ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹಸಚಿವ ಪರಮೇಶ್ವರ
ಮೈಸೂರು, ಆಗಸ್ಟ್ 01: ಮೈಸೂರಿನ ನ್ಯಾಯಾಲಯವೊಂದರಲ್ಲಿ ಸೋಮವಾರ ಸಂಜೆ ಸ್ಫೋಟ ಸಂಭವಿಸಿದೆ. ನ್ಯಾಯಾಲಯದ ಹಿಂಬದಿಯಲ್ಲಿರುವ ಶೌಚಾಲಯದಲ್ಲಿ ಭಾರಿ ಶಬ್ದ ಕೇಳಿ ಬಂದಿದ್ದು, ಶೌಚಾಲಯದ ಕಿಟಕಿ, ಬಾಗಿಲುಗಳು ಧ್ವಂಸಗೊಂಡಿವೆ.
ಇತ್ತೀಚಿನ ಅಪ್ಡೇಟ್ಸ್:
* ಮೈಸೂರು ಕೋರ್ಟ್ ಆವರಣಕ್ಕೆ ಭೇಟಿ ನೀಡಿದ ಗೃಹಸಚಿವ ಜಿ ಪರಮೇಶ್ವರ ಅವರು ಸ್ಫೋಟ ಬಗ್ಗೆ ಮಾಹಿತಿ ಪಡೆದುಕೊಂಡರು.
* ಘಟನೆ ಹಿನ್ನಲೆ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ವಿಧಿ ವಿಜ್ಞಾನ ತಂಡ ನೀಡುವ ಮಾಹಿತಿ ಆಧಾರದ ಮೇಲೆ ತನಿಖೆ ನಡೆಸಲಾಗುತ್ತದೆ.
* ಮೈಸೂರು ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ.
* ಕೋರ್ಟ್ ಆವರಣದಲ್ಲಿ 3 ಬ್ಯಾಟರಿ ಸೆಲ್ ಗಳು ಪತ್ತೆಯಾಗಿವೆ.
* ಘಟನಾ ಸ್ಥಳದಲ್ಲಿ ಒಂದು ಸಿಮ್ ಕಾರ್ಡ್ ಹಾಗೂ ಅಮೋನಿಯಂ ನೈಟ್ರೇಟ್ ಪುಡಿ ಪತ್ತೆ.
* ಶ್ವಾನದಳ, ಬಾಂಬ್ ನಿಷ್ರ್ಕಿಯ ದಳದಿಂಡ ತೀವ್ರ ತಪಾಸಣೆ

ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ದೌಡಾಯಿಸಿದ್ದಾರೆ, ಲಕ್ಷ್ಮಿಪುರಂ ಪೊಲೀಸರು ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ.
ಸಾರ್ವಜನಿಕ ಶೌಚಾಲಯದಲ್ಲಿ ಸ್ಫೋಟದ ಸದ್ದು ಕೇಳಿಬಂದಿದ್ದು, ಸಂಜೆ 4.15 ರಿಂದ 4.25 ರ ಸಮಯದಲ್ಲಿ ಭಾರಿ ಸದ್ದು ಕೇಳಿ ಬಂದಿತು ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಸಾವು ನೋವು ಸಂಭವಿಸಿಲ್ಲ. ಶೌಚಾಲಯದಲ್ಲಿ ಇನ್ನೂ ಸ್ಫೋಟಕ ವಸ್ತುಗಳು ಇರುವ ಶಂಕೆ ವ್ಯಕ್ತವಾಗಿದೆ. ಮೇಲ್ನೋಟಕ್ಕೆ ಇದು ಕಚ್ಚಾ ಬಾಂಬ್ (crude bomb)ಸ್ಫೋಟ ಎಂದು ಶಂಕಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications