ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಲೀನವಾದ ವಾಜಪೇಯಿ ಚಿತಾಭಸ್ಮ

|
Google Oneindia Kannada News

ಮೈಸೂರು, ಆಗಸ್ಟ್ 23: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ವಿಮವಾಹಿನಿಯಲ್ಲಿ ಕಾವೇರಿ ನದಿಗೆ ವಿಸರ್ಜಿಸಲಾಯಿತು.

ಚಿತಾಭಸ್ಮದ ಕಲಶವನ್ನು ಹೊತ್ತು ತಂದ ನಾಯಕರಿಗೆ ಪಶ್ವಿಮವಾಹಿನಿ ಬಳಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.

ಉತ್ತರ ಪ್ರದೇಶದ ಎಲ್ಲಾ ನದಿಗಳಲ್ಲೂ ವಾಜಪೇಯಿ ಚಿತಾಭಸ್ಮ ವಿಸರ್ಜನೆಉತ್ತರ ಪ್ರದೇಶದ ಎಲ್ಲಾ ನದಿಗಳಲ್ಲೂ ವಾಜಪೇಯಿ ಚಿತಾಭಸ್ಮ ವಿಸರ್ಜನೆ

ವೇ.ಬ್ರ. ಡಾ. ಭಾನುಪ್ರಕಾಶ್ ನೇತೃತ್ವದಲ್ಲಿ ಕಾವೇರಿ ತೀರದಲ್ಲಿ ಪೂಜಾ ಕಾರ್ಯ ನಡೆಯಿತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಮುಂತಾದವರು ಪೂಜೆಯಲ್ಲಿ ಪಾಲ್ಗೊಂಡರು.

Atal bihari vajpayee is in every particle of karnataka: anath kumar

ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ, ಆರ್‍.ಅಶೋಕ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಇತರರು ಉಪಸ್ಥಿತರಿದ್ದರು.

ಕಣಕಣದಲ್ಲೂ ಅಟಲ್ ಜೀ ಇದ್ದಾರೆ: ಅನಂತ್ ಕುಮಾರ್
ಕರ್ನಾಟಕದ ಕಣಕಣದಲ್ಲೂ ಅಟಲ್ ಬಿಹಾರಿ ವಾಜಪೇಯಿ ಅವರಿದ್ದಾರೆ ಮತ್ತು ಅಟಲ್ ಅವರ ಕಣಕಣದಲ್ಲೂ ಕರ್ನಾಟಕವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಹೇಳಿದ್ದಾರೆ.

ವಾಜಪೇಯಿ ಅಂತ್ಯಕ್ರಿಯೆ ಹೊಸ 'ಟ್ರೆಂಡ್ ಸೆಟರ್' ಗೆ ನಾಂದಿ ಹಾಡಲಿವಾಜಪೇಯಿ ಅಂತ್ಯಕ್ರಿಯೆ ಹೊಸ 'ಟ್ರೆಂಡ್ ಸೆಟರ್' ಗೆ ನಾಂದಿ ಹಾಡಲಿ

ಕಾವೇರಿ ನದಿಗೆ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿಯನ್ನು ವಿಸರ್ಜಿಸಿ ಮಾತನಾಡಿದ ಅವರು ಕರ್ನಾಟಕದೊಂದಿಗಿನ ಅವರ ಅವಿನಾಭಾವ ಸಂಬಂಧವನ್ನು ಸ್ಮರಿಸಿದರು.

Atal bihari vajpayee is in every particle of karnataka: anath kumar

ಅಟಲ್ ಬಿಹಾರಿ ವಾಜಪೇಯಿಯವರು ನೂರಾರು ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡಿದ್ದಾರೆ. ದಶಕಗಳ ಕಾಲ ಲಕ್ಷಾಂತರ ಜನರನ್ನು ತಮ್ಮ ಸ್ಫೂರ್ತಿದಾಯಕ ಮಾತುಗಳಿಂದ ಸಂಬೋಧಿಸಿ ಉದ್ದೀಪನಗೊಳಿಸಿದ್ದಾರೆ ಎಂದು ಕರ್ನಾಟಕದೊಂದಿಗಿನ ಅವರ ನಂಟನ್ನು ಮೆಲುಕುಹಾಕಿದರು.

ಮೋದಿಯ ಭೇಟಿಯಾದರೂ ಕೊಡಗು ವಿಷಯ ಮಾತನಾಡಲಿಲ್ಲ ಯಡಿಯೂರಪ್ಪ ಮೋದಿಯ ಭೇಟಿಯಾದರೂ ಕೊಡಗು ವಿಷಯ ಮಾತನಾಡಲಿಲ್ಲ ಯಡಿಯೂರಪ್ಪ

ವಿಶ್ವಮಾನ್ಯರಾಗಿರುವ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅವರ ಜೀವನ ವಿಚಾರ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿರುತ್ತದೆ ಎಂದರು.

Atal bihari vajpayee is in every particle of karnataka: anath kumar

ಅಟಲ್ ಜೀಯವರ ಅಸ್ಥಿಯನ್ನು ಕಾವೇರಿ ನದಿಯ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಲಾಗಿದೆ. ನಾಳೆಯೂ ವಿವಿಧ ಮುಖಂಡರು ನೇತ್ರಾವತಿ, ತುಂಗಭದ್ರ, ಮಲಪ್ರಭಾ, ಕೃಷ್ಣಾ ಸೇರಿದಂತೆ ರಾಜ್ಯದ ಎಂಟು ನದಿಗಳಲ್ಲಿ ಚಿತಾಭಸ್ಮ ವಿಸರ್ಜಿಸಲಿದ್ದಾರೆ ಎಂದರು.

ಉತ್ತರ ಮತ್ತು ದಕ್ಷಿಣದ ನದಿಗಳ ಜೋಡಣೆ ಅಟಲ್ ಜೀ ಅವರ ಕನಸಾಗಿತ್ತು. ಕಾವೇರಿ ಮತ್ತು ಗಂಗಾ ಸೇರಿದಂತೆ 36 ನದಿಗಳ ಜೋಡಿಸುವ ಕನಸನ್ನು ಹೊಂದಿದ್ದ ಅವರು ಈ ಮೂಲಕ ಇಡೀ ದೇಶದ ರೈತರಿಗೆ ಸುಜಲಾಂ ಸುಫಲಾಂ ಸಾಧಿಸುವ ಸಂಕಲ್ಪ ಹೊಂದಿದ್ದರು ಎಂದು ಹೇಳಿದರು.

Atal bihari vajpayee is in every particle of karnataka: anath kumar

ಅಸ್ಥಿ ಕಳಶ ಯಾತ್ರೆಯುದ್ದಕ್ಕೂ 'ಅಟಲ್ ಜೀ ಅಮರವಾಗಲೀ' ಮತ್ತು 'ಚಿರಾಯುವಾಗಲಿ' ಎಂಬ ಘೋಷಣೆಯ ಮೂಲಕ ಸಾವಿರಾರು ಜನರು ಶ್ರದ್ಧಾಂಜಲಿ ಮತ್ತು ಪುಷ್ಪನಮನ ಅರ್ಪಿಸಿದರು.

English summary
Atal Bihari Vajpayee's ashes was immersed in Cauvery river near Paschima Vahini, Srirangapattana on Friday. Union Minister Ananth Kumar said that, Vajpayee is living in the every particle of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X