ಚಿರನಿದ್ರೆಗೆ ಜಾರಿದ ಗಾನಕೋಗಿಲೆ ಕಿಶೋರಿ ಅಮೋನ್ಕರ್
84ರ ಇಳಿವಯಸ್ಸಿನಲ್ಲೂ ಕಿಶೋರಿ ಅಮೋನ್ಕರ್ ವೇದಿಕೆಯ ಮೇಲೆ ಬಂದರೆ, ವೇದಿಕೆಗೇ ಯೌವನ ಬಂತೇನೋ ಅನ್ನಿಸುತ್ತಿತ್ತು. ಆ ಧ್ವನಿಯಲ್ಲಾಗಲಿ, ಅವರ ನಡೆ-ನುಡಿಯಲ್ಲಾಗಲಿ ವಯೋಸಹಜ ದಣಿವಿನ ಕುರುಹೂ ಕಾಣುತ್ತಿರಲಿಲ್ಲ.
ಮುಂಬೈ, ಏಪ್ರಿಲ್ 4: ಅದು ಹಿಂದೂಸ್ತಾನಿ ಸಂಗೀತ ಕ್ಷೇತ್ರ ಒಂದು ಕ್ಷಣ ಸ್ತಬ್ಧಗೊಂಡ ದಿನ. ರಾಗರಸದಿಂದ ಮಾಂತ್ರಿಕ ಪ್ರಪಂಚವನ್ನೇ ಸೃಷ್ಟಿಸುತ್ತಿದ್ದ ಗಾನಕೋಗಿಲೆ ಮೌನವಾದ ದಿನ.
ಹೌದು, ಹಿಂದೂಸ್ತಾನಿ ಸಂಗೀತದ ದಂತಕತೆ ಎಂದೇ ಖ್ಯಾತರಾಗಿದ್ದ ಪದ್ಮವಿಭೂಷಣ ಕಿಶೋರಿ ಅಮೋನ್ಕರ್(84) ಸೋಮವಾರದಂದು (ಏಪ್ರಿಲ್ 3) ಮುಂಬೈಯ ಸ್ವಗೃಹದಲ್ಲಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ನಿಧನ ಸಂಗೀತ ಕ್ಷೇತ್ರದಲ್ಲಿ ನೀರವತೆ ಸೃಷ್ಟಿಸಿದೆ.
1932, ಏಪ್ರಿಲ್ 10 ರಂದು ಮುಂಬೈಯಲ್ಲಿ ಜನಿಸಿದ ಕಿಶೋರಿ ಅವರು ಹಿಂದೂಸ್ತಾನಿ ಸಂಗೀತ ಪ್ರಕಾರದಲ್ಲಿ ಮಹೋನ್ನತ ಸಾಧನೆ ಮಾಡಿದ್ದಲ್ಲದೆ, ಬೇರೆ ಬೇರೆ ಸಂಗೀತ ಪ್ರಕಾರಗಳಿಗೆ ವೇದಿಕೆ ನೀಡುವುದಕ್ಕಾಗಿ ಜೈಪುರ ಘರಾನಾ ಎಂಬ ಪರಿಕಲ್ಪನೆಯನ್ನೂ ಪರಿಚಯಿಸಿದರು.

ಸಂಗೀತದ ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮೀರಿ, ಕಲೆಗೆ ಸದಾ ಹೊಸತನ ಬೇಕು ಎಂದ ಅವರು ಕೆಲವರ ಟೀಕೆಗೂ ಗುರಿಯಾದದ್ದಿದೆ. ಆದರೂ ಸಂಗೀತದ ಬೇರೆ ಬೇರೆ ಪ್ರಕಾರಗಳ ಪ್ರಯೋಗದಲ್ಲೇ ಬದುಕಿನ ಸಾರ್ಥಕತೆ ಕಾಣುತ್ತಿದ್ದ ಕಿಶೋರಿ ಅವರು ತಮ್ಮ ಶಿಷ್ಯರಿಗಾಗಲಿ, ಅಭಿಮಾನಿಗಳಿಗಾಗಲಿ, ಹೊಸತನವನ್ನು ಆವಿಷ್ಕರಿಸುವ ಪಾಠವನ್ನೇ ಹೇಳುತ್ತಿದ್ದರು.
The works of Kishori Amonkar will always remain popular among people for years to come. https://t.co/iGFxmy8Mlj
— Narendra Modi (@narendramodi) 4 April 2017
ರಾಗ್ ಕೇದಾರ್, ರಾಗ್ ಭೂಪ್ ಎಲ್ಲವೂ ಆಕೆಯ ಸ್ವರದ ಅಲೆಯಲ್ಲಿ ಮೋಡಿಯನ್ನೇ ಮಾಡುತ್ತಿದ್ದವು. ಆಕೆಯ ಸ್ವರದೊಂದಿಗೆ ಬೆರೆವ ರಾಗ ಸಂಗೀತ ಸುಧೆಯನ್ನೇ ಹರಿಸುತ್ತಿತ್ತು. 84ರ ಇಳಿವಯಸ್ಸಿನಲ್ಲೂ ಆಕೆ ವೇದಿಕೆಯ ಮೇಲೆ ಬಂದರೆ, ವೇದಿಕೆಗೇ ಯೌವನ ಬಂತೇನೋ ಅನ್ನಿಸುತ್ತಿತ್ತು. ಆ ಧ್ವನಿಯಲ್ಲಾಗಲಿ, ಅವರ ನಡೆ-ನುಡಿಯಲ್ಲಾಗಲಿ ವಯೋಸಹಜ ದಣಿವಿನ ಕುರುಹೂ ಕಾಣುತ್ತಿರಲಿಲ್ಲ.
ಅವರ ಸಂಗೀತ ಸೇವೆಯನ್ನು ಪರಿಗಣಿಸಿದ ಭಾರತ ಸರ್ಕಾರ, ಪದ್ಮಭೂಷಣ (1987) ಮತ್ತು ಪದ್ಮವಿಭೂಷಣ(2002) ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ.
ಇನ್ನೊಂದು ವಾರದಲ್ಲಿ (ಏಪ್ರಿಲ್ 10) ತಮ್ಮ 85 ವರ್ಷದ ಹುಟ್ಟಿದ ದಿನವನ್ನು ಆಚರಿಸಿಕೊಳ್ಳಲಿದ್ದ ಕಿಶೋರಿ ನಿದ್ದೆಯಲ್ಲೇ ಚಿರನಿದ್ರೆಗೆ ಜಾರಿದ್ದಾರೆ. ಇಬ್ಬರು ಮಕ್ಕಳು ಮತ್ತು ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications