ನಾನಾ ಸೌಂದರ್ಯ, ಸೊಬಗಿನ ತಾಣವೇ ಮೈಸೂರು ಅರಮನೆ
ಮೈಸೂರು, ಅಕ್ಟೋಬರ್,21: ಸುತ್ತಲೂ ಹಸಿರಿನಿಂದ ಕಂಗೊಳಿಸುತ್ತಿರುವ ಪರಿಸರ.... ಸುಣ್ಣ, ಬಣ್ಣ ಬಳಿದು ಸ್ವಚ್ಛವಾಗಿ ಕಂಗೊಳಿಸುವ ಕಟ್ಟಡ, ವಸತಿ ಪ್ರದೇಶಗಳು, ಹೂ ಬನಗಳು ಅರಮನೆಯಿಂದ ನಿಂತು ದೃಷ್ಠಿ ನೆಟ್ಟರೆ ಸಾಕು ಕಣ್ಮುಂದೆ ಬಂದು ಬಿಡುತ್ತದೆ. ಹೆಚ್ಚಿನ ಪ್ರವಾಸಿಗರು, ಛಾಯಾಗ್ರಾಹಕರು ಹೊರಗೆ ನಿಂತು ಭವ್ಯ ಅರಮನೆ ದೃಶ್ಯವನ್ನು ತಮ್ಮ ಕ್ಯಾಮರಾಗಳಲ್ಲಿ ಖುಷಿಡುತ್ತಾರೆ. ಆದರೆ ಅದೇ ಅರಮನೆಯಿಂದ ನಿಂತು ಹೊರಗೆ ನೋಡಿದರೆ ಅದಕ್ಕಿಂತ ಹೆಚ್ಚಿನ ಸುಂದರ ದೃಶ್ಯಗಳು ಕಾಣಸಿಗುತ್ತವೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.
ಹಿಂದಿನ ಒಡೆಯರ ಕಾಲದಲ್ಲಿ ರಾಜಪರಿವಾರ ಅರಮನೆ ಮೇಲೆ ನಿಂತು ನಗರ ಸೌಂದರ್ಯವನ್ನು ಸವಿಯುತ್ತಾ ಸಮಯ ಕಳೆಯುತ್ತಿದ್ದರು. ಸಾಮಾನ್ಯವಾಗಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಅರಮನೆಯ ಒಳಾಂಗಣವನ್ನು ವೀಕ್ಷಿಸುವುದರಲ್ಲೇ ಸಮಯ ಕಳೆದು ಬಿಡುತ್ತಾರೆ. ಜೊತೆಗೆ ಅರಮನೆ ಮೇಲೆ ತೆರಳಲು ಸಾರ್ವಜನಿಕರಿಗೆ ಅವಕಾಶವಿಲ್ಲದ ಕಾರಣ ಅರಮನೆಯಿಂದ ಹೊರ ನೋಟ ಅಲಭ್ಯ.[ಮೈಸೂರಿನ ಅರಮನೆಗಳ ಇತಿಹಾಸ ಗೊತ್ತಾ?]
ಸಾಮಾನ್ಯವಾಗಿ ದಸರಾ ಬಂತೆಂದರೆ ಮೈಸೂರು ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿರುತ್ತದೆ. ಇದರೊಂದಿಗೆ ಅರಮನೆ ಇಂದ್ರನ ಅಮರಾವತಿಯನ್ನು ನಮ್ಮ ಮುಂದೆ ತೆರೆದಿಡುತ್ತದೆ. ಇಂತಹ ಅರಮನೆಯ ಮತ್ತೊಂದು ನೋಟದ ಒಂದಷ್ಟು ಅಪರೂಪದ ಚಿತ್ರಗಳು ಇಲ್ಲಿದೆ.
ಭವ್ಯ ಅಂಬಾವಿಲಾಸ ಅರಮನೆಯ ಚಿತ್ರಣ
ಮೈಸೂರು
ಅರಮನೆ
ಬಗ್ಗೆ
ಹೇಳುವುದಾದರೆ
ಅದಕ್ಕೆ
ತನ್ನದೇ
ಇತಿಹಾಸವಿದೆ.
ಜೊತೆಗೆ
ತನ್ನದೇ
ಸೌಂದರ್ಯದಿಂದ
ವಿಶ್ವವಿಖ್ಯಾತಿಯನ್ನು
ಪಡೆದಿದೆ.
ಮೈಸೂರು
ಅರಮನೆ
ಎಂದಾಕ್ಷಣ
ವಿದ್ಯುತ್
ದೀಪಗಳಿಂದ
ಝಗಮಗಿಸುವ
ಭವ್ಯ
ಅಂಬಾವಿಲಾಸ
ಅರಮನೆಯ
ಚಿತ್ರಣ
ಎಲ್ಲರ
ಕಣ್ಮುಂದೆ
ಹಾದುಹೋಗದಿರದು.
ವಿದ್ಯುದ್ದೀಪವಿಲ್ಲದಿದ್ದರೂ
ಅರಮನೆಯ
ಅಂದಕ್ಕೆ
ಅರಮನೆಯೇ
ಸಾಟಿ
ಎಂದರೆ
ತಪ್ಪಾಗಲಾರದು.
ಇತಿಹಾಸದ
ಮೆಲುಕು
ಹಾಕಿದರೆ
ಹಳೆಯ
ಅರಮನೆ
1800
ಮತ್ತು
1804ರಲ್ಲಿ
ಕಟ್ಟಲಾಗಿತ್ತು.
ಈ
ಅರಮನೆಯು
ಕಟ್ಟಿಗೆ
ಹಾಗೂ
ಇಟ್ಟಿಗೆಗಳಿಂದ
ನಿರ್ಮಾಣವಾಗಿದ್ದರಿಂದ
ಈ
ಅರಮನೆ
ಆಕಸ್ಮಿಕ
ಬೆಂಕಿಗೆ
ಆಹುತಿಯಾಯಿತು.[ಇತಿಹಾಸದ
ಕಥೆ
ಹೇಳುತ್ತವೆ
ಮೈಸೂರಿನ
ಅರಮನೆಗಳು]
ಅಂಬಾ ವಿಲಾಸ ಅರಮನೆ ಬೆಂಕಿಗೆ ಹೇಗೆ ಆಹುತಿಯಾಯಿತು?
1897 ಫೆಬ್ರವರಿ 28ರಂದು ಚಾಮರಾಜೇಂದ್ರ ಒಡೆಯರ್ ಮತ್ತು ವಾಣಿವಿಲಾಸ ಸನ್ನಿಧಾನದವರ ಹಿರಿಯ ಪುತ್ರಿ ಜಯಲಕ್ಷ್ಮಮ್ಮಣ್ಣಿಯವರ ವಿವಾಹ ಸರ್ದಾರ್ ಕಾಂತರಾಜೇ ಅರಸ್ ಅವರೊಂದಿಗೆ ಜರುಗಿತು. ಆ ಸಂದರ್ಭದಲ್ಲಿ ಜಯಲಕ್ಷ್ಮಮ್ಮಣ್ಣಿಯವರ ಕೂದಲಿಗೆ ಸಾಂಬ್ರಾಣಿ ಹೊಗೆ ಕೊಡುವ ವೇಳೆ ಕೆಂಡವೊಂದು ಕೆಳಗೆ ಬಿದ್ದು ತೇಗದ ಮರಕ್ಕೆ ಬೆಂಕಿ ಹತ್ತಿಕೊಂಡು ಉರಿಯತೊಡಗಿತ್ತು. ಈ ಬೆಂಕಿಯನ್ನು ಸುಮಾರು 8000 ಮಂದಿ ಸೇರಿ ನಂದಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಆದರೆ ಅರಮನೆಯಲ್ಲಿದ್ದ ರಾಜವಂಶಸ್ಥರನ್ನು ಯಾವುದೇ ಪ್ರಾಣಾಪಾಯವಾಗದಂತೆ ಕಾಪಾಡಲಾಗಿತ್ತು. ಬಳಿಕ ರಾಜವಂಶಸ್ಥರು ಸಮೀಪದ ಜಗನ್ಮೋಹನ ಅರಮನೆಯಲ್ಲಿ ವಾಸ್ತವ್ಯ ಹೂಡಿದ್ದರು.[ವಸಂತಮಹಲ್, ಕಾರಂಜಿ ವಿಲಾಸ ಅರಮನೆಗಳ ವಿಶೇಷತೆಗಳು]
ಅಂಬಾವಿಲಾಸ ಅರಮನೆಯ ಮರುವಿನ್ಯಾಸಕಾರ ಯಾರು?
ಬೆಂಕಿ ಆಕಸ್ಮಿಕ ಸಂಭವಿಸಿದರೂ ಹೊಸ ಮಾದರಿಯಲ್ಲಿ, ಅದೇ ವಿನ್ಯಾಸದ ಅರಮನೆಯನ್ನು ನಿರ್ಮಿಸಲು ತೀರ್ಮಾನಿಸಲಾಯಿತು. ಇದರ ಜವಾಬ್ದಾರಿಯನ್ನು ಮದ್ರಾಸ್ ಸರ್ಕಾರದ ಸಲಹೆಗಾರ ಇಂಜಿನಿಯರಾದ ಹೆನ್ರಿಇರ್ವಿನ್ ಅವರಿಗೆ ವಹಿಸಲಾಯಿತು.ಹಿಂದೆಯಿದ್ದ ಕಟ್ಟಿಗೆಯ ಅರಮನೆಯಂತೆ ಅದೇ ವಿನ್ಯಾಸದಲ್ಲಿ ಹೊಸ ಅರಮನೆಯನ್ನು ನಿರ್ಮಿಸಬೇಕಾಗಿತ್ತು. ಆದರೆ ಅದರ ನೀಲಿ ನಕ್ಷೆ ಇರಲಿಲ್ಲ ಆ ಬ್ರಿಟಿಷ್ ಸೈನಿಕನೊಬ್ಬ ತನ್ನ ಕ್ಯಾಮರಾದಲ್ಲಿ ಸೆರೆಹಿಡಿದಿದ್ದ ಫೋಟೋ ಅಧಿಕಾರಿಗಳ ಬಳಿಯಿತ್ತು. ಅದನ್ನು ಪಡೆದುಕೊಂಡ ಹೆನ್ರಿ ಇರ್ವಿನ್ ಅದರಂತೆ ಅರಮನೆಯನ್ನು ನಿರ್ಮಿಸಲು ಮುಂದಾದನು.[ಮೈಸೂರಿನಲ್ಲಿ ಗಜಪಡೆಯ ತಾಲೀಮು ಹೇಗಿರುತ್ತೆ ಗೊತ್ತಾ?]
ಇರ್ವಿನ್ ಗೆ ನೀಡಿದ ಸಂಬಳವೆಷ್ಟು?
ಅರಮನೆಯ ನಕಾಶೆ ರೂಪಿಸಿದ ಹೆನ್ರಿಇರ್ವಿನ್ ರವರಿಗೆ ೧೨,೦೦೦ ಶುಲ್ಕ ನೀಡಿದ್ದರಂತೆ. ಅರಮನೆಯ ಇಂಜಿನಿಯರ್ ಆಗಿ ಬಿ.ಪಿ.ರಾಘವಲುನಾಯಿಡು ಕೆಲಸ ಮಾಡಿದರೆ, ಅರಮನೆಯಲ್ಲಿ ಚಿತ್ರರಚಿಸಲು ನಾಗರಾಜು ಎಂಬ ಕಲಾವಿದನನ್ನು ಚಿತ್ರರಚನೆಯ ಅಧ್ಯಯನಕ್ಕಾಗಿ ಯುರೋಪಿನ ರಾಜ್ಯಗಳಿಗೆ ಕಳುಹಿಸಲಾಯಿತು ಇದಕ್ಕಾಗಿ ಒಡೆಯರ್ ಮಾಡಿದ ಖರ್ಚು 2439 ರೂಪಾಯಿ 4 ಆಣೆ 8 ಕಾಸಂತೆ. ಜೊತೆಗೆ ಹಳೆಬೀಡು, ಬೇಲೂರು ಹಾಗೂ ಸೋಮನಾಥಪುರ ದೇವಾಲಯದ ನಿರ್ಮಾಣದಲ್ಲಿ ಮಾಡಲಾದ ಕುಸುರಿ ಕೆತ್ತನೆಯನ್ನು ಅರಮನೆಯ ನಿರ್ಮಾಣದ ಸಂದರ್ಭ ಅನುಸರಿಸಲಾಯಿತು ಎನ್ನಲಾಗಿದೆ.[ಜಯಲಕ್ಮೀ ವಿಲಾಸ, ಲಲಿತ್ ಮಹಲ್ ಅರಮನೆ ಬಗ್ಗೆ ಓದಿ]
ಅರಮನೆಯ ಸಂಪೂರ್ಣ ವಿಸ್ತಾರವೆಷ್ಟು?
ನಂತರ 1897 ರಿಂದ ಆರಂಭಗೊಂಡ ಅರಮನೆಯ ನಿರ್ಮಾಣ ಕಾರ್ಯ 1911-12ರಲ್ಲಿ ಸುಮಾರು 41,47,913 ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿತು. ಕೋಟೆ ಸೇರಿದಂತೆ ಸುಮಾರು 72 ಎಕರೆಗಿಂತಲೂ ಹೆಚ್ಚಿನ ವಿಸ್ತಾರದಲ್ಲಿ ನೆಲೆನಿಂತಿರುವ ಅರಮನೆ 74.50 ಮೀ ಉದ್ದ ಹಾಗೂ 47.50 ಮೀಟರ್ ಅಗಲವಾಗಿದೆ. ಅರಮನೆಯ ಮುಖ್ಯ ಕಟ್ಟಡವನ್ನು ಕಂದು ಬಣ್ಣದ ದಪ್ಪ ಸ್ಪಟಿಕದ ಗಟ್ಟಿ ಶಿಲೆಗಳಿಂದ ನಿರ್ಮಿಸಲಾಗಿದೆ. ಅರಮನೆಯ ಮಧ್ಯಭಾಗದ ಐದು ಅಂತಸ್ತಿನ ಬಂಗಾರದ ಗಿಲೀಟಿನ ಗಗನಚಂಬಿ ಗೋಪುರ ಭೂಮಿಯಿಂದ ಸುಮಾರು 145 ಅಡಿ ಎತ್ತರದಲ್ಲಿದೆ.[ಇಷ್ಟಕ್ಕೂ ದಸರಾ ಆನೆಗಳನ್ನು ಸಾಕೋದು ಅಂದ್ರೆ ಸುಮ್ಮನೇನಾ?]
ಅರಮನೆಯ ಒಳಗಿನ ಸೌಂದರ್ಯ ಸವಿಯಿರಿ
ಅರಮನೆಯು ಬೆಳಕಿಗೆ ಬಿಟ್ಟಿರುವ ಅಂಗಳದ (ತೊಟ್ಟಿ) ಸುತ್ತಲೂ ಕಟ್ಟಲ್ಪಟ್ಟಿದೆ. ಈ ತೊಟ್ಟಿಯ ಪೂರ್ವಭಾಗಕ್ಕೆ 21 ಅಡಿ ಅಗಲ ಹಾಗೂ 66 ಅಡಿ ಎತ್ತರವಿರುವ ಆಕರ್ಷಕ ಆನೆಯ ದ್ವಾರವಿದೆ. ದೊಡ್ಡ ಅಂಗಳದಲ್ಲಿ ಹೊರಗಡೆ ಸಜ್ಜೆಗೆ ಹೋಗುವ 15 ಅಡಿ ಅಗಲವುಳ್ಳ ದಾರಿಗಳು ದೊಡ್ಡ ಚೌಕದ ಹಾಗೆ ಕಾಣುತ್ತವೆ. ಇನ್ನು ಎರಡನೆ ಅಂತಸ್ತಿನಲ್ಲಿ ಪೂರ್ವ ಭಾಗಕ್ಕೆ 155 ಅಡಿ ಅಗಲವಿರುವ ವಿಶಾಲ ರಾಜ ಸಭಾಮಂದಿರವಿದೆ. ಅದರ ಮೇಲೆ ಖಾಸಗಿ ನಿವಾಸಿ ಸ್ಥಳಗಳಿವೆ.
ಕೆಳಗಿನ ಉಪ್ಪರಿಗೆಗೆ ಬಂದರೆ ಅಂಗಳದ ಉತ್ತರ ಭಾಗದಲ್ಲಿ ಆಯುಧಶಾಲೆ, ಪುಸ್ತಕ ಭಂಡಾರ, ಅವುಗಳ ಮೇಲೆ ಸಂಗೀತದ ಕೊಠಡಿ, ಸ್ತ್ರೀಯರ ಸ್ವಾಗತ ಕೊಠಡಿ ಮತ್ತು ಮೂರನೆಯ ಅಂತಸ್ತಿನಲ್ಲಿ ವಿಶ್ರಾಂತಿ ಕೊಠಡಿಗಳಿವೆ. ಒಳ ಅಂಗಳದ ಪಶ್ಚಿಮಕ್ಕೆ ಹಳೆಯ ಅರಮನೆಯಿದೆ. ದಕ್ಷಿಣ ಭಾಗದ ಹತ್ತಿರದಲ್ಲೇ ಮುದ್ದಾದ ನವಿಲಿನ ಕಲ್ಯಾಣ ಭದ್ರಮಂಟಪವಿದೆ. ಮುಂದೆ ಹೋದರೆ ಎರಡನೆಯ ಉಪ್ಪರಿಗೆಯಲ್ಲಿ ಅಂಬಾವಿಲಾಸ ಸಭಾ ಮಂಟಪವಿದೆ. ಅರಮನೆಯ ದಕ್ಷಿಣ ಭಾಗದಲ್ಲಿ ರಾಣೀವಿಲಾಸ ಹಾಗೂ ಪೂಜಾ ಕೊಠಡಿಗಳಿವೆ. ಇವು ಅಂಬಾವಿಲಾಸ ಸಭಾಭವನದವರೆಗೂ ವಿಸ್ತರಿಸಿವೆ.[ದಸರಾ ಗಜಪಡೆಗಳ ತೊಡುಗೆ ತಯಾರಿ ಹೇಗಿರುತ್ತದೆ?]
ಹಿಂದೂ ಗ್ರೀಕ್ ಕಲೆಯಲ್ಲಿ ನಿಂತ ಅರಮನೆ
ಮಧ್ಯಭಾಗದ ಮೂರು ನಾಲ್ಕು ಮತ್ತು ಐದನೇ ಅಂತಸ್ತುಗಳು ಮುಖ್ಯಗೋಪುರ ಶಿಖರಕ್ಕೆ ಆಧಾರಸ್ತಂಭಗಳಂತೆ ನಿಂತಿವೆ. ಅರಮನೆಯ ಹೊರನೋಟ ಹಿಂದೂ ಗ್ರೀಕ್ ಕಲೆಯ ರೂಪರೇಖೆಗಳಂತೆ ಕಂಡರೆ, ಬಾಗಿಲುಗಳ ಕಮಾನುಗಳ ಕಂಬ ಮತ್ತು ಬೋದುಗಳ ಅಲಂಕಾರಗಳು ಸ್ಪಷ್ಟ ಹೊಯ್ಸಳ ರೀತಿಯ ಕಲಾಕೃತಿಗಳಾಗಿವೆ. ಅರಮನೆಯ ಮಧ್ಯದ ಗೋಪುರವು ಪ್ರಭಾವಯುತವಾಗಿದ್ದು ಉಳಿದವುಗಳೆಲ್ಲವೂ ಅದಕ್ಕೆ ಹೊಂದಿಕೊಂಡ ಆಕೃತಿಗಳಾಗಿವೆ.
ಅರಮನೆಯ ಮುಖಭಾಗವನ್ನು ಹೇಗೆ ನಿರ್ಮಿಸಲಾಗಿದೆ?
ಅರಮನೆಯ ಮುಖ್ಯ ಮುಖಭಾಗದಲ್ಲಿ ಬೆಳಕು ಮತ್ತು ನೆರಳನ್ನು ಪಡೆಯುವ ಉದ್ದೇಶದಿಂದ ಗೋಪುರಗಳ, ಮಸೀದಿಯ ರೀತಿಯ ಶಿಖರಗಳ ಕೈಸಾಲೆ, ಉಪ್ಪರಿಗೆಯ ಮೊಗಸಾಲೆಗಳ. ವಸಾರೆ, ಪಡಸಾಲೆ, ಜಗಲಿಗಳ ಪೌಳಿ ಮಂಟಪಗಳ ಹಾಗೂ ಗೋಪುರ ಶಿಖರಗಳನ್ನು ಬಿಡಿಸಿ ನಿರ್ಮಿಸಲಾಗಿದೆ. ಮುಂಭಾಗದಲ್ಲಿ ಬೃಹತ್ ಕಂಬಗಳ ಜೊತೆಗೆ ಸ್ಪಟಿಕದ ಗಟ್ಟಿ ಶಿಲೆಗಳನ್ನು ಕೊರೆದು ನಿರ್ಮಿಸಿರುವ, ಪಡಸಾಲೆ, ಉಪ್ಪರಿಗೆಯ ಮೊಗಸಾಲೆಗಳು ತಮ್ಮದೇ ಆದ ಶ್ರೀಮಂತಿಕೆಯ ವೈಭವವನ್ನು ಸೂಚಿಸುತ್ತವೆ. ಅರಮನೆಯ ಅಡಿಪಾಯದಿಂದ ಮುಖ್ಯ ಗೋಪುರದ ತುದಿಯವರೆಗೂ ಉತ್ತಮ ಮಟ್ಟದ ಹಿಂದೂ ಶಿಲ್ಪ ವಿದ್ಯೆಯ ನುರಿತ ಕೆಲಸಗಾರರಿಂದ ಶಿಲ್ಪಕಲೆ ರಚಿಸಲ್ಪಟ್ಟಿದೆ. ಅಲ್ಲದೆ ಉಚ್ಛ ರೀತಿಯ ಹಿಂದೂ ಶಿಲ್ಪ ಕಲೆ ಮತ್ತು ಗ್ರೀಕ್ ಕಲೆಯು ಮಿಳಿತಗೊಂಡು ಶೋಭಾಯಮಾನವಾಗಿ ಕಂಗೊಳಿಸುತ್ತದೆ.
ಕಲಾವಿದನ ಕೈಚಳಕದಲ್ಲಿ ಏನೆಲ್ಲಾ ಮೂಡಿದೆ?
ಅರಮನೆಯಲ್ಲಿ ಮಾಡಿದ ಕಲ್ಲಿನ, ದಂತ ಮತ್ತು ಮರದ ಕೆತ್ತನೆ ಕೆಲಸ ಅಲ್ಲದೆ ಕಲ್ಲಿನ ಕುಂದಣ ಕೆಲಸ, ಲೇಪದ ಕೆಲಸಗಳು ಕಲೆಗಾರನ ಕೈಚಳಕನ್ನು ಪ್ರದರ್ಶಿಸಿದೆ. ಕಟ್ಟಡದ ವಿವಿಧೆಡೆ ಸ್ಪಟಿಕದ ಕಲ್ಲು, ಕಂದುಬಣ್ಣದ ಶಿಲೆ, ಕಾಗೆ ಬಂಗಾರದಂತೆ ಮಿನುಗುವ ಬೆಣಚು ಶಿಲೆಗಳನ್ನು ಬಳಸಲಾಗಿದೆ. ಚಿತ್ರ ವಿಚಿತ್ರವಾದ ಬಣ್ಣದ ನಯಮಾಡಿದ ಕಲ್ಲಿನ ಕಂಬಗಳು ಯೋಗ್ಯ ಸ್ಥಳಗಳಲ್ಲಿ ನಿರ್ಮಿಸಲ್ಪಟ್ಟಿದೆ.
ಅರಮನೆಯಲ್ಲಿರುವ ಅಂಬಾವಿಲಾಸ ದರ್ಬಾರ್ ಹಾಲ್ ರಾಜವೈಭವವನ್ನು ಸಾರುತ್ತದೆ. ಇಲ್ಲಿ 750 ಕೆ.ಜಿ. ತೂಕದ ಭವ್ಯ ಚಿತ್ತಾರದ ಚಿನ್ನದ ಅಂಬಾರಿ ಇದೆ. ಅಲ್ಲದೆ 135 ಕೆ.ಜಿ. ಬಂಗಾರವುಳ್ಳ ರತ್ನಖಚಿತ ಸಿಂಹಾಸನವೂ ಇದೆ. ಇನ್ನು ಅರಮನೆಯಲ್ಲಿನ ಆಯುಧ ಶಾಲೆ, ಸಂಗೀತ ಕೊಠಡಿ ಸೇರಿದಂತೆ ಹತ್ತು ಹಲವು ನೋಡತಕ್ಕ ಅತ್ಯಂತ ಅಪೂರ್ವ ವಸ್ತುಗಳಿದ್ದು, ಇದೊಂದು ಅದ್ಭುತ ಸಂಗ್ರಹಾಲಯವಾಗಿದೆ.
ಅರಮನೆ ಸುತ್ತಲಿನ ಕೋಟೆಯ ಸೌಂದರ್ಯವೇನು?
ಅರಮನೆಯ ಸುತ್ತಲೂ ಇರುವ ಕೋಟೆಯ ಉತ್ತರ, ದಕ್ಷಿಣ ಮತ್ತು ಪೂರ್ವ ಭಾಗದಲ್ಲಿರುವ ದಿಡ್ಡಿ ಬಾಗಿಲುಗಳು ಗೋಪುರ ಶಿಖರಗಳಿಂದ ಕೆತ್ತನೆಯ ಕಮಾನು ರಚನೆಗಳಿಂದ ಶೋಭಿಸುತ್ತಿದ್ದು ಅರಮನೆಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ ಈಗ ಕಾಣುತ್ತಿರುವ ಅರಮನೆಯಂತೆ ಆಗಿನ ಅರಮನೆ ಇರಲಿಲ್ಲವಂತೆ. ಈ ಅರಮನೆಯನ್ನು ಎರಡು ಬಾರಿ ನಿರ್ಮಿಸಲಾಗಿದೆಯಂತೆ.
1939ರಲ್ಲಿ ಅರಮನೆಯ ಮುಂದೆ ಇದ್ದಂತಹ ಫೋರ್ಟಿಕೋವನ್ನು ತೆರವುಗೊಳಿಸಿ ಅಲ್ಲಿಂದ ನೇರವಾಗಿ ದರ್ಬಾರ್ ಹಾಲ್ ಕಾಣುವಂತೆ ಮಾಡಲಾಯಿತು. ಅರಮನೆಯ ಮುಂಭಾಗದಲ್ಲಿರುವ ಉದ್ಯಾನವನ ಸುಂದರವಾಗಿದ್ದು ಅರಮನೆಗೆ ಶೋಭೆ ತಂದಿದೆ. ಅರಮನೆಗೆ ಸುಮಾರು 97ಸಾವಿರ ವಿದ್ಯುತ್ ಬಲ್ಬ್ಗಳಿಂದ ಅಲಂಕರಿಸಲಾಗಿದ್ದು, ಇದು ರಾತ್ರಿ ವೇಳೆಯಲ್ಲಿ ಒಮ್ಮೆಗೆ ಬೆಳಗುವಾಗ ದೇವಲೋಕ ಧರೆಗಿಳಿದು ಬಂದ ಅನುಭವವಾಗುತ್ತದೆ.