ಬಿಹಾರದ ಸಿಎಂ ತೇಜಸ್ವಿಯಾದರೂ ಅಚ್ಚರಿಯಿಲ್ಲ: ಸಂಜಯ್ ರಾವತ್
ಮುಂಬೈ, ಅಕ್ಟೋಬರ್ 31: ಈಗಾಗಲೇ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ.
ಇದೀಗ ಬಿಹಾರದ ಮುಂದಿನ ಮುಖ್ಯಮಂತ್ರಿ ತೇಜಸ್ವಿ ಯಾವದ್ ಆದರೂ ಯಾವುದೇ ಆಶ್ಚರ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಯಾವುದೇ ಬೆಂಬಲವಿಲ್ಲದ ಯುವಕನೊಬ್ಬನಿದ್ದಾನೆ, ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳು ಅವನನ್ನು ಕಾಡುತ್ತಿವೆ. ಆತ ಕೇಂದ್ರ ಸರ್ಕಾರಕ್ಕೇ ಸವಾಲು ಹಾಕುತ್ತಿದ್ದಾನೆ, ಇದು ವಿರೋಧ ಪಕ್ಷಗಳಿಗೆ ಆಶ್ಚರ್ಯ ಉಂಟು ಮಾಡುತ್ತಿದೆ ಎಂದು ಪರೋಕ್ಷವಾಗಿ ನುಡಿದರು.

ಹಾಗಾಗಿ ಅವರು ಬಿಹಾರದ ಮುಖ್ಯಮಂತ್ರಿಯಾದರೆ ಆಶ್ಚರ್ಯವಾಗುವುದಿಲ್ಲ ಎಂದು ನುಡಿದರು.
ಪುಣೆಯಲ್ಲಿ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾವತ್, ಉತ್ತರದ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆಗಳತ್ತ ಎಲ್ಲರ ಚಿತ್ತವೂ ಇದೆ ಎಂದರು.












Click it and Unblock the Notifications