ಕಾಂಗ್ರೆಸ್ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ : ಅಮಿತ್ ಶಾ
Recommended Video
ಮೈಸೂರು, ಮಾರ್ಚ್ 31 : 'ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ. ಸಿದ್ದರಾಮಯ್ಯ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರದಲ್ಲಿ ತೊಡಗಿದೆ' ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಮೈಸೂರಿನಲ್ಲಿ ಶನಿವಾರ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು. 'ಕರ್ನಾಟಕದ ಜನರಿಗೆ ಹಲವು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನವಿದೆ. ರೈತರ ಆತ್ಮಹತ್ಯೆ ವಿಚಾರದಲ್ಲಿ ಸರ್ಕಾರ ಮೌನವಾಗಿದೆ' ಎಂದು ದೂರಿದರು.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?
* ಕರ್ನಾಟಕ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ. ಐಟಿ ಹಬ್ ಬೆಂಗಳೂರಿಗೂ ಸರಿಯಾದ ವಿದ್ಯುತ್ಅನ್ನು ಸರ್ಕಾರ ನೀಡಿಲ್ಲ.
5 ಲಕ್ಷ ರುಪಾಯಿ ಪರಿಹಾರ ನೀಡಿ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ
* ಬೆಂಗಳೂರು ನಗರದಿಂದ ರಾಜ್ಯ ಸರ್ಕಾರಕ್ಕೆ ಬರುವ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಂಡಿಲ್ಲ
* ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯವಲ್ಲ. ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯ ಎಂದರೆ ಅದು ಬಿಜೆಪಿ ಮಾತ್ರ
* ಜೆಡಿಎಸ್ ಪಕ್ಷಕ್ಕೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ
* ನಾನು ಓಬಿಸಿ ಪರವಾಗಿದ್ದೇನೆ ಎಂದು ಹೇಳುವ ಕಾಂಗ್ರೆಸ್, ಮೋದಿ ಸರ್ಕಾರ ಮಸೂದೆ ಜಾರಿಗೆ ತಂದರೆ ರಾಜ್ಯಸಭೆಯಲ್ಲಿ ವಿರೋಧ ಮಾಡಿತು.
* ಬಿಜೆಪಿ ಸಮುದಾಯದ ಆಧಾರದ ಮೇಲೆ ಮತ ಕೇಳುವುದಿಲ್ಲ. ಒಕ್ಕಲಿಗ ಸಮುದಾಯದ ನಾಯಕರು ನಮ್ಮ ಜೊತೆಯಲ್ಲಿಯೇ ಇದ್ದಾರೆ. ಎಲ್ಲಾ ಸಮುದಾಯಕ್ಕೂ ಆದ್ಯತೆ ನೀಡಿ ಮುಂದೆ ಸಾಗುತ್ತೇವೆ
* ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಉತ್ತರ ಮತ್ತು ದಕ್ಷಿಣ ಭಾರತದ ರಾಜ್ಯಗಳು ಎಂದು ತಾರತಮ್ಯ ಮಾಡುವುದಿಲ್ಲ.