ರೆಬಲ್ ಶಾಸಕರ ಮುಂಬೈ ವಾಸ್ತವ್ಯ ವಿಸ್ತರಣೆ, ಸದ್ಯಕ್ಕಿಲ್ಲ ವಾಪಸ್
ಮುಂಬೈ, ಜುಲೈ 26 : "ನಾವು ವಾಪಸ್ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ" ಎಂದು ಹುಣಸೂರು ಶಾಸಕ, ರೆಬಲ್ ಶಾಸಕ ಎಚ್. ವಿಶ್ವನಾಥ್ ಹೇಳಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಮುಂಬೈನಲ್ಲಿದ್ದಾರೆ.
ಶುಕ್ರವಾರ ಮುಂಬೈಬಲ್ಲಿ ಮಾತನಾಡಿರುವ ಎಚ್. ವಿಶ್ವನಾಥ್, "ನಮ್ಮನ್ನು ಸಂಪರ್ಕಿಸಿ ಮನವೊಲಿಸುವ ಧೈರ್ಯ ಯಾವ ನಾಯಕರಿಗೂ ಇಲ್ಲ. ನಾವು ಪಕ್ಷಕ್ಕೆ ಮರಳುವುದೂ ಇಲ್ಲ" ಎಂದು ಸ್ಪಷ್ಟಪಡಿಸಿದರು.
ರೆಬಲ್ ಶಾಸಕರ ಮುಂಬೈ ವಾಸ್ತವ್ಯ ಸದ್ಯಕ್ಕೆ ಅಂತ್ಯಗೊಳ್ಳುವುದಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೊಂಡು ವಿಶ್ವಾಸಮತ ಸಾಬೀತು ಮಾಡುವ ವೇಳೆಗೆ ಶಾಸಕರು ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ.

ಜುಲೈ 6ರಂದು 9 ಕಾಂಗ್ರೆಸ್ ಶಾಸಕರ ಜೊತೆ ಜೆಡಿಎಸ್ನ ಎಚ್. ವಿಶ್ವನಾಥ್ (ಹುಣಸೂರು), ಕೆ. ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್), ನಾರಾಯಣ ಗೌಡ (ಕೆ. ಆರ್. ಪೇಟೆ) ಅವರು ಸಹ ರಾಜೀನಾಮೆ ನೀಡಿದ್ದಾರೆ. ಎಲ್ಲಾ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಗುರುವಾರ ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕುಮಟಳ್ಳಿ (ಅಥಣಿ), ಆರ್. ಶಂಕರ್ (ರಾಣೆಬೆನ್ನೂರು) ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
ರಾಜೀನಾಮೆ ನೀಡಿರುವ 13 ಶಾಸಕರು ಮತ್ತು ಅಧಿವೇಶನಕ್ಕೆ ಗೈರಾದ ಕಾಗವಾಡ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಸ್ಪೀಕರ್ಗೆ ದೂರು ನೀಡಿದೆ. ಈ ಪ್ರಕರಣಗಳನ್ನೂ ಸ್ಪೀಕರ್ ಇನ್ನೂ ಇತ್ಯರ್ಥಗೊಳಿಸಿಲ್ಲ.
ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಮೇಶ್ ಕುಮಾರ್, "ರಾಜೀನಾಮೆ ಎಂದರೆ ಗೌರವ ಸೂಚಕವಾದದ್ದು, ಅನರ್ಹತೆ ಎಂದರೆ ಛೀಮಾರಿ ಹಾಕಿದಂತೆ. ರಾಜೀನಾಮೆ ಅಂಗೀಕಾರಗೊಂಡವರು ಮಾತ್ರ ಚುನಾವಣಾ ಕಣಕ್ಕಿಳಿಯಬಹುದು" ಎಂದು ಸ್ಪಷ್ಟಪಡಿಸಿದರು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications