ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈಭವದ ದಸರೆಗೆ ಮೊದಲ ಮುನ್ನುಡಿ: ಗಜಪಡೆಗೆ ಭವ್ಯ ಸ್ವಾಗತ

By Yashaswini
|
Google Oneindia Kannada News

ಮೈಸೂರು, ಸೆಪ್ಟೆಂಬರ್.05: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ, ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗುವ ಆನೆ ಅರ್ಜುನನ ನೇತೃತ್ವದ ಗಜಪಡೆಗೆ ಇಂದು ಮಂಗಳವಾರ ಅರಮನೆ ಆವರಣದಲ್ಲಿ ಭವ್ಯ ಸ್ವಾಗತ ನೀಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಇದರೊಂದಿಗೆ ಸಾಂಸ್ಕೃತಿಕ ನಗರಿ ನಿಧಾನವಾಗಿ ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ. ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಗಜಪಡೆಯನ್ನು
ಉಪಚರಿಸಿ, ಅಲಂಕರಿಸಿ, ಅರಣ್ಯ ಇಲಾಖೆಯಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಗುವುದು.

ದಸರೆಯಲ್ಲಿ ಭಾಗವಹಿಸುವ ಮೊದಲ ತಂಡದ ಆನೆಗಳ ಸಂಪೂರ್ಣ ವಿವರದಸರೆಯಲ್ಲಿ ಭಾಗವಹಿಸುವ ಮೊದಲ ತಂಡದ ಆನೆಗಳ ಸಂಪೂರ್ಣ ವಿವರ

ಮಧ್ಯಾಹ್ನ 3.30ಕ್ಕೆ ಅರಣ್ಯ ಭವನದಿಂದ ಸಾಲಂಕೃತ ಆನೆಗಳು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಕೃಷ್ಣಮೂರ್ತಿ ಪುರಂ, ಬಲ್ಲಾಳ್ ವೃತ್ತ, ಆರ್‍ಟಿಒ ವೃತ್ತ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತ, ಸಯ್ಯಾಜಿರಾವ್ ರಸ್ತೆ, ನಗರಪಾಲಿಕೆ ವೃತ್ತ, ಪುರಂದರ ದಾಸರ ರಸ್ತೆ ಮೂಲಕ ಅರಮನೆ ಪೂರ್ವ ದ್ವಾರ ತಲುಪಲಿವೆ.

ಗಜಪಡೆಯು ಸಂಜೆ 4.30ಕ್ಕೆ ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣ ಪ್ರವೇಶಿಸುತ್ತಿದ್ದು, ಪೂರ್ಣಕುಂಭ, ಪೊಲೀಸ್ ಗೌರವ ರಕ್ಷೆ ಮೂಲಕ ಸ್ವಾಗತ ಕೋರಲಾಗುವುದು.
ಇದಾದ ಬಳಿಕ ಅಂಬಾವಿಲಾಸ ಅರಮನೆ ಮುಂಭಾಗ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಗಜಪಡೆಗೆ ಗೌರವ ಸಲ್ಲಿಸುವರು.

ಪುಂಡಾನೆಗಳನ್ನು ಸೆರೆ ಹಿಡಿಯಲು ದಸರಾ ಆನೆಗಳನ್ನು ಕರೆತಂದ ಅರಣ್ಯ ಇಲಾಖೆಪುಂಡಾನೆಗಳನ್ನು ಸೆರೆ ಹಿಡಿಯಲು ದಸರಾ ಆನೆಗಳನ್ನು ಕರೆತಂದ ಅರಣ್ಯ ಇಲಾಖೆ

ಯಾವ ಆನೆಗಳನ್ನು ಎಲ್ಲಿಂದ ಕರೆತರಲಾಗಿದೆ? ಫುಡ್ ಹೇಗಿದೆ? ಯಾರೆಲ್ಲಾ ಪಾಲ್ಗೊಳ್ಳುವರು ಎಂಬ ಮಾಹಿತಿಗಾಗಿ ಮುಂದೆ ಓದಿ...

 2ನೇ ತಂಡದಲ್ಲಿ 6 ಆನೆಗಳು ಬರಲಿವೆ

2ನೇ ತಂಡದಲ್ಲಿ 6 ಆನೆಗಳು ಬರಲಿವೆ

ಗಜಪಯಣದ ಮೊದಲ ತಂಡದಲ್ಲಿ ಬಳ್ಳೆ ಆನೆ ಶಿಬಿರದ ಅರ್ಜುನ (58), ತಿತಿಮತಿ ಆನೆ ಶಿಬಿರದಿಂದ ವರಲಕ್ಷ್ಮಿ (62), ಬಂಡಿಪುರ ಆನೆ ಶಿಬಿರದ ಚೈತ್ರ (47), ದುಬಾರೆ ಆನೆ ಶಿಬಿರದ ಗೋಪಿ (37), ದುಬಾರೆ ಆನೆ ಶಿಬಿರದ ವಿಕ್ರಮ (45), ಧನಂಜಯ ಆಗಮಿಸಿವೆ.

ವೀರನಹೊಸಹಳ್ಳಿಯಿಂದ ಹೊರಟು ಮೈಸೂರು ತಲುಪಿದ ಆನೆಗಳು ಸದ್ಯ ಅಶೋಕಪುರಂನ ಅರಣ್ಯ ಭವನದ ಆವರಣದಲ್ಲಿ ವಿಶ್ರಮಿಸುತ್ತಿವೆ. ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಆನೆಗಳ ಉಸ್ತುವಾರಿ ನೋಡಿಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ 2ನೇ ತಂಡದಲ್ಲಿ 6 ಆನೆಗಳು ಬರಲಿವೆ.

 ವಾಸ್ತವ್ಯಕ್ಕೆ ಸಿದ್ಧತೆ

ವಾಸ್ತವ್ಯಕ್ಕೆ ಸಿದ್ಧತೆ

ಅರಮನೆಯಲ್ಲಿ ಆನೆಗಳಿಗೆ ಶೆಡ್ ನಿರ್ಮಿಸಲಾಗಿದ್ದು, 6 ಆನೆಗಳ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆಗಳಾಗಿವೆ. ಮಾವುತರು, ಕಾವಾಡಿಗಳು, ಅವರ ಕುಟುಂಬ ವರ್ಗದವರಿಗಾಗಿ ತಾತ್ಕಾಲಿಕ ಶೆಡ್ ಗಳನ್ನೂ ನಿರ್ಮಿಸಲಾಗಿದೆ. 2ನೇ ತಂಡದಲ್ಲಿ ಬರುವ 6 ಆನೆಗಳನ್ನು ನೇರವಾಗಿ ಅರಮನೆಗೆ ಕರೆತರಲು ನಿರ್ಧರಿಸಲಾಗಿದೆ.

ಗಜಪಯಣಕ್ಕೆ ಚಾಲನೆ, ಸಂಪ್ರದಾಯದ ಬಗ್ಗೆ ಎಚ್ ವಿಶ್ವನಾಥ್ ಹೇಳಿದ್ದು ಕೇಳಿಗಜಪಯಣಕ್ಕೆ ಚಾಲನೆ, ಸಂಪ್ರದಾಯದ ಬಗ್ಗೆ ಎಚ್ ವಿಶ್ವನಾಥ್ ಹೇಳಿದ್ದು ಕೇಳಿ

 ಆನೆಗಳನ್ನು ಬರಮಾಡಿಕೊಳ್ಳುವ ಗಣ್ಯರು

ಆನೆಗಳನ್ನು ಬರಮಾಡಿಕೊಳ್ಳುವ ಗಣ್ಯರು

ದಸರಾ ಆನೆಗಳನ್ನು ಆರಮನೆ ಅಂಗಳಕ್ಕೆ ಬರಮಾಡಿಕೊಳ್ಳುವ ಸಮಾರಂಭದಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ, ಉಪಾಧ್ಯಕ್ಷ ನಟರಾಜು, ಶಾಸಕರಾದ ಅಡಗೂರು ಎಚ್.ವಿಶ್ವನಾಥ್, ಎಸ್.ಎ.ರಾಮದಾಸ್

ತನ್ವೀರ್ ಸೇಠ್, ಎಲ್.ನಾಗೇಂದ್ರ, ಹರ್ಷವರ್ಧನ, ಅನಿಲ್ ಚಿಕ್ಕಮಾದು, ಅಶ್ವಿನ್ ಕುಮಾರ್, ಮಹದೇವ್, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್, ಆರ್.ಧರ್ಮಸೇನ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿರುವರು.

 ವೆರೈಟಿ ಫುಡ್

ವೆರೈಟಿ ಫುಡ್

ಆನೆಗಳ ವಿಶೇಷ ಆಹಾರ ತಯಾರಿಕೆ ಅಡುಗೆ ಮನೆ ಸಹ ಅರಮನೆ ಅಂಗಳದಲ್ಲಿ ಸಿದ್ಧವಾಗಿದೆ. ಮಳೆಯಿಂದ ರಕ್ಷಣೆ ನೀಡಲು ಶೆಡ್ ಗಳನ್ನು ವಿಶೇಷವಾಗಿ ನಿರ್ಮಿಸಲಾಗಿದೆ. ಆನೆಗಳಿಗೆ ವೆರೈಟಿ ಫುಡ್ ಗಳನ್ನು ನೀಡಲು ತಯಾರಿ ಮಾಡಲಾಗಿದೆ.

English summary
District administration has prepared to welcome the gajapade today in palace premises on Tuesday. Thus Mysuru slowly prepare for the Dasara festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X