ದಸರಾಗೆ ಬೆಂಗಳೂರು– ಮೈಸೂರು ನಡುವೆ ವಿಶೇಷ ರೈಲು ಸಂಚಾರ
ಮೈಸೂರು, ಅಕ್ಟೋಬರ್.07 : ನಾಡಹಬ್ಬ ದಸರಾ ಅಂಗವಾಗಿ ಜನದಟ್ಟಣೆ ತಪ್ಪಿಸಲು ಅಕ್ಟೋಬರ್ 9ರಿಂದ 22ರ ವರೆಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚರಿಸಲಿದೆ.
'ಜನಸಾಧಾರಣ ವಿಶೇಷ ರೈಲ'ನ್ನು ನೈರುತ್ಯ ರೈಲ್ವೆ ಪರಿಚಯಿಸಿದೆ. ಬೆಂಗಳೂರು ನಗರ-ಮೈಸೂರು ವಿಶೇಷ ಎಕ್ಸ್ಪ್ರೆಸ್ (06557) ರೈಲು ಅ.9ರಿಂದ 21ರವರೆಗೆ ಪ್ರತಿದಿನ ಬೆಳಗ್ಗೆ 8:45ಕ್ಕೆ ಬೆಂಗಳೂರು ನಗರದಿಂದ ಹೊರಟು ಬೆಳಗ್ಗೆ 11:35ಕ್ಕೆ ಮೈಸೂರು ತಲುಪಲಿದೆ.
ಅದೇ ರೀತಿ ಅ.10ರಿಂದ 22ರವರೆಗೆ ಮೈಸೂರಿನಿಂದ ಮಧ್ಯಾಹ್ನ 12:50ಕ್ಕೆ ಹೊರಡುವ ರೈಲು (06558) ಮಧ್ಯಾಹ್ನ 3:45ಕ್ಕೆ ಬೆಂಗಳೂರು ನಗರ ನಿಲ್ದಾಣಕ್ಕೆ ಬಂದು ಸೇರಲಿದೆ. ಒಟ್ಟು 13 ಟ್ರಿಪ್ ರೈಲು ಸಂಚರಿಸಲಿದೆ.

ಶಿವಮೊಗ್ಗ ಟೌನ್-ಶ್ರವಣಬೆಳಗೊಳ ವಾರದಲ್ಲಿ ಮೂರು ದಿನ ಸಂಚಾರದ ವಿಶೇಷ ಎಕ್ಸ್ಪ್ರೆಸ್ (06223) ರೈಲು ಅ.9ರಿಂದ 25ರವರೆಗೆ ಪ್ರತಿ ಭಾನುವಾರ, ಮಂಗಳವಾರ ಹಾಗೂ ಗುರುವಾರ ಬೆಳಗ್ಗೆ 6:25ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗ್ಗೆ 11:25ಕ್ಕೆ ಶ್ರವಣಬೆಳಗೊಳಕ್ಕೆ ತಲುಪಲಿದೆ.
ಅ.9ರಿಂದ 25ರವರೆಗೆ ಶ್ರವಣಬೆಳಗೊಳ-ಶಿವಮೊಗ್ಗ ಟೌನ್ ವಿಶೇಷ ಎಕ್ಸ್ಪ್ರೆಸ್ (06224) ರೈಲು ಪ್ರತಿ ಭಾನುವಾರ, ಮಂಗಳವಾರ ಹಾಗೂ ಗುರುವಾರ ಮಧ್ಯಾಹ್ನ 1:35ಕ್ಕೆ ಶ್ರವಣಬೆಳಗೊಳದಿಂದ ಪ್ರಯಾಣ ಬೆಳೆಸಿ ಸಂಜೆ 7:10ಕ್ಕೆ ಶಿವಮೊಗ್ಗ ಟೌನ್ ಸೇರಲಿದೆ.
ನೈಋತ್ಯ ರೈಲ್ವೆ ಕೆಲವು ಹಾಲ್ಟ್ ಸ್ಟೇಶನ್ ಗಳನ್ನು 3 ತಿಂಗಳ ಅವಧಿಗೆ ಬಂದ್ ಮಾಡಿದೆ. ಆದಿಚುಂಚನಗಿರಿ, ಸಿದ್ದಾಪುರ, ಪಾಲಹಳ್ಳಿ, ದೊಡ್ಡನಟ್ಟ, ಗಣ್ಣಘಟ್ಟ, ಗೊಟ್ಟಿಹಳ್ಳಿ, ಗಿಡ್ನಹಳ್ಳಿ ಹಾಲ್ಟ್ ನಿಲ್ದಾಣಗಳನ್ನು ಅ.7ರಿಂದ ಮೂರು ತಿಂಗಳ ಅವಧಿಗೆ ಬಂದ್ ಮಾಡಲಾಗುವುದು.
ಯಶವಂತಪುರ-ಮೈಸೂರು ಪ್ಯಾಸೆಂಜರ್ (56215) ರೈಲು ಆದಿಚುಂಚನಗಿರಿ ಹಾಗೂ ಸಿದ್ದಾಪುರ, ಬೆಂಗಳೂರು ನಗರ-ಕೋಲಾರ ಪ್ಯಾಸೆಂಜರ್ (76551) ರೈಲು ದೊಡ್ಡನಟ್ಟ, ಜನ್ನಘಟ್ಟ, ಗಿಡ್ನಳ್ಳಿ ನಿಲ್ದಾಣದಲ್ಲಿ ಚನ್ನಪಟ್ಟಣ-ಕೋಲಾರ (76525) ದೊಡ್ಡನಟ್ಟ, ಗೊಟ್ಟಿಹಳ್ಳಿ, ಜನ್ನಘಟ್ಟ ಹಾಗೂ ಗಿಡ್ನಳ್ಳಿ ನಿಲ್ದಾಣದಲ್ಲಿ 3 ತಿಂಗಳು ನಿಲುಗಡೆಗೊಳ್ಳುವುದಿಲ್ಲ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications