ಮುಂಬೈನಲ್ಲಿ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರಿಂದ ಮಹಿಳೆಗೆ ಕಪಾಳಮೋಕ್ಷ
ಮುಂಬೈ, ಸೆಪ್ಟೆಂಬರ್ 01: ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತ ಮಹಿಳೆಯೊಬ್ಬರನ್ನು ತಳ್ಳಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆಗಸ್ಟ್ 28 ರಂದು ವಿನೋದ್ ಅರ್ಗಿಲೆ ನೇತೃತ್ವದ ಎಂಎನ್ಎಸ್ ಕಾರ್ಯಕರ್ತರು ಕಂಬಕ್ಕೆ ಹಾಕಿದ ಪ್ರಚಾರ ಫಲಕಗಳಿಗೆ ಪ್ರಕಾಶ್ ದೇವಿ ಆಕ್ಷೇಪಿಸಿದ್ದರು.
ವಿಡಿಯೋದಲ್ಲಿ ಕೆಲವರು ಪ್ರಕಾಶ್ ದೇವಿ ಅವರನ್ನು ಎಳೆದಾಡಿರುವುದು ಕಂಡುಬಂದಿದೆ. ಮಾತ್ರವಲ್ಲದೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಅವರಿಗೆ ಹೊಡೆಯುವುದು ತಳ್ಳುವುದು ವಿಡಿಯೋದಲ್ಲಿ ಕಂಡುಬಂದಿದೆ. ದಾರಿಹೋಕರು ಮಧ್ಯಪ್ರವೇಶಿಸಿ ಅವರನ್ನು ಬಿಡಿಸಿದ್ದಾರೆ. ಈ ಎಲ್ಲಾ ದೃಶ್ಯಗಳು 80 ಸೆಕೆಂಡುಗಳ ಕ್ಲಿಪ್ ನಲ್ಲಿ ಸರೆಯಾಗಿದೆ.

ಪಕ್ಷದ ಕಾರ್ಯಕರ್ತರು ಮುಂಬಾ ದೇವಿ ಪ್ರದೇಶದಲ್ಲಿ ಬಿದಿರಿನ ಕಂಬಗಳನ್ನು ಸ್ಥಾಪಿಸುತ್ತಿದ್ದರು. ಅದು ದೇವಾಲಯಕ್ಕೆ ಹೆಸರುವಾಸಿಯಾಗಿದೆ. ಆದರೆ, ಪ್ರಕಾಶ್ ದೇವಿ ಅವರ ಔಷಧಿ ಅಂಗಡಿಯ ಮುಂದೆ ಅದನ್ನು ಸ್ಥಾಪಿಸಬೇಡಿ ಎಂದು ಹೇಳಿದರು. ಈ ವೇಳೆ ಕೋಪಗೊಂಡ ಎಂಎನ್ಎಸ್ ಕಾರ್ಯಕರ್ತರು ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಲ್ಲದೆ, ದೌರ್ಜನ್ಯ ಎಸೆಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
#WATCH | A video went viral showing a man hitting & pushing a woman in Kamathipura, Mumbai on Aug 28, allegedly over installing a bamboo stick (for an ad) in front of woman's shop without consent. A non-cognizable offence lodged at Nagpada PS:Mumbai Police
— ANI (@ANI) September 1, 2022
(Note:Strong language) pic.twitter.com/9PinhzGuyj
ಹಲ್ಲೆ ನಡೆದ ಮೂರು ದಿನಗಳ ನಂತರ ಆಗಸ್ಟ್ 31 ರಂದು ದೂರು ನೀಡಲಾಗಿದೆ. ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ತಮ್ಮ ಚಿಕ್ಕಪ್ಪ ಬಾಳ ಠಾಕ್ರೆ ಅವರ ಶಿವಸೇನೆಯನ್ನು ತೊರೆದ ನಂತರ ರಾಜ್ ಠಾಕ್ರೆ ಅವರು ಸ್ಥಾಪಿಸಿದ ಪಕ್ಷವಾದ ಎಂಎನ್ಎಸ್ನಿಂದ ಈ ಘಟನೆ ಬಗ್ಗೆ ತಕ್ಷಣದ ಪ್ರತಿಕ್ರಿಯೆ ನೀಡಲಾಗಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications