ಮುಂಬೈ: ಹಸ್ತಮೈಥುನ ಮಾಡ್ಕೊಂಡ ಯುವಕ ಬಂಧನ
ಮುಂಬೈ, ಆಗಸ್ಟ್ 19: ದಕ್ಷಿಣ ಮುಂಬೈನಲ್ಲಿ ಅಮೆರಿಕನ್ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮರಿಯಾನಾ ಅಬ್ ಡೋ ಅವರ ಎದುರು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡ ಯುವಕನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡ ಯುವಕನ ಚಿತ್ರ ತೆಗೆದು ಮರಿಯಾನಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ನಂತರ ಸುದ್ದಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಚಿವಾಲಯ ತಲುಪಿತ್ತು. ಈ ನಡುವೆ ಮರಿಯಾನಾ ಅವರ ಟ್ವೀಟ್ಗೆ ಅನೇಕ ಪ್ರತಿಕ್ರಿಯೆಗಳು ಹರಿದು ಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಮರಿಯಾನಾ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದರು.[ ಹಸ್ತಮೈಥುನ ಪ್ರಸಂಗದ ಟ್ವೀಟ್ ಪ್ರತಿಕ್ರಿಯೆಗಳು]

ಕೊಲಾಬಾ ಪ್ರದೇಶದಲ್ಲಿ ಈ ರೀತಿ ಹಸ್ತ ಮೈಥುನ ಮಾಡಿಕೊಂಡ ಯುವಕನನ್ನು ಗೋಪಾಲ್ ವಾಲ್ಮಿಕಿ ಎಂದು ಗುರುತಿಸಲಾಗಿದೆ. 20 ವರ್ಷ ಆಸುಪಾಸಿನ ಈ ಯುವಕನನ್ನು ಬುಧವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಕೊಲಾಬಾ ಪೊಲೀಸ್ ಠಾನೆ ಹಿರಿಯ ಇನ್ಸ್ ಪೆಕ್ಟರ್ ವಿನಯ್ ಗಾಡ್ಗೀಳ್ ಹೇಳಿದ್ದಾರೆ.
ಗೋಪಾಲ್ ವಾಲ್ಮೀಕಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 509 ಅನ್ವಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಇನ್ಸ್ ಪೆಕ್ಟರ್ ವಿನಯ್ ತಿಳಿಸಿದ್ದಾರೆ.
ಎಲ್ಲೆಡೆಯಿಂದ ಬಂದ ಬೆಂಬಲಕ್ಕೆ ನಾನು ಋಣಿ. ಸೋಮವಾರ ನಾನು ಹಾಕಿದ್ದ ಚಿತ್ರ ಎಚ್ಚರಿಕೆಯಾಗಲಿ. badalja.com ವೆಬ್ ತಾಣಕ್ಕೆ ಭೇಟಿ ಕೊಡಿ ಎಂದ ಮರಿಯಾನಾ ಸಾಮಾಜಿಕ ಕಳಕಳಿವುಳ್ಳ ನಾಗರಿಕರಿಗೆ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.(ಪಿಟಿಐ)
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications