ಹುಚ್ಚುತನದ ಪರಮಾವಧಿ, ವಾಟ್ಸಪ್ ಗ್ರೂಪ್ ಕಥೆ ನೋಡಿ
ಉಲ್ಹಾಸನಗರ(ಮಹಾರಾಷ್ಟ್ರ), ಮೇ.31: ಸಾಮಾಜಿಕ ಜಾಲ ತಾಣಗಳ ಪೈಕಿ ಬಹುಬೇಗ ಜನಪ್ರಿಯತೆ ಗಳಿಸುತ್ತಿರುವ ವಾಟ್ಸಪ್ ನಿಂದಾಗಿ ಸ್ನೇಹ ಹೆಚ್ಚಾಗುವ ಬದಲು ಸ್ನೇಹಿತರ ನಡುವೆ ಕಿಚ್ಚು ಹಚ್ಚಿದ ಘಟನೆ ನಡೆದಿದೆ.
30 ವರ್ಷ ವಯಸ್ಸಿನ ಗಾರ್ಮೆಂಟ್ ಅಂಗಡಿ ಮಾಲೀಕ ಬಂಟಿ ಕುರ್ಸೇಜಾ ಎಂಬುವರಿಗೆ ಅವರು ಹುಟ್ಟು ಹಾಕಿದ ವಾಟ್ಸಪ್ ಗ್ರೂಪಿನ ಸದಸ್ಯರೇ ಚಾಕು ಚುಚ್ಚಿ ಗಾಯಗೊಳಿಸಿದ್ದಾರೆ. ಇತ್ತೀಚೆಗೆ ಬಂಟಿ ಅವರು ತಮ್ಮ ಗ್ರೂಪ್ ನಿಂದ ಇಬ್ಬರನ್ನು ಕಿತ್ತು ಹಾಕಿದ್ದರು. ಇದರಿಂದ ಕೋಪಗೊಂಡ ಅವರಿಬ್ಬರು ಚಾಕುವಿನಿಂದ ಬಂಟಿಗೆ ಚುಚ್ಚಿ, ಗೂಸಾ ಕೊಟ್ಟಿದ್ದಾರೆ.
ಅನಿಲ್ ಮುಖಿ ಹಾಗೂ ನರೇಶ್ ರೊಹ್ರಾ ಎಂಬುವರು ತಮ್ಮ ವಾಟ್ಸಪ್ ಗ್ರೂಪಿನ ಅಡ್ಮಿನ್ ಬಂಟಿಗೆ ಉಲ್ಹಾಸನಗರದಲ್ಲಿ ಹೊಡೆದಿದ್ದು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬಂಧಿತರ ಪೈಕಿ ಒಬ್ಬ ಮಾಜಿ ಕಾರ್ಪೊರೇಟರ್ ರೊಬ್ಬರ ಮಗ ಎಂದು ತಿಳಿದು ಬಂದಿದೆ.

ವಾಟ್ಸಪ್ ನಲ್ಲಿ ಬಂಟಿ ಅವರು 'Jai Ho' ಎಂಬ ಹೆಸರಿನಲ್ಲಿ ಗ್ರೂಪ್ ಮಾಡಿದ್ದರು. ತಮ್ಮ ಗಾರ್ಮೆಂಟ್ ಇಂಡಸ್ಟ್ರಿ ಬಗ್ಗೆ ಮಾಹಿತಿ ಹಂಚಿಕೆ ಮಾಡಿಕೊಳ್ಳುವುದು ಇವರ ಉದ್ದೇಶವಾಗಿತ್ತು.ಈ ಗುಂಪಿನ ಸದಸ್ಯರಾಗಿದ್ದ ಆರೋಪಿ ಅನಿಲ್ ಹಾಗೂ ನರೇಶ್ ಎಂಬುವವರಿಗೂ ಬಂಟಿಗೂ ಈ ಮುಂಚೆ ಹಣಕಾಸು ವಿಷಯದಲ್ಲಿ ಮನಸ್ತಾಪವಾಗಿತ್ತು.
ಇದಕ್ಕೆ ಸೇಡು ತೀರಿಸಿಕೊಳ್ಳಲು ಬಂಟಿ ಶುರು ಮಾಡಿದ್ದ ಗ್ರೂಪಿನಲ್ಲಿ ಪೋರ್ನೋಗ್ರಾಫಿ ಚಿತ್ರಗಳನ್ನು ಹಾಕಿದ್ದಾರೆ. ಈ ಬಗ್ಗೆ ಅನಿಲ್ ಹಾಗೂ ನರೇಶ್ ಗೆ ಬಂಟಿ ಎಚ್ಚರಿಕೆ ನೀಡಿದ್ದಾರೆ. ಅದರೆ, ಇದಕ್ಕೆ ಕ್ಯಾರೆ ಎನ್ನದ ಇಬ್ಬರು ಮತ್ತೆ ಮತ್ತೆ ಅದೇ ರೀತಿ ಚಿತ್ರಗಳು, ವಿಡಿಯೋಗಳನ್ನು ಹಂಚಿದ್ದಾರೆ. ಸಿಟ್ಟಿಗೆದ್ದ ಬಂಟಿ ಇಬ್ಬರನ್ನು ಗ್ರೂಪಿನಿಂದ ಕಿತ್ತು ಹಾಕಿದ್ದಾರೆ. ನಂತರ ಇಬ್ಬರು ಬಂಟಿಗೆ ಗೂಸಾ ಕೊಟ್ಟಿದ್ದಾರೆ.
ಈ ಮುಂಚೆ ಆರೋಪಿಗಳಿಂದ ಒಂದಷ್ಟು ಲಕ್ಷ ರು ಸಾಲ ಮಾಡಿಕೊಂಡಿದ್ದ ಬಂಟಿಗೆ ಸಾಲವನ್ನು ಹಿಂತಿರುಗಿಸಲು ಆಗಿರಲಿಲ್ಲ. ಅವರಿಬ್ಬರಿಗೆ ಸಾಲಕ್ಕಿಂತ ಬಂಟಿ ಮಾನ ಕಳೆಯುವುದೇ ಉದ್ದೇಶವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಉಲ್ಹಾಸ್ ನಗರ ಪೊಲೀಸರು ಹೇಳಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications