿನಾಥ್ ಮುಂಡೆ ಅವರು ಬಿಜೆಪಿಯ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಭಾವ ಆಗಿದ್ದರು. ಗೋಪಿನಾಥ್ ಮುಂಡೆ ಅವರು ಮೂವರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಮಹಾರಾಷ್ಟ್ರ ಮರಾಠವಾಡಾದ ಪರಲಿಯಲ್ಲಿ ನಾಳೆ ಬುಧವಾರ ಗೋಪಿನಾಥ್ ಮುಂಡೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.
ಸಚಿವ ಗೋಪಿನಾಥ್ ಅವರು ಇಂದು ಬೆಳಗ್ಗೆ 6.30ಕ್ಕೆ ದಿಲ್ಲಿಯಿಂದ ಮುಂಬೈಗೆ ವಿಮಾನದಲ್ಲಿ ತೆರಳಿ, ಮುಂಬೈನಲ್ಲಿ ವಿಜಯೋತ್ಸವ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿತ್ತು. (ಅಪಘಾತ: ಸಚಿವ ಮುಂಡೆ ಸಾವು, ವೈದ್ಯರು ಏನನ್ತಾರೆ?)

ಬೀಡ್ ಕ್ಷೇತ್ರದಿಂದ 2014ರ ಲೋಕಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಆಯ್ಕೆಯಾಗಿದ್ದ ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಗೋಪಿನಾಥ್ ಪಾಂಡುರಂಗ ಮುಂಡೆ (Gopinath Pandurang Munde) ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ನಿರ್ಮಲೀಕರಣ ಸಚಿವರಾಗಿ ನೇಮಕಗೊಂಡಿದ್ದರು. (ಮುಂಡೆ ಸಾವು: ಇದೇನಿದು ಶೋಭಾ ಡೆ ಸಂಸ್ಕಾರ!?)
1949ರ ಡಿಸೆಂಬರ್ 12ರಂದು ಜನಿಸಿದ್ದರು. ಮಹಾರಾಷ್ಟ್ರ ವಿಧಾನಸಭೆಗೆ 5 ಬಾರಿ (1980-1985 ಮತ್ತು 1990-2009 ಅವಧಿಯಲ್ಲಿ) ಶಾಸಕರಾಗಿದ್ದರು. 1995-1999 ಅವಧಿಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯೂ ಆಗಿದ್ದರು. 2009 ಮತ್ತು 2014ರಲ್ಲಿ ಲೋಕಸಭೆಗೆ ಆರಿಸಿಬಂದಿದ್ದರು.
ರಾಜನಾಥ್ ಸಿಂಗ್ ಟ್ವೀಟ್
Mundeji's death is an irreparable loss to the BJP and he has left a big void in Mahrashtra's political and social life.
— Rajnath Singh (@BJPRajnathSingh) June 3, 2014 -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications