ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಹಾರದ ಸಿಎಂ ತೇಜಸ್ವಿಯಾದರೂ ಅಚ್ಚರಿಯಿಲ್ಲ: ಸಂಜಯ್ ರಾವತ್
ಮುಂಬೈ, ಅಕ್ಟೋಬರ್ 31: ಈಗಾಗಲೇ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ.
ಇದೀಗ ಬಿಹಾರದ ಮುಂದಿನ ಮುಖ್ಯಮಂತ್ರಿ ತೇಜಸ್ವಿ ಯಾವದ್ ಆದರೂ ಯಾವುದೇ ಆಶ್ಚರ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಯಾವುದೇ ಬೆಂಬಲವಿಲ್ಲದ ಯುವಕನೊಬ್ಬನಿದ್ದಾನೆ, ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳು ಅವನನ್ನು ಕಾಡುತ್ತಿವೆ. ಆತ ಕೇಂದ್ರ ಸರ್ಕಾರಕ್ಕೇ ಸವಾಲು ಹಾಕುತ್ತಿದ್ದಾನೆ, ಇದು ವಿರೋಧ ಪಕ್ಷಗಳಿಗೆ ಆಶ್ಚರ್ಯ ಉಂಟು ಮಾಡುತ್ತಿದೆ ಎಂದು ಪರೋಕ್ಷವಾಗಿ ನುಡಿದರು.
ಹಾಗಾಗಿ ಅವರು ಬಿಹಾರದ ಮುಖ್ಯಮಂತ್ರಿಯಾದರೆ ಆಶ್ಚರ್ಯವಾಗುವುದಿಲ್ಲ ಎಂದು ನುಡಿದರು.
ಪುಣೆಯಲ್ಲಿ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾವತ್, ಉತ್ತರದ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆಗಳತ್ತ ಎಲ್ಲರ ಚಿತ್ತವೂ ಇದೆ ಎಂದರು.
Comments
English summary
Shiv Sena leader Sanjay Raut today said he won't be surprised if RJD chief Tejashwi Yadav becomes Bihar chief minister. The Shiv Sena leader also said that the RJD leader is giving a strong challenge to the NDA government in Bihar despite facing multiple probes by central agencies like the CBI
Story first published: Saturday, October 31, 2020, 20:41 [IST]