ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಯುವತಿಯ ನಿಗೂಢ ಸಾವು, ಮರ್ಯಾದಾ ಹತ್ಯೆ ಶಂಕೆ

|
Google Oneindia Kannada News

ಮೈಸೂರು, ಜನವರಿ 19 : ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೈಸೂರಿನಲ್ಲಿ ನಂಜನಗೂಡಿನಲ್ಲಿ ಮತ್ತೊಂದು ಮರ್ಯಾದೆ ಹತ್ಯೆ ನಡೆದಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಕಾಳನಾಯಕ ಮತ್ತು ನಾಗಮ್ಮ ಎಂಬವರ ಪುತ್ರಿ ಸವಿತಾ(25) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ನಂಜನಗೂಡು ಕೂಗಲೂರು ಮತ್ತು ಕಸುವಿನಹಳ್ಳಿ ಬಳಿ ಶವ ಪತ್ತೆಯಾಗಿದೆ. ಮುಖ್ಯ ರಸ್ತೆಯ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಈಕೆ ಅನ್ಯ ವರ್ಗದ ಯುವಕನನ್ನು ಪ್ರೀತಿಸಿದ್ದಳು ಎನ್ನಲಾಗಿದೆ.

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

ಬೆಂಗಳೂರಿನಲ್ಲಿ ನರ್ಸಿಂಗ್ ತರಬೇತಿ ಮಾಡಿದ್ದು, ಒಂದು ತಿಂಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದಳು. ಕೂಗಲೂರು ಗ್ರಾಮದ ಗೌರಮ್ಮ ಅವರ ಪುತ್ರ ಶಂಕರ್ ಎಂಬ ಅನ್ಯ ವರ್ಗದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು.

A girl death at mysuru honour killing suspect

ಪ್ರೀತಿ, ಪ್ರೇಮಕ್ಕೆ ಜಾತಿ ಅಡ್ಡ ಬಂದ ಕಾರಣ ಮರ್ಯಾದೆ ಹತ್ಯೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ನಂಜನಗೂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
The 25 old girl died in Nanjangudu, but it suspect killing by some others. She is loving other caste boy and getting marry in few days. Honour killing suspect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X