ಇಲಿಗೆ ವಿಷ ಹಾಕಿದ ಟೊಮ್ಯಾಟೊವನ್ನು ಮ್ಯಾಗಿಗೆ ಹಾಕಿ ತಿಂದ ಮಹಿಳೆ
ಮುಂಬೈ ಜುಲೈ 30: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಮ್ಯಾಗಿ ತಿಂದ ಬಳಿಕ ಅವರ ಆರೋಗ್ಯ ಸ್ಥಿತಿ ಹದಗೆಟ್ಟು ಸಾವನ್ನಪ್ಪಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮ್ಯಾಗಿಯಲ್ಲಿ ಏನೋ ತಪ್ಪಾಗಿದೆ ಎಂದು ಎಲ್ಲರಿಗೂ ಅನಿಸಿತ್ತಾದರೂ ನಂತರ ಮಹಿಳೆ ಹಾಕಿದ್ದ ಟೊಮೇಟೊ ವಿಷಕಾರಿ ಎಂದು ತಿಳಿದುಬಂದಿದೆ. ಇದರಿಂದಾಗಿ ಅವರು ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಈ ಪ್ರಕರಣ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅಲ್ಲಿ 35 ವರ್ಷದ ರೇಖಾ ನಿಶಾದ್ ತನ್ನ ಪತಿ ಮತ್ತು ಸೋದರ ಮಾವನೊಂದಿಗೆ ವಾಸಿಸುತ್ತಿದ್ದರು. ಜುಲೈ 20 ರಂದು ಇಬ್ಬರೂ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ರೇಖಾ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಅವರಿಗೆ ಮ್ಯಾಗಿ ತಿನ್ನಬೇಕು ಅನಿಸಿದೆ. ಟಿವಿ ನೋಡುತ್ತಿದ್ದ ರೇಖಾ ಅವರಿಗೆ ಮನೆಯಲ್ಲಿ ಸಾಕಷ್ಟು ಭಯ ಹುಟ್ಟಿಸುವಷ್ಟು ಇಲಿಯಿದೆ. ಅವುಗಳನ್ನು ನಾಶಪಡಿಸಲು ಟೊಮೆಟೊದಲ್ಲಿ ಇಲಿ ಕಿಲ್ಲರ್ (ಇಲಿ ವಿಷ) ಇಟ್ಟಿದ್ದಾರೆ.

ಬಳಿಕ ರೇಖಾ ಟಿವಿ ನೋಡುವುದರಲ್ಲಿ ನಿರತಳಾಗಿದ್ದರು. ವಿಷಪೂರಿತ ಟೊಮೆಟೊಗೆ ಗಮನ ಕೊಡದೆ ಅದನ್ನು ಕತ್ತರಿಸಿ ಮ್ಯಾಗಿ ಮಾಡಿದ್ದಾರೆ. ಆಮೇಲೆ ಆರಾಮವಾಗಿ ಕೂತು ತಿನ್ನತೊಡಗಿದ್ದಾರೆ. ಸ್ವಲ್ಪ ಸಮಯದಲ್ಲೇ ಅವರ ಸ್ಥಿತಿ ಹದಗೆಟ್ಟಿದೆ. ಮನೆಗೆ ಬಂದ ಪತಿ ಮತ್ತು ಸೋದರ ಮಾವ ಆಕೆಯನ್ನು ಅವಸರದಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಒಂದು ವಾರ ಚಿಕಿತ್ಸೆ ನೀಡಿದರೂ ಅವರು ಬದುಕುಳಿಯಲ್ಲಿಲ್ಲ.

ಘಟನೆಯ ಸುದ್ದಿ ತಿಳಿದ ತಕ್ಷಣ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮಾಲ್ವಾನಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಶೇಖರ್ ಭಲೇರಾವ್ ತಿಳಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆಯ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿತ್ತು. ಮನೆಯಲ್ಲಿ ಇಲಿಗಳನ್ನು ಕೊಲ್ಲುವ ಸಲುವಾಗಿ ಟೊಮೆಟೊದಲ್ಲಿ ವಿಷವನ್ನು ಇಡಲಾಗಿತ್ತು ಎಂದು ಮಹಿಳೆ ಹೇಳಿದ್ದಾಳೆ. ಗಮನ ಹರಿಸದೇ ಅದೇ ಟೊಮೇಟೊವನ್ನು ಕತ್ತರಿಸಿ ಮ್ಯಾಗಿಯಲ್ಲಿ ಹಾಕಿ ತಿಂದಿದಿರುವುದಾಗಿ ಆಕೆ ಹೇಳಿದ್ದಾರೆ. ಅವರ ಸ್ಥಿತಿ ಹದಗೆಟ್ಟಾಗ, ಅವರು ಇದನ್ನು ಅರಿತುಕೊಂಡರು. ಆದರೆ ಅಷ್ಟು ಹೊತ್ತಿಗೆ ಅದು ತುಂಬಾ ತಡವಾಗಿತ್ತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications