ಯಡಿಯೂರಪ್ಪ ನನ್ನ ಮೂಗು ಹಿಡಿಯೋ ಬದಲು ಮೋದಿಯ ಮೂಗು ಹಿಡಿಯಲಿ: ಸಿದ್ದು

ಯಡಿಯೂರಪ್ಪ ನನ್ನ ಮೂಗು ಹಿಡಿಯುವ ಬದಲು ಮೋದಿಯ ಮೂಗು ಹಿಡಿಯಲಿ. ಡೋಂಗಿತನ ಬಿಟ್ಟು ಸಾಲಮನ್ನಾ ಬಗ್ಗೆ ಕೇಂದ್ರವನ್ನು ಒತ್ತಾಯಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು, ಜೂನ್ 1: ಯಡಿಯೂರಪ್ಪ ನನ್ನ ಮೂಗು ಹಿಡಿಯುವ ಬದಲು ಮೋದಿಯ ಮೂಗು ಹಿಡಿಯಲಿ. ಡೋಂಗಿತನ ಬಿಟ್ಟು ಸಾಲಮನ್ನಾ ಬಗ್ಗೆ ಕೇಂದ್ರವನ್ನು ಒತ್ತಾಯಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ರಾಜ್ಯ ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.[ಯಡಿಯೂರಪ್ಪ ಎರಡು ನಾಲಿಗೆ ಮನುಷ್ಯ: ಸಿದ್ಧರಾಮಯ್ಯ]

B S Yeddyurappa should talk with Modi to give debt relief to the farmers: Siddaramaiah

ಹೈಕಮಾಂಡ್ ಒನ್ ಮ್ಯಾನ್ ಒನ್ ಪೋಸ್ಟ್ ಅಂತ ಹೇಳಿದೆ. ರಾಜೀನಾಮೆ ಕುರಿತು ಪರಮೇಶ್ವರ್ ಇನ್ನೂ ಮಾತನಾಡಿಲ್ಲ. ಡಿ.ಕೆ ಶಿವಕುಮಾರ್ ಗೆ ಯಾವುದೇ ರೀತಿಯ ಬೇಸರ ಇಲ್ಲ. ಹೈಕಮಾಂಡ್ ಹೇಳಿದರೆ ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದರು.

ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರವಾಸಕ್ಕೆ ಅನುಕೂಲ ಆಗಲಿ ಎಂದು ಎರಡು ಅಧ್ಯಕ್ಷ ಹುದ್ದೆ ಮಾಡಲಾಗಿದೆ. ಯಡಿಯೂರಪ್ಪ ಅವರಿಗೆ ಯಾವುದೂ ಗೊತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿಯನ್ನು ನಮ್ಮ ಸರ್ಕಾರ ಇತರ ಸರ್ಕಾರಗಳಿಂತ ಸಮರ್ಥವಾಗಿ ಎದುರಿಸಿದೆ. ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿ, ನಂತರ ನಾನೂ ಮಾಡುತ್ತೇನೆ. ಯಡಿಯೂರಪ್ಪ ನನ್ನ ಮೂಗು ಹಿಡಿಯುವ ಬದಲು ಮೋದಿ ಮೂಗು ಹಿಡಿಯಲಿ. ಡೋಂಗಿತನ ಬೇಡ ಎಂದರು.

ರಮ್ಯಾ ಅವರನ್ನು ಚುನಾವಣೆಯಲ್ಲಿ ಬಳಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಮುಂದಿನ ರಾಜ್ಯ ಚುನಾವಣೆಯಲ್ಲಿ ಬಳಸಿಕೊಳ್ಳುತ್ತೇವೆ. ಅವರ ಸಲಹೆಗಳನ್ನೂ ಪಡೆಯುತ್ತೇವೆ ಎಂದರು. ಇದೇ ಸಂದರ್ಭ ಯುಪಿಎಸ್ಸಿ ಟಾಪರ್ ನಂದಿನಿಗೆ ಅಭಿನಂದನೆ ಸಲ್ಲಿಸಿದರಲ್ಲದೇ, ಇದರಿಂದ ರಾಜ್ಯವೇ ಹೆಮ್ಮೆ ಪಡುವಂತಾಗಿದೆ ಎಂದು ತಿಳಿಸಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+