ಅಪಘಾತಕ್ಕೊಳಗಾದ ದರ್ಶನ್ ಕಾರು ನಾಪತ್ತೆ... ಎಲ್ಹೋಯ್ತು?
ಮೈಸೂರು, ಸೆಪ್ಟೆಂಬರ್ 24: ಮೈಸೂರಿನಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೊಳಗಾದ ನಟ ದರ್ಶನ್ ಅವರ ಆಡಿ ಕ್ಯೂ7 ಕಾರು ನಾಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ.
ದರ್ಶನ್ ಕಾರುಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದರೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚುತ್ತದೆ ಎಂಬ ಕಾರಣಕ್ಕೆ ಕಾರನ್ನು ನಾಪತ್ತೆ ಮಾಡಲಾಗಿದೆ ಎಂದೂ ಹೇಳಲಾಗುತ್ತಿದೆ. ಕಾರು ಪೊಲೀಸರ ವಶದಲ್ಲಿದೆಯೇ ಎಂಬ ಬಗ್ಗೆ ವಿವಿ ಪುರಂ ಠಾಣೆಯ ಪೊಲೀಸರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೈಸೂರಿನಲ್ಲಿ ನಟ ದರ್ಶನ್ ತೂಗುದೀಪ ಕಾರು ಅಪಘಾತ
ಕಾರು ಎಲ್ಲಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.
ಸೋಮವಾರ ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಲ ಮುಂಗೈ ಮುರಿದಿದೆ. ಅವರು ಶಸ್ತ್ರ ಚಿಕಿತ್ಸೆಗೊಳಗಾಗಿದ್ದು, ಪತ್ನಿ ವಿಜಯಲಕ್ಷ್ಮಿ, ಮಗ ಮತ್ತು ಬಂಧುಗಳ ಆಸ್ಪತ್ರೆಗೆ ಆಗಮಿಸಿದ್ದಾರೆ.
ಅಪಘಾತದ ಸಂದರ್ಭದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅವರೊಂದಿಗೆ ಈ ಸಂದರ್ಭದಲ್ಲಿ ನಟರಾದ ದೇವರಾಜ್, ಪ್ರಜ್ವಲ್ ದೇವರಾಜ್ ಇದ್ದರು. ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ದರ್ಶನ್ ಸ್ಥಿತಿ ಹೇಗಿದೆ ?, ವಿನೋದ್ ಪ್ರಭಾಕರ್ ನೀಡಿದ ಮಾಹಿತಿ
ಮೈಸೂರಿನಿಂದ ಬೆಂಗಳೂರಿಗೆ ನಟರು ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆ ಪರಿಣಾಮ ಈ ದುರಂತ ಸಂಭವಿಸಿದೆ.