ರಾಜೀನಾಮೆಗೂ ಮುನ್ನ ಮರುನಾಮಕರಣ: ಉದ್ಧವ್ ಠಾಕ್ರೆ ರಾಜಕೀಯ ಲೆಕ್ಕಾಚಾರ
ಮುಂಬೈ, ಜೂನ್ 30: ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟವು ಔರಂಗಾಬಾದ್ ನಗರವನ್ನು ಸಂಭಾಜಿನಗರ ಎಂದು ಮತ್ತು ಉಸ್ಮಾನಾಬಾದ್ ನಗರವನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಲು ಒಪ್ಪಿಗೆ ನೀಡಿದೆ, ಜೊತೆಗೆ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈತ ನಾಯಕ ದಿವಂಗತ ಡಿಬಿ ಪಾಟೀಲ್ ಹೆಸರು ನಾಮಕರಣದ ಹಿಂದೆ ರಾಜಕೀಯದ ಲಾಭದ ಉದ್ದೇಶ ಇದೆ ಎನ್ನಲಾಗಿದೆ.
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವ ಮೊದಲು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ತಾನು ಹಿಂದೂ ಪರವಾಗಿದ್ದೇನೆ ಎನ್ನುವ ಸಂದೇಶ ನೀಡುವುದು ಶಿವಸೇನೆ ಉದ್ದೇಶವಾಗಿದೆ ಎನ್ನಲಾಗಿದೆ.
ಗುರುವಾರ ಗುರುವಾರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ವಿಶ್ವಾಸಮತ ಪರೀಕ್ಷೆಗೆ ನೀಡಿದ ಆದೇಶವನ್ನು ಶಿವಸೇನೆ ಪ್ರಶ್ನಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಮನವಿಯನ್ನು ತಿರಸ್ಕರಿಸಿ ಗುರುವಾರವೇ ಬಹುಮತ ಸಾಬೀತಿಗೆ ಆದೇಶಿಸಿದ ಹಿನ್ನೆಲೆಯಲ್ಲಿ ಬುಧವಾರ ಸಂಜೆಯೇ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರೊಂದಿಗೆ 2.5 ವರ್ಷ ಆಡಳಿತ ನಡೆಸಿದ ಮಹಾ ವಿಕಾಸ ಅಘಾಡಿ ಸರ್ಕಾರ ಬಿದ್ದಹೋಗಿದೆ.

ಹೆಸರು ಬದಲಾಯಿಸಲು ಒತ್ತಾಯಿಸುತ್ತಿದ್ದ ಬಿಜೆಪಿ
ಶಿವಸೇನೆಯು ಬಿಜೆಪಿಯೊಂದಿಗಿನ ತನ್ನ ದಶಕಗಳ ಹಳೆಯ ಸಂಬಂಧವನ್ನು ಕಡಿದುಕೊಂಡ ನಂತರ ಮತ್ತು ಎಂವಿಎ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಮತ್ತು ಎನ್ಸಿಪಿಯೊಂದಿಗೆ ಕೈಜೋಡಿಸಿದ ನಂತರ, ಮೊಘಲ್ ಚಕ್ರವರ್ತಿ ಔರಂಗಜೇಬ್ನಿಂದ ತನ್ನ ಹೆಸರನ್ನು ಪಡೆದಿರುವ ಔರಂಗಾಬಾದ್ ಅನ್ನು ಮರುನಾಮಕರಣ ಮಾಡುವ ತನ್ನ ಹಳೆಯ ಬೇಡಿಕೆಯನ್ನು ಬಿಜೆಪಿ ಆಗಾಗ್ಗೆ ಶಿವಸೇನೆಗೆ ಪ್ರಸ್ತಾಪಿಸುತ್ತಿತ್ತು.

ಹೆಸರು ಬದಲಾವಣೆ ಮತ್ತು ರಾಜಕೀಯ ಲೆಕ್ಕಾಚಾರ
ಹೆಸರು ಬದಲಾವಣೆ ಹಿಂದೆ ಉದ್ಧವ್ ಠಾಕ್ರೆ ರಾಜಕೀಯ ಲೆಕ್ಕಾಚಾರ ಇದೆ. ಔರಂಗಾಬಾದ್ ಹೆಸರು ಬದಲಾವಣೆಗೆ ಬಿಜೆಪಿ ಮೊದಲಿನಿಂದ ಒತ್ತಾಯ ಮಾಡಿತ್ತು ಆದರೆ ಇಷ್ಟು ದಿನ ಸುಮ್ಮನಿದ್ದ ಉದ್ದವ್ ರಾಜೀನಾಮೆ ನೀಡುವ ಮೊದಲು ಹೆಸರು ಬದಲಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ತಾನು ಹಿಂದೂ ಪರ ಎನ್ನುವ ಸಂದೇಶ ನೀಡುವುದು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹೆಸರು ಬದಲಾವಣೆ ಮಾಡಿ ರಾಜಕೀಯ ಲಾಭ ಪಡೆದರೆ ಎನ್ನುವ ದೂರಾಲೋಚನೆಯಿಂದ ಈ ನಿರ್ಧಾರ ಮಾಡಿದ್ದಾರೆ.

ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಉದ್ಧವ್ ಠಾಕ್ರೆ
ನಾವು ಅವರಿಗೆ ಸಹಕಾರ ನೀಡಿದ್ದೇವೆ ಮತ್ತು ಮುಂದೆಯೂ ನಮ್ಮಿಂದ ಇದೇ ರೀತಿಯ ಸಹಕಾರವನ್ನು ನಿರೀಕ್ಷಿಸುತ್ತೇವೆ ಎಂದು ಸಿಎಂ ಠಾಕ್ರೆ ಹೇಳಿದರು. ಇನ್ನುಮುಂದೆಯೂ ಠಾಕ್ರೆ ನಮ್ಮೊಂದಿಗೆ ಅದೇ ರೀತಿ ವರ್ತಿಸುತ್ತಾರೆ ಎಂದು ಮುಂಬೈನಲ್ಲಿ ನಡೆದ ಸಂಪುಟ ಸಭೆಯ ನಂತರ ಮಹಾರಾಷ್ಟ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸುನಿಲ್ ಕೇದಾರ್ ಹೇಳಿದ್ದಾರೆ.
ಎರಡೂವರೆ ವರ್ಷದಲ್ಲಿ ಮೂರೂ ಪಕ್ಷಗಳು ಒಗ್ಗೂಡಿ ಉತ್ತಮ ಕೆಲಸ ಮಾಡಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ಎನ್ಸಿಪಿ ನಾಯಕ ಜಯಂತ್ ಪಾಟೀಲ್ ಹೇಳಿದ್ದಾರೆ.

ಪುಣೆ ಮರುನಾಮಕರಣಕ್ಕೆ ಒತ್ತಾಯಿಸಿದ ಕಾಂಗ್ರೆಸ್
ಪುಣೆ ನಗರವನ್ನು ಛತ್ರಪತಿ ಶಿವಾಜಿ ಮಹಾರಾಜರ ತಾಯಿಯ ಹೆಸರಿನಲ್ಲಿ ಜಿಜಾವು ನಗರ ಎಂದು ಹೆಸರಿಸಬೇಕೆಂದು ಮತ್ತು ನವಿ ಮುಂಬೈನ ಸೆವ್ರಿ ಮತ್ತು ನ್ಹವಾ ಶೇವಾ ನಡುವಿನ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ಗೆ ಮಾಜಿ ಮುಖ್ಯಮಂತ್ರಿ ದಿವಂಗತ ಎಆರ್ ಅಂತುಲೆ ಹೆಸರಿಡಲು ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಒತ್ತಾಯಿಸಿತ್ತು.
ಆದರೆ ಈ ಬೇಡಿಕೆಗಳನ್ನು ಸ್ಪಷ್ಟವಾಗಿ ಪರಿಗಣಿಸಲಾಗಿಲ್ಲ. ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿಬಿ ಪಾಟೀಲ್ ಹೆಸರಿಡಬೇಕೆಂಬ ಬೇಡಿಕೆಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ರಾಜ್ಯ ಯೋಜನಾ ಸಂಸ್ಥೆ ಸಿಐಸಿಸಿಒ (CIDCO) ಈ ಹಿಂದೆ ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಹೆಸರಿಸಲು ಪ್ರಸ್ತಾಪಿಸಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications