'ಬಿಜೆಪಿ ಹಾಗೂ ಆಪ್ ನನ್ನನ್ನು ಬಳಸಿಕೊಂಡು ಅಧಿಕಾರಕ್ಕೆ ಏರಿದವರು'
ಅಹ್ಮದ್ ನಗರ್ (ಮಹಾರಾಷ್ಟ್ರ), ಫೆಬ್ರವರಿ 4: 2014ರ ಲೋಕಸಭೆ ಚುನಾವಣೆ ಗೆಲ್ಲಲು ಭಾರತೀಯ ಜನತಾ ಪಕ್ಷ ನನ್ನನ್ನು ಬಳಸಿಕೊಂಡಿತು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಹೌದು. 2014ರಲ್ಲಿ ಬಿಜೆಪಿ ನನ್ನನ್ನು ಬಳಸಿಕೊಂಡಿತು. ಲೋಕಪಾಲ ಜಾರಿಗೆ ಆಗ್ರಹಿಸಿ ನಾನು ಆರಂಭಿಸಿದ ಹೋರಾಟವನ್ನು ಬಳಸಿಕೊಂಡು, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿತು ಎಂದಿದ್ದಾರೆ.
ಅವರ ಬಗ್ಗೆ ಈಗ ಎಲ್ಲ ವಿಶ್ವಾಸವನ್ನೂ ನಾನು ಕಳೆದುಕೊಂಡಿದ್ದೇನೆ ಎಂದು ರಾಲೇಗಣ್ ಸಿದ್ಧಿಯಲ್ಲಿ ಹೇಳಿದ ಅಣ್ಣಾ ಹಜಾರೆ, ನರೇಂದ್ರ ಮೋದಿ ನೇತೃತ್ವದ ಸರಕಾರ ದೇಶದ ಜನರನ್ನು ಹಾದಿ ತಪ್ಪಿಸುತ್ತಿದೆ. ದೇಶವನ್ನು ಸರ್ವಾಧಿಕಾರದ ಬಗ್ಗೆ ಕರೆದೊಯ್ಯುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಕಳೆದ ನಾಲ್ಕು ವರ್ಷದಿಂದ ಮಹಾರಾಷ್ಟ್ರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ 'ಸುಳ್ಳು' ಹೇಳುತ್ತಲೇ ಇದೆ. ಎಷ್ಟು ಕಾಲ ಈ ಸುಳ್ಳು ಮುಂದುವರಿಯುತ್ತದೆ? ದೇಶದ ಜನರು ಈಗಾಗಲೇ ಸರಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ನಾನು ಇಟ್ಟ ಬೇಡಿಕೆಗಳ ಪೈಕಿ ಶೇಕಡಾ ತೊಂಬತ್ತರಷ್ಟನ್ನು ಪರಿಗಣಿಸಲಾಗಿದೆ ಎಂದು ಸರಕಾರ ಹೇಳಿದೆ. ಆದರೆ ಅದು ಕೂಡ ಸುಳ್ಳು ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಅವರ ಮೇಲೆ ನನಗೆ ಈಗ ನಂಬಿಕೆ ಹೋಗಿದೆ
ಕೇಂದ್ರ ಹಾಗೂ ಮಹಾರಾಷ್ಟ್ರ ಸರಕಾರದ ಸಚಿವರು ಬಂದು ನನ್ನ ಜತೆ ಚರ್ಚಿಸುತ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ನಾನೇ ಅವರಿಗೆ ಬೇಡ ಅಂದೆ. ಏಕೆಂದರೆ ಇದರಿಂದ ಜನ ಗೊಂದಲಕ್ಕೆ ಈಡಾಗುತ್ತಾರೆ. ಅವರೇ ದೃಢ ನಿರ್ಧಾರ ತೆಗೆದುಕೊಳ್ಳಲಿ. ಪ್ರತಿಯೊಂದನ್ನೂ ಬರವಣಿಗೆಯಲ್ಲಿ ನೀಡಲಿ. ಏಕೆಂದರೆ ನಾನೀಗಾಗಲೇ ಅವರಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ ಎಂದಿದ್ದಾರೆ.

ಅರವಿಂದ್ ಕೇಜ್ರಿವಾಲ್ ಜತೆ ವೇದಿಕೆ ಹಂಚಿಕೊಳ್ಳಲ್ಲ
ಕೇಜ್ರಿವಾಲ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಣ್ಣಾ ಹಜಾರೆ, ಈ ಪ್ರತಿಭಟನೆಯಲ್ಲಿ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳಲಿ. ಆದರೆ ನನ್ನ ಜೊತೆ ವೇದಿಕೆ ಹಂಚಿಕೊಳ್ಳುವುದಕ್ಕೆ ಅನುಮತಿ ನೀಡುವುದಿಲ್ಲ ಎಂದಿದ್ದಾರೆ. ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಸೋಮವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಐದನೇ ದಿನದಂದು, ನನ್ನ ಬೇಡಿಕೆಗಳನ್ನು ಕೇಂದ್ರ ಸರಕಾರವು ಶೀಘ್ರವೇ ಈಡೇರಿಸದಿದ್ದರೆ ಪದ್ಮ ಭೂಷಣ ಪ್ರಶಸ್ತಿ ಹಿಂತಿರುಗಿಸುತ್ತೇನೆ ಎಂದು ಅವರು ಹೇಳಿದ್ದರು.

ಆರೆಸ್ಸೆಸ್-ಸಂಘ್ ಪರಿವಾರ್ ಏಜೆಂಟ್ ಹಜಾರೆ ಎಂದಿದ್ದ ಎನ್ ಸಿಪಿ ನಾಯಕ
ಕಳೆದ ವಾರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ವಕ್ತಾರ ನವಾಬ್ ಮಲ್ಲಿಕ್ ಅವರು, ಅಣ್ಣಾ ಹಜಾರೆ ಆರೆಸ್ಸೆಸ್ ಹಾಗೂ ಸಂಘ್ ಪರಿವಾರ್ ಏಜೆಂಟ್ ಎಂದಿದ್ದರು. ಆ ನಂತರ ಎನ್ ಸಿಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಆ ಹೇಳಿಕೆಗೆ ಕ್ಷಮೆ ಕೋರಿದ್ದರು.

ಇನ್ನೂ ಐದು ದಿನ ನನಗೇನೂ ತೊಂದರೆ ಇಲ್ಲ
ಆರನೇ ದಿನಕ್ಕೆ ಉಪವಾಸ ಸತ್ಯಾಗ್ರಹವು ಕಾಲಿಟ್ಟಿದೆ. ಎಂಬತ್ತೊಂದು ವರ್ಷದ ಅಣ್ಣಾ ಹಜಾರೆ ಆರೋಗ್ಯ ಕ್ಷೀಣಿಸುತ್ತಿದೆ. ಈ ಮಧ್ಯೆ ಅವರು ಮಾತನಾಡಿ, ಏನೂ ಯೋಚಿಸಬೇಡಿ. ನಾನು ಚೆನ್ನಾಗಿದ್ದೇನೆ. ಆ ದೇವರು ನನ್ನ ಜತೆಗೆ ಇದ್ದಾನೆ. ಇನ್ನೂ ಐದು ದಿನ ನನಗೇನೂ ಆಗುವುದಿಲ್ಲ ಎಂದು ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications