ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ : ಅಮಿತ್ ಶಾ

By Yashaswini
|
Google Oneindia Kannada News

Recommended Video

ಬಿಜೆಪಿ ಪರಿವರ್ತನಾ ಯಾತ್ರೆ : ಸಿದ್ದಾರಾಮಯ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ | Oneindia Kannada

ಮೈಸೂರು, ಮಾರ್ಚ್ 31 : 'ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ. ಸಿದ್ದರಾಮಯ್ಯ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರದಲ್ಲಿ ತೊಡಗಿದೆ' ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಮೈಸೂರಿನಲ್ಲಿ ಶನಿವಾರ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು. 'ಕರ್ನಾಟಕದ ಜನರಿಗೆ ಹಲವು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನವಿದೆ. ರೈತರ ಆತ್ಮಹತ್ಯೆ ವಿಚಾರದಲ್ಲಿ ಸರ್ಕಾರ ಮೌನವಾಗಿದೆ' ಎಂದು ದೂರಿದರು.

ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್

Amit Shah press conference in Mysuru highlights

ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

* ಕರ್ನಾಟಕ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ. ಐಟಿ ಹಬ್ ಬೆಂಗಳೂರಿಗೂ ಸರಿಯಾದ ವಿದ್ಯುತ್‌ಅನ್ನು ಸರ್ಕಾರ ನೀಡಿಲ್ಲ.

5 ಲಕ್ಷ ರುಪಾಯಿ ಪರಿಹಾರ ನೀಡಿ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ5 ಲಕ್ಷ ರುಪಾಯಿ ಪರಿಹಾರ ನೀಡಿ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ

* ಬೆಂಗಳೂರು ನಗರದಿಂದ ರಾಜ್ಯ ಸರ್ಕಾರಕ್ಕೆ ಬರುವ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಂಡಿಲ್ಲ

* ಜೆಡಿಎಸ್‌ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯವಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಪರ್ಯಾಯ ಎಂದರೆ ಅದು ಬಿಜೆಪಿ ಮಾತ್ರ

* ಜೆಡಿಎಸ್ ಪಕ್ಷಕ್ಕೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ

* ನಾನು ಓಬಿಸಿ ಪರವಾಗಿದ್ದೇನೆ ಎಂದು ಹೇಳುವ ಕಾಂಗ್ರೆಸ್, ಮೋದಿ ಸರ್ಕಾರ ಮಸೂದೆ ಜಾರಿಗೆ ತಂದರೆ ರಾಜ್ಯಸಭೆಯಲ್ಲಿ ವಿರೋಧ ಮಾಡಿತು.

* ಬಿಜೆಪಿ ಸಮುದಾಯದ ಆಧಾರದ ಮೇಲೆ ಮತ ಕೇಳುವುದಿಲ್ಲ. ಒಕ್ಕಲಿಗ ಸಮುದಾಯದ ನಾಯಕರು ನಮ್ಮ ಜೊತೆಯಲ್ಲಿಯೇ ಇದ್ದಾರೆ. ಎಲ್ಲಾ ಸಮುದಾಯಕ್ಕೂ ಆದ್ಯತೆ ನೀಡಿ ಮುಂದೆ ಸಾಗುತ್ತೇವೆ

* ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಉತ್ತರ ಮತ್ತು ದಕ್ಷಿಣ ಭಾರತದ ರಾಜ್ಯಗಳು ಎಂದು ತಾರತಮ್ಯ ಮಾಡುವುದಿಲ್ಲ.

English summary
BJP national president Amit Shah addressed press conference in Mysuru on March 31, 2018. Amith Shah in Karnataka for his two days state tour for Karnataka assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X