ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಣೆ: ಸಿಎಂ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜುಲೈ 11: ಈ ಬಾರಿ ಮೈಸೂರು ದಸರಾವನ್ನು ಪ್ರವಾಸೋದ್ಯಮ ಕೇಂದ್ರಿತವಾಗಿ ಆಚರಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಲಹೆ ನೀಡಿದರು. ಇಂದು (ಜುಲೈ 11) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಸಿದ್ಧತೆ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು.

ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಪೂರಕವಾಗಿ ಮೈಸೂರು ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ತೈವಾನ್ ದೇಶ ತೋರಿರುವ ಬದ್ಧತೆಯನ್ನು ಸ್ವಾಗತಿಸಿದ ಕುಮಾರಸ್ವಾಮಿತೈವಾನ್ ದೇಶ ತೋರಿರುವ ಬದ್ಧತೆಯನ್ನು ಸ್ವಾಗತಿಸಿದ ಕುಮಾರಸ್ವಾಮಿ

ಪ್ರತಿವರ್ಷದ ಕಾರ್ಯಕ್ರಮಗಳಿಗಿಂತ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಸೂಚಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ.

2018 Mysuru Dasara more on toursim centric, CM HD Kumaraswamy

ಈ ಹಿನ್ನೆಲೆಯಲ್ಲಿ ಜುಲೈ 20ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ, ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರಿನಾಗರ ಕಾಣುವುದಕ್ಕೂ ಎಚ್ಡಿಕೆ ಮನೆ ಬಿಡದಿರುವುದಕ್ಕೂ ಎಲ್ಲಿಯ ಸಂಬಂಧ? ಕರಿನಾಗರ ಕಾಣುವುದಕ್ಕೂ ಎಚ್ಡಿಕೆ ಮನೆ ಬಿಡದಿರುವುದಕ್ಕೂ ಎಲ್ಲಿಯ ಸಂಬಂಧ?

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಎಸ್. ಪುಟ್ಟರಂಗಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಸಚಿವ ಡಾ. ಜಯಮಾಲ ಭಾಗವಹಿಸಿದ್ದರು,

ಜೊತೆಗೆ, ಆ ಭಾಗದ ಶಾಸಕರು, ಇತರ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

English summary
Karnataka Chief Minister HD Kumarawamy suggested to make Mysuru Dasara 2018 celebration tourism centric. He was addressing the High Level Committee meeting on preparations for Mysuru Dasara on July 11th at Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X