ನಂಜನಗೂಡಲ್ಲಿ ಕಾಂಗ್ರೆಸಿಗೆ ಭರ್ಜರಿ ಗೆಲುವು, ಮುಗ್ಗರಿಸಿದ ಬಿಜೆಪಿ
ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಂಡು ಸ್ಪರ್ಧಿಸಿದ್ದ ಕಳಲೆ ಕೇಶವಮೂರ್ತಿ 21,334 ಮತಗಳ ಭರ್ಜರಿ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಮೈಸೂರು, ಏಪ್ರಿಲ್ 13: ಭಾರೀ ಕುತೂಹಲ ಕೆರಳಿಸಿದ್ದ, ಜಿದ್ದಾ ಜಿದ್ದಿನ ಮತ ಬೇಟೆಗೆ ಸಾಕ್ಷಿಯಾಗಿದ್ದ ನಂಜನಗೂಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಬಿಜೆಪಿ ಹೀನಾಯ ಸೋಲು ಕಂಡಿದ್ದು ಭಾರೀ ಮುಖಭಂಗ ಅನುಭವಿಸಿದೆ.
ಗ್ಯಾಲರಿ: ಕಾಂಗ್ರೆಸ್ಸಿನ ಡಬ್ಬಲ್ ಧಮಾಕ, 2 ಕ್ಷೇತ್ರಗಳು ಕೈವಶ
ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಂಡು ಸ್ಪರ್ಧಿಸಿದ್ದ ಕಳಲೆ ಕೇಶವಮೂರ್ತಿ 21,334 ಮತಗಳ ಭರ್ಜರಿ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕಳಲೆ ಎನ್ ಕೇಶವಮೂರ್ತಿ 86,212 ಮತಗಳನ್ನು ಪಡೆದರೆ, ಶ್ರೀನಿವಾಸ್ ಪ್ರಸಾದ್ ಕೇವಲ 64,878 ಮತಗಳನ್ನು ಪಡೆಯಲಷ್ಟೇ ಸಫಲರಾದರು. ಈ ಮೂಲಕ ಕಳಲೆ ಕೇಶವಮೂರ್ತಿ ನಂಜನಗೂಡಿನ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.[ಉಪ ಚುನಾವಣೆ ಫಲಿತಾಂಶದ ಬಗ್ಗೆ ತಕರಾರು ತೆಗೆಯುವಂತೆಯೇ ಇಲ್ಲ]
ಇನ್ನು ಜಿದ್ದಾ ಜಿದ್ದಿನ ಫೈಟ್ ನಿಂದಾಗಿ ಯಾವ ಪಕ್ಷೇತರ ಅಭ್ಯರ್ಥಿಗಳೂ ಮೂರಂಕಿಯ ಮತ ಪಡೆದಿಲ್ಲ. ಮೂರನೇ ಸ್ಥಾನದಲ್ಲಿ ನೋಟಾ ಮತಗಳಿದ್ದು ಒಟ್ಟು 1,665 ನೋಟಾ ಮತಗಳು ಚಲಾವಣೆಯಾಗಿವೆ.
ನಂಜನಗೂಡು ಉಪಚುನಾವಣೆ ಕಾಂಗ್ರೆಸಿನ ಸಿದ್ದರಾಮಯ್ಯ ಮತ್ತು ವಿ. ಶ್ರೀನಿವಾಸ್ ಪ್ರಸಾದ್ ನಡುವಿನ ನೇರ ಹಣಾಹಣಿಯಾಗಿ ಮಾರ್ಪಟ್ಟಿತ್ತು. ಕಾಂಗ್ರೆಸಿನಿಂದ ಬಿಜೆಪಿಗೆ ಬಂದು ಸ್ಪರ್ಧಿಸಿದ್ದ ಶ್ರೀನಿವಾಸ್ ಪ್ರಸಾದ್ ಸೋಲುವುದರೊಂದಿಗೆ ಸಿದ್ದರಾಮಯ್ಯ ಕೈ ಮೇಲಾಗಿದೆ.[ಉಪ ಚುನಾವಣೆ ಫಲಿತಾಂಶ: ಯಾರಿಗೆ ಲಾಭ? ಯಾರಿಗೆ ನಷ್ಟ?]
ಕಳೆದ ಎರಡು ಚುನಾವಣೆಗಳಲ್ಲಿ ನಂಜನಗೂಡಿನಲ್ಲಿ ಗೆಲುವಿನ ನಗೆ ಬೀರಿದ್ದ ಶ್ರೀನಿವಾಸ್ ಪ್ರಸಾದ್ ಮೂರನೇ ಚುನಾವಣೆಯಲ್ಲಿ ಮುಗ್ಗರಿಸಿದರೆ, ಕಳೆದೆರಡು ಚುನಾವಣೆಗಳಲ್ಲಿ ಇದೇ ಪ್ರಸಾದ್ ವಿರುದ್ಧ ಸೋಲು ಕಂಡಿದ್ದ ಕಳಲೆ ಕೇಶವಮುರ್ತಿ ಮೂರನೇ ಚುನಾವಣೆಯಲ್ಲಿ ಗೆಲುವಿನ ಖಾತೆ ತೆರೆದಿದ್ದಾರೆ.
ನಂಜನಗೂಡಿನಲ್ಲಿ ಒಟ್ಟು 1,56,315 ಮತಗಳು ಅಂದರೆ ಶೇಕಡಾ 77.56 ಮತಗಳು ಚಲಾವಣೆಯಾಗಿತ್ತು.