ಪಾಕ್ ಮೇಲೆ ದಾಳಿ ಬೇಡ ಎಂದಿತ್ತು ಯುಪಿಎ ಸರ್ಕಾರ: ವಾಯುಪಡೆ ಮಾಜಿ ಮುಖ್ಯಸ್ಥ
ಮುಂಬೈ, ಡಿಸೆಂಬರ್ 28: ಮುಂಬೈನಲ್ಲಿ ಪಾಕಿಸ್ತಾನದಿಂದ ಬಂದ ಉಗ್ರರು ನಡೆಸಿದ್ದ 26/11ರ ಭೀಕರ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸೋಣ ಎಂಬ ಭಾರತೀಯ ವಾಯುಪಡೆಯ (ಐಎಎಫ್) ಪ್ರಸ್ತಾವನೆಯನ್ನು ಆಗಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ತಿರಸ್ಕರಿಸಿತ್ತು ಎಂದು ಐಎಎಫ್ ಮಾಜಿ ಮುಖ್ಯಸ್ಥ ಬಿಎಸ್ ಧನೋವಾ ಶುಕ್ರವಾರ ಆರೋಪಿಸಿದರು.
ವಿದೇಶಿ ನೆಲದ ಮೇಲೆ ದಾಳಿ ನಡೆಸುವುದು ರಾಜಕೀಯ ನಿರ್ಧಾರವಾಗಿದೆ. ಆಗಿನ ಕಾಂಗ್ರೆಸ್ ಸರ್ಕಾರವು ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸದೆ ಇರಲು ನಿರ್ಧರಿಸಿತ್ತು ಎಂದು ಹೇಳಿದರು.
ಮುಂಬೈನ ಟೆಕ್ನೋವಾಂಜಾದಲ್ಲಿನ ವಿಜೆಟಿಐ ವಾರ್ಷಿಕ ಉತ್ಸವದಲ್ಲಿ ಮಾತನಾಡಿದ ಧನೋವಾ, ಪಾಕಿಸ್ತಾನದಲ್ಲಿ ಉಗ್ರರ ಶಿಬಿರಗಳು ಎಲ್ಲೆಲ್ಲಿ ಇವೆ ಎಂಬುದು ಐಎಎಫ್ಗೆ ತಿಳಿದಿತ್ತು. ಅದರ ಮೇಲೆ ಬಾಂಬ್ ದಾಳಿ ನಡೆಸಲು ಕೂಡ ಸಿದ್ಧವಾಗಿತ್ತು. ಆದರೆ ದಾಳಿ ನಡೆಸಬೇಕೇ ಅಥವಾ ಬೇಡವೇ ಎನ್ನುವುದು ರಾಜಕೀಯ ನಿರ್ಧಾರವಾಗಿರುತ್ತದೆ ಎಂದು ಅವರು ಹೇಳಿದರು.

2001ರ ಡಿಸೆಂಬರ್ನಲ್ಲಿ ಸಂಸತ್ ಮೇಲೆ ದಾಳಿ ನಡೆದಾಗಲೂ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿಗಳನ್ನು ನಡೆಸುವ ಪ್ರಸ್ತಾಪವನ್ನು ಐಎಎಫ್ ಮುಂದಿರಿಸಿತ್ತು. ಪಾಕಿಸ್ತಾನವು ಭಾರತದಿಂದ ತನಗೆ ಬೆದರಿಕೆ ಇದೆ ಎಂದೇ ಯಾವಾಗಲೂ ಪ್ರತಿಪಾದಿಸಲು ಪ್ರಯತ್ನಿಸುತ್ತದೆ ಎಂದರು.
ಪಾಕಿಸ್ತಾನವು ಶಾಂತಿ ಸ್ಥಾಪನೆಯ ಪ್ರಯತ್ನಕ್ಕೆ ಮುಂದಾದರೆ ಅದು ಅನೇಕ ಲಾಭದ ಅಂಶಗಳನ್ನು ಕಳೆದುಕೊಳ್ಳುತ್ತದೆ. ಕಾಶ್ಮೀರದಲ್ಲಿನ ಕುದಿಯನ್ನು ಶಮನಗೊಳಿಸದೆ ಅದು ಮತ್ತಷ್ಟು ಉರಿಯುತ್ತಲೇ ಇರುವಂತೆ ಅದು ನೋಡಿಕೊಳ್ಳುತ್ತದೆ. ಪಾಕಿಸ್ತಾನವು ಯುದ್ಧದ ತಂತ್ರಗಳಲ್ಲಿ ಮಗ್ನವಾಗಿರುತ್ತದೆ ಮತ್ತು ದಾಳಿ ನಡೆಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.
ಐಎಎಫ್ ಯಾವುದೇ ರೀತಿಯ ಭೂ, ವಾಯು ಅಥವಾ ಜಲ ಯುದ್ಧಗಳನ್ನು ಎದುರಿಸಲು ಸದಾ ಸನ್ನದ್ಧವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications