ಉಗ್ರ ಬುರ್ಹಾನ್ ವಾನಿಯನ್ನು ಸಾಯಿಸಲು ಬಿಡುತ್ತಿರಲಿಲ್ಲ: ಕಾಂಗ್ರೆಸ್ ನಾಯಕ
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿಯನ್ನು ಕೊಲ್ಲಲು ಬಿಡುತ್ತಿರಲಿಲ್ಲ ಎಂದ ಮುಂಬೈ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಜ್. ಕಳೆದ ವರ್ಷ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದ ಉಗ್ರ ಬುರ್ಹಾನ್ ವಾನಿ.
ಮುಂಬೈ, ಜುಲೈ 7: ಕಾಶ್ಮೀರದಲ್ಲಿ ತಮ್ಮ ಅಧಿಕಾರವಿದ್ದಿದ್ದರೆ, ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಬುರ್ಹಾನ್ ವಾನಿಯವರನ್ನು ಸಾಯಿಸಲು ಬಿಡುತ್ತಿರಲಿಲ್ಲ ಎಂದು ಕಾಂಗ್ರೆಸ್ ಮುಖ್ಯಸ್ಥ ಸುಫುದ್ದೀನ್ ಸೋಜ್ ಹೇಳಿದ್ದಾರೆ.
ಕಳೆದ ವರ್ಷ ಕಾಶ್ಮೀರದಲ್ಲಿ ನಡೆದಿದ್ದ ಭಾರತೀಯ ಸೇನೆ ಹಾಗೂ ಕಾಶ್ಮಿರ ಉಗ್ರವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಬುರ್ಹಾನ್ ವಾನಿ ಸಾವಿಗೀಡಾಗಿದ್ದ.

ವಿವಾದವಾಗಿ ಪರಿವರ್ತನೆಗೊಳ್ಳಬಹುದಾದ ತಮ್ಮ ಹೇಳಿಕೆಗೆ ಸಮರ್ಥನೆಯೊಂದನ್ನೂ ನೀಡಿರುವ ಸೈಫುದ್ದೀನ್,''ಬುರ್ಹಾನ್ ವಾನಿಯವರನ್ನು ನಾನು ಮನವೊಲಿಸುತ್ತಿದ್ದೆ. ಭಾರತ, ಕಾಶ್ಮೀರ ಹಾಗೂ ಪಾಕಿಸ್ತಾನಗಳ ನಡುವಿನ ಬಾಂಧವ್ಯವನ್ನು ನಾನು ಆತನಿಗೆ ಬಿಡಿಸಿಹೇಳುತ್ತಿದ್ದೆ. ಆದರೆ, ಅದು ಸಾಧ್ಯವಾಗಲಿಲ್ಲ. ಕಾಶ್ಮೀರ ಜನತೆಯ ನೋವಿಗೆ ನಮ್ಮ ಸಹಾನುಭೂತಿಯಿದೆ'' ಎಂದಿದ್ದಾರೆ ಅವರು.
ಆದರೆ, ಕಾಶ್ಮೀರದ ಪ್ರತ್ಯೇಕತಾವಾದಿಗಳ ಕಣ್ಮಣಿಯಾಗಿದ್ದ ಈ ವ್ಯಕ್ತಿಯ ಸಾವು ಕಾಶ್ಮೀರದಲ್ಲಿ ಭಾರೀ ಗಲಭೆ ಹಾಗೂ ಹಿಂಸಾಚಾರಕ್ಕೆ ನಾಂದಿ ಹಾಡಿತ್ತು. ಸುಮಾರು 53 ದಿನಗಳ ಕಾಲ ನಡೆದ ಈ ಹಿಂಸಾಚಾರದಲ್ಲಿ ಸುಮಾರು 78 ಜನರು ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳು ಅಸುನೀಗಿದ್ದರು.
ಭಾರತೀಯ ಭದ್ರತಾ ಪಡೆಗಳ ಗುಂಡಿಗೆ ಕಳೆದ ವರ್ಷ ಬಲಿಯಾಗಿದ್ದ ಬುಹ್ರಾನ್ ವಾನಿಯ ಅವರ ಮೊದಲ ಪುಣ್ಯತಿಥಿ ಆಚರಣೆಯನ್ನು ಕಾಶ್ಮೀರದಲ್ಲಿನ ಆತನ ಅಭಿಮಾನಿಗಳು ಆಚರಿಸುತ್ತಿರುವ ಈ ಹೊತ್ತಿನಲ್ಲಿ ಸೈಫುದ್ದೀನ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications