ಯಾಗದಿಂದ ಭಕ್ತರಲ್ಲಿ ಆತ್ಮಜ್ಞಾನ ವೃದ್ಧಿ ಸಾಧ್ಯ : ಮಾಣಿಲಶ್ರೀ
ಮುಂಬಯಿ, ಅಕ್ಟೋಬರ್ 28 : ಸಮಾಜ ಕಲ್ಯಾಣದ ಸಂಕಲ್ಪ ಹೊಂದಿದ ಸಾಧುಸಂತರು, ಧರ್ಮಭೂಮಿಯ ಕರ್ಮ ತೀರಿಸಲು, ತಮ್ಮಲ್ಲಿನ ಆಧ್ಯಾತ್ಮಿಕ ಮನಸ್ಸುಗಳನ್ನು ಶುದ್ಧೀಕರಿಸಿ ಜನ್ಮಕಲ್ಯಾಣ ಮಾಡಬೇಕೆನ್ನುವ ಉದ್ದೇಶವಿಟ್ಟುಕೊಂಡಿರುತ್ತಾರೆ ಎಂದು ಬಂಟ್ವಾಳ ಮುರುವ ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ತಿಳಿಸಿದ್ದಾರೆ.
ಸಂತರು ಭಾವೈಕ್ಯದ ಹರಿಕಾರರು ಆಗಿದ್ದು ಅವರ ಅನುಗ್ರಹದಿಂದ ಅಧ್ಯಾತ್ಮದ ಒಲವನ್ನು ಹೊಂದಿದಾಗಲೇ ವೈಚಾರಿಕ ಪ್ರಜ್ಞೆಯ ಜಾಗೃತಿ ಮೂಡುವುದು. ಯಾಗದಿಂದ ಭಕ್ತರಲ್ಲಿ ಆತ್ಮಜ್ಞಾನ ವೃದ್ಧಿಯಾಗುವುದು ಎಂದು ಅವರು ಹಿತವಚನ ನೀಡಿದರು.

ಆದಿತ್ಯವಾರ ಸಂಜೆ ಉಪನಗರ ಮುಲುಂಡ್ ಶಿವಾಜಿ ನಗರದಲ್ಲಿನ ನವೋದಯ ಕನ್ನಡ ವಿದ್ಯಾಲಯದ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ವಿಶ್ವಜಿತ್ ಅತಿರಾತ್ರ ಸೋಮಯಾಗದ ಪೂರ್ವಸಿದ್ಧತಾ ಸಭೆ ಉದ್ಘಾಟಿಸಿ ಮೋಹನದಾಸ ಸ್ವಾಮೀಜಿ ನೆರೆದ ಸದ್ಭಕ್ತರನ್ನು ಅನುಗ್ರಹಿಸಿದರು.
ನನ್ನ ಶಿಷ್ಯರಾಗಿದ್ದ ಕೊಂಡೆಯೂರು ಶ್ರೀಗಳಿಗೆ ದೀಕ್ಷೆಯನ್ನಿತ್ತಾಗಲೇ ಅವರಲ್ಲಿ ಭಕ್ತಿಮಾರ್ಗದಿಂದ ಸಮಾಜೋದ್ಧಾರ ನಡೆಸುವ ಶಕ್ತಿ ಕಂಡಿದ್ದೆ. ಆದುದರಿಂದ ಅವರ ಆಶಯದ ಯಾಗದ ಮಹತ್ವವನ್ನು ನಾವೆಲ್ಲರೂ ತಿಳಿದು ಅವರೊಡನೆ ಒಗ್ಗೂಡಿ ಸಮಾಜ ಕಲ್ಯಾಣದ ಸಂಕಲ್ಪವನ್ನು ಈಡೇರಿಸಬೇಕು. ಆ ಮೂಲಕ ಭಾರತೀಯ ಸಂಸ್ಕೃತಿ ವಿಶ್ವದಾದ್ಯಂತ ಬೆಳಗಿಸೋಣ ಎಂದರು.

2019ರ ಫೆ.18ರಿಂದ 24ರ ತನಕ ಕಾಸರಗೋಡು ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಹಮ್ಮಿಕೊಳ್ಳಲಾಗಿರುವ ವಿಶ್ವಜಿತ್ ಅತಿರಾತ್ರ ಸೋಮಯಾಗ'ದ ಬಗ್ಗೆ ಕೊಂಡೆವೂರು ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಸಂಕ್ಷೀಪ್ತ ಮಾಹಿತಿ ನೀಡಿದರು.
ಭಕ್ತಿಯಿಂದ ಬಂದ ಪ್ರತಿಯೊಬ್ಬ ಭಕ್ತರ ಮನೋಭಿಷ್ಠಗಳನ್ನು ಈಡೇರಿಸುವುದು ಸನ್ಯಾಸಿಗಳ ಧರ್ಮವಾಗಿದೆ. ಸಜ್ಜನರ ಸ್ನೇಹಿಗಳಾಗಿ ಜೀವನ್ನುದ್ದಕ್ಕೂ ಭಕ್ತೋದ್ಧಾರದ ಕಾರ್ಯ ನೆರವೇರಿಸಿ ಜೀವನ ಪಾವನಗೊಳಿಸಲು ಇಂತಹ ಧಾರ್ಮಿಕ ಸೇವೆಗಳು ಅಗತ್ಯವಾಗಿವೆ. ಆದ್ದರಿಂದ ಸೋಮಯಾಗದಲ್ಲಿ ಭಾಗಿಗಳಾಗಿ ಪುಣ್ಯಕ್ಕೆ ಪಾತ್ರರಾಗಿರಿ ಎಂದು ಭಕ್ತಾಭಿಮಾನಿ ಬಂಧುಭಗಿನಿಯರಿಗೆ ಕರೆಯಿತ್ತರು.

ಮುಂಬಯಿ ಸಮಿತಿಯ ಅಶೋಕ್ ಎಂ.ಕೋಟ್ಯಾನ್ ಥಾಣೆ, ಎಸ್.ಕೆ ಶ್ರೀಯಾನ್, ವಿಶ್ವನಾಥ್ ಯು.ಮಾಡಾ, ರವಿ ಎಸ್.ಮಂಜೇಶ್ವರ, ಹರೀಶ್ ಕೆ.ಚೇವಾರ್, ಚಂದ್ರಶೇಖರ ಆರ್.ಬೆಲ್ಚಡ, ತೋನ್ಸೆ ಸಂಜೀವ ಪೂಜಾರಿ ಸೇರಿದಂತೆ ನೂರಾರು ಭಕ್ತರು, ಸಮಿತಿ ಸದಸ್ಯರು ಉಪಸ್ಥಿತರಿದ್ದು, ಶ್ರೀಗಳು ಫಲಮಂತ್ರಾಕ್ಷತೆಯೊಂದಿಗೆ ಹರಸಿದರು.

ಯಾಗ ಸಮಿತಿ ಗೌ| ಪ್ರ| ಕಾರ್ಯದರ್ಶಿ ನಿತ್ಯಾನಂದ ಡಿ.ಕೋಟ್ಯಾನ್ ಸ್ವಾಗತಿಸಿ ಕೊಂಡೆವೂರು ಕ್ಷೇತ್ರದ ಸೇವಾ ವೈಖರಿಯನ್ನು ಪ್ರಸ್ತಾಪಿಸಿ ವಿಶ್ವಜಿತ್ ಅತಿರಾತ್ರ ಸೋಮಯಾಗದ ಸಿದ್ಧತೆ ಬಗ್ಗೆ ತಿಳಿಸಿದರು. ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು. ಮುಂಬಯಿ ಸಮಿತಿ ಅಧ್ಯಕ್ಷ ರಾಜೇಶ್ ರೈ ವಂದಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications