ಸೇನೆಗೆ ಸೇರುವ ಮೂಲಕ ಪತಿಗೆ ಗೌರವ ಸಲ್ಲಿಸುತ್ತಿರುವ ಪತ್ನಿ ಗೌರಿ ಮಹದಿಕ್
ಮುಂಬೈ, ಫೆಬ್ರವರಿ 25: ಭಾರತ- ಚೀನಾ ಗಡಿಯಲ್ಲಿ 2017ರಲ್ಲಿ ನಡೆದ ಅಗ್ನಿ ಅವಘಡದಲ್ಲಿ ತಮ್ಮ ಪತಿ ಮೇಜರ್ ಪ್ರಸಾದ್ ಗಣೇಶ್ ಅವರನ್ನು ಕಳೆದುಕೊಂಡಾಗ ಗೌರಿ ಅವರ ಪ್ರಪಂಚವೇ ಅಲ್ಲೋಲಕಲ್ಲೋಲ ಆದಂತಾಗಿತ್ತು. ಆದರೆ ಆ ಕ್ಷಣಕ್ಕೇ ಅವರು ನಿರ್ಧಾರ ತೆಗೆದುಕೊಂಡರು. ತಾವು ಮಾಡುತ್ತಿದ್ದ ಕೆಲಸ ಬಿಟ್ಟು, ಸೇನೆ ಸೇರುವ ತೀರ್ಮಾನ ಮಾಡಿದರು.
ಒಂದು ವರ್ಷದ ನಂತರ ಇದೀಗ ಅಧಿಕಾರಿಗಳ ತರಬೇತಿ ಸಂಸ್ಥೆಗೆ ಸೇರಲು ಎಲ್ಲ ಸಿದ್ಧತೆ ನಡೆಸಿದ್ದಾರೆ. "ನಾನು ವಕೀಲೆ ಹಾಗೂ ಕಂಪನಿ ಸೆಕ್ರೆಟರಿ. ಉದ್ಯೋಗ ಮಾಡಿಕೊಂಡಿದ್ದೆ. ನನ್ನ ಪತಿಯ ಮರಣದ ನಂತರ ಉದ್ಯೋಗವನ್ನು ಬಿಟ್ಟೆ. ಸೇನೆಗೆ ಸೇರಲು ತಯಾರಿ ನಡೆಸಿದೆ. ಆ ಮೂಲಕ ನನ್ನ ಪತಿಗೆ ಗೌರವ ಸಲ್ಲಿಸಬೇಕು ಅಂದುಕೊಂಡೆ. ಆ ನಂತರ ಧರಿಸುವ ಸಮವಸ್ತ್ರ ನಮ್ಮದು (ನಾನು ಹಾಗೂ ನನ್ನ ಪತಿಯದು)" ಎಂದು ಗೌರಿ ಮಹದಿಕ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.
2015ರಲ್ಲಿ ಗೌರಿ ಅವರು ಮೇಜರ್ ಪ್ರಸಾದ್ ರನ್ನು ವಿವಾಹ ಆದರು. ಆ ನಂತರ ಮುಂಬೈನ ವಿರಾರ್ ಪ್ರದೇಶದಲ್ಲಿ ತನ್ನ ಮಾವನ ಮನೆಯಲ್ಲಿ ಇದ್ದರು. ಎರಡನೇ ಪ್ರಯತ್ನದಲ್ಲಿ ಸರ್ವೀಸ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾರೆ. ಇತರ ಹದಿನಾರು ಅಭ್ಯರ್ಥಿಗಳ ಜತೆಗೆ ಸೆಣೆಸಿ, ಅತ್ಯುತ್ತಮ ಅಂಕ ಪಡೆದಿದ್ದಾರೆ.

ಇದೀಗ ಚೆನ್ನೈನಲ್ಲಿರುವ ಅಧಿಕಾರಿಗಳ ತರಬೇತಿ ಸಂಸ್ಥೆ ಸೇರಲು ಎಲ್ಲ ಸಿದ್ಧತೆ ನಡೆಸಿದ್ದಾರೆ. ಈ ಏಪ್ರಿಲ್ ನಲ್ಲಿ ಸೇರ್ಪಡೆ ಆಗಲಿದ್ದು, 49 ವಾರಗಳ ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ವರ್ಷದ ಈ ಕಡ್ಡಾಯ ತರಬೇತಿಯನ್ನು ಅಕಾಡೆಮಿಯಲ್ಲಿ ಪೂರ್ಣ ಮಾಡಿದ ಬಳಿಕ ಮೂವತ್ತೊಂದು ವರ್ಷದ ಗೌರಿ ಮಹದಿಕ್ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಸೇರ್ಪಡೆ ಆಗಲಿದ್ದಾರೆ.
#WATCH: Late Army Major Prasad Mahadik's wife Gauri Mahadik, who will join Indian Army next year, says, "he always wanted me to be happy & smiling. I decided I'll join the forces, I'll wear his uniform, his stars on our uniform. Our uniform because it will be his and my uniform". pic.twitter.com/vrCGdn5ZfA
— ANI (@ANI) 24 February 2019
ಕೆಲಸ ಬಿಡುವ ಅವರ ನಿರ್ಧಾರದ ಬಗ್ಗೆ ಪ್ರಶ್ನೆ ಮಾಡಿದರೆ, ನಾನು ಸುಮ್ಮನೆ ಕೂತು, ಅಳುವುದು ಇಷ್ಟವಿರಲಿಲ್ಲ. ನನ್ನ ಪತಿಗೆ ಹೆಮ್ಮೆ ತರುವ ಕೆಲಸ ಮಾಡಬೇಕು ಅಂದುಕೊಂಡೆ. ನಾನು ಯಾವಾಗಲೂ ನಗುತ್ತಾ ಸಂತೋಷದಿಂದ ಇರಬೇಕು ಅನ್ನೋದು ಅವರ ಆಸೆಯಾಗಿತ್ತು. ಸೇನೆ ಸೇರಿಕೊಳ್ಳಬೇಕು ಎಂದು ನಿರ್ಧರಿಸಿದೆ. ಅವರ ಸಮವಸ್ತ್ರ ಧರಿಸುತ್ತೇನೆ, ಅವರ ಸ್ಟಾರ್ ಅನ್ನು ನಮ್ಮ ಸಮವಸ್ತ್ರದಲ್ಲಿ ಹಾಕಿಕೊಳ್ಳುತ್ತೇನೆ. ನಮ್ಮ ಸಮವಸ್ತ್ರ ಏಕೆಂದರೆ, ಅದು ಅವರದು ಹಾಗೂ ನನ್ನದು ಇಬ್ಬರದೂ ಸಮವಸ್ತ್ರ ಎಂದಿದ್ದಾರೆ ಗೌರಿ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications